2ನೇ ತ್ತೈಮಾಸಿಕದಲ್ಲಿ ಉದ್ಯೋಗಕ್ಕೆ ಹೆಚ್ಚು ಭವಿಷ್ಯ


Team Udayavani, Jul 30, 2021, 7:00 AM IST

2ನೇ ತ್ತೈಮಾಸಿಕದಲ್ಲಿ ಉದ್ಯೋಗಕ್ಕೆ ಹೆಚ್ಚು ಭವಿಷ್ಯ

ಹೊಸದಿಲ್ಲಿ: ಸೋಂಕು ನಿಯಂತ್ರಣಕ್ಕಾಗಿ ಜಾರಿಯಾಗಿದ್ದ ಲಾಕ್‌ಡೌನ್‌ ವಾಪಸ್‌ ಪಡೆದ ಬಳಿಕ ಆರ್ಥಿಕ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿವೆ. ಉದ್ಯೋಗ ಕ್ಷೇತ್ರವೂ ಚೇತೋಹಾರಿಯಾಗಿದೆ. ಹಾಲಿ ತಿಂಗಳಿಂದ ಸೆಪ್ಟಂಬರ್‌ವರೆಗೆ ಹೊಸತಾಗಿ ಶಿಕ್ಷಣ ಪಡೆದವರಿಗೆ ಉದ್ಯೋಗ ಸಿಗುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಖಾಸಗಿ ಸಂಸ್ಥೆಯೊಂದು ನಡೆಸಿದ ಅಧ್ಯಯನದಲ್ಲಿ ದೃಢಪಟ್ಟಿದೆ.

ಹಾಲಿ ವಿತ್ತೀಯ ವರ್ಷದ 2ನೇ ತ್ತೈಮಾಸಿಕದಲ್ಲಿ  (ಜುಲೈ -ಸೆಪ್ಟಂಬರ್‌) ವಿವಿಧ ಕ್ಷೇತ್ರಗಳಲ್ಲಿನ ಪದವೀಧರ ರಿಗೆ ಹೊಸ ಉದ್ಯೋಗ ಸಿಗುವ ಪ್ರಮಾಣ ಶೇ.7ರಷ್ಟು ಅಧಿಕ. ಕೇವಲ ಆರಂಭಿಕ ಉದ್ಯೋಗ ಪಡೆಯುವವರಿಗೆ ಮಾತ್ರ ವಲ್ಲ, ಜೂನಿಯರ್‌ ಹಂತದ ಉದ್ಯೋಗ ಪಡೆಯು ವವರಿಗೂ ಹೆಚ್ಚಿನ ಅವಕಾಶಗಳಿವೆ.

1 ಲಕ್ಷ ಮಂದಿ ನೇಮಕ: ಅಮೆರಿಕದ ಮಾಹಿತಿ ತಂತ್ರಜ್ಞಾನ ಸಂಸ್ಥೆ ಕಾಗ್ನಿಜೆಂಟ್‌ ಪ್ರಸಕ್ತ ವರ್ಷ 1 ಲಕ್ಷ ಮಂದಿ ಅನುಭವಿ ವೃತ್ತಿಪರರನ್ನು ನೇಮಕ ಮಾಡಲು ಮುಂದಾಗಿದೆ. ಕಂಪೆನಿಯ ಒಟ್ಟು ಉದ್ಯೋಗಿಗಳ ಪೈಕಿ ಭಾರತದಲ್ಲಿಯೇ ಮೂರ ನೇ ಎರಡರಷ್ಟು ಮಂದಿ ಇದ್ದಾರೆ. ಈ ಬಗ್ಗೆ ಮಾತನಾಡಿದ ಸಂಸ್ಥೆಯ ಸಿಇಒ ಬ್ರೈನ್‌ ಹಂಫೈರ್‌ “ಪ್ರಸಕ್ತ ವರ್ಷ 1 ಲಕ್ಷ ಮಂದಿಯನ್ನು ನೇಮಿಸಿಕೊಳ್ಳುವುದರ ಜತೆಗೆ 1 ಲಕ್ಷ ಮಂದಿ ಹಾಲಿ ಉದ್ಯೋಗಿಗಳಿಗೆ ತರಬೇತಿ ನೀಡಲಾಗು ತ್ತದೆ. ಇದಲ್ಲದೆ, 30 ಸಾವಿರ ಹೊಸತಾಗಿ ಎಂಜಿನಿಯರಿಂಗ್‌ ಶಿಕ್ಷಣ ಮುಗಿಸಿದವರನ್ನು, 2022ರಲ್ಲಿ 45 ಸಾವಿರ ಎಂಜಿನಿಯರಿಂಗ್‌ ಪದವೀಧರರಿಗೆ ಉದ್ಯೋಗ ನೀಡಲು ಮುಂದಾಗಿದ್ದೇವೆ’ ಎಂದಿದ್ದಾರೆ.

ಬೆಂಗಳೂರಲ್ಲೇ ಹೆಚ್ಚು  :

ಸಮೀಕ್ಷೆಯಲ್ಲಿ ಕಂಡುಬಂದ ಪ್ರಧಾನ ಅಂಶವೆಂದರೆ, ಬೆಂಗಳೂರಿನಲ್ಲೇ ಶೇ.60ರಷ್ಟು ಪ್ರಮಾಣದಲ್ಲಿ ನೇಮಕವಾಗಲಿದೆ. ಸಮೀಕ್ಷೆಯಲ್ಲಿ ಆಯ್ದುಕೊಂಡ ಐದು ನಗರಗಳ ಪೈಕಿ ಉದ್ಯಾನನಗರಿಗೇ ಹೆಚ್ಚಿನ ಅಂಕಗಳು ಬಂದಿವೆ. ಹೊಸದಿಲ್ಲಿÉಯಲ್ಲಿ ಶೇ.51, ಹೈದರಾಬಾದ್‌ನಲ್ಲಿ ಶೇ.41, ಚಂಡೀಗಢ ಶೇ.39, ಮುಂಬಯಿಯಲ್ಲಿ ಶೇ.37ರಷ್ಟು ನೇಮಕವಾಗಲಿದೆ.

ಯಾವ ಕ್ಷೇತ್ರಗಳಲ್ಲಿ? :

ಶೇ.60- ಆರೋಗ್ಯ ಮತ್ತು ಔಷಧೋದ್ಯಮ

ಶೇ.58- ಮಾಹಿತಿ ತಂತ್ರಜ್ಞಾನ

ಶೇ.53- ಇ-ಕಾಮರ್ಸ್‌ ಮತ್ತು ಟೆಕ್ನಾಲಜಿ ಸ್ಟಾರ್ಟಪ್‌

ಶೇ.51- ಗ್ರಾಹಕೋಪಯೋಗಿ ವಸ್ತುಗಳು

ಶೇ.50- ಕೃಷಿ ಮತ್ತು ಅದಕ್ಕೆ ಸಂಬಂಧಿತ ಕ್ಷೇತ್ರಗಳು

ಶೇ.48- ರಿಟೇಲ್‌

ಶೇ.44- ಸರಕು ಸಾಗಣೆ

ಶೇ.42- ದೂರಸಂಪರ್ಕ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.