![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 31, 2021, 5:47 PM IST
ಸುರಪುರ: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 4.17 ಲಕ್ಷ ಕ್ಯೂಸೆಕ್ ನೀರು ಹರಿಸಲಾಗುತ್ತಿರುವ ಪರಿಣಾಮ ಕೃಷ್ಣೆ ಭೋರ್ಗರೆಯುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರವಾಹದಿಂದ ನದಿ ತೀರದ ಗ್ರಾಮಗಳ ಜನರು ಅಕ್ಷರಶಃ ತತ್ತರಿಸಿದ್ದಾರೆ.
ಹೊಲ-ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಹೀಗಾಗಿ ಪ್ರವಾಹ ಪರಿಸ್ಥಿತಿ ಅವಲೋಕಿಸಲು ಕಂದಾಯ ಇಲಾಖೆ ಅಧಿ ಕಾರಿಗಳು ಹಗಲು-ರಾತ್ರಿ ನದಿ ದಂಡೆಯಲ್ಲಿ ನಿದ್ದೆಗೆಡು ವಂತಾಗಿದೆ. ಕಷ್ಟಪಟ್ಟು ಬೆಳೆದ ಬೆಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವುದನ್ನು ಕಣ್ಣಾರೆ ಕಂಡ ರೈತರು ಮಮ್ಮಲ ಮರುಗುತ್ತಿದ್ದಾರೆ. ದೇವಾಪುರದ ಹಿರೇಹಳ್ಳ ಭರ್ತಿಯಾಗಿ ಹರಿಯುತ್ತಿದೆ. ಜಮೀನುಗಳಲ್ಲಿ ಅಲ್ಲಲ್ಲಿ ಟೀನ್ ಶೆಡ್, ಜೋಪಡಿ ಹಾಕಿದ್ದ ಸಣ್ಣ ಪುಟ್ಟ ಕುಟುಂಬಗಳು ಮನೆ ತೊರೆಯುವ ಪರಿಸ್ಥಿತಿ ಬಂದೊದಗಿದೆ.
ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ನೇತೃತ್ವದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ತಂಡ ನದಿ ತೀರದ ಪ್ರದೇಶಗಳಿಗೆ ಶುಕ್ರವಾರವೂ ಭೇಟಿ ನೀಡಿ ಪರಿಶೀಲಿಸಿತು. ನದಿ ಸಮೀಪದ ಹೆಮನೂರು, ಶೆಳ್ಳಗಿ, ಮುಷ್ಠಳ್ಳಿ ಗ್ರಾಮಗಳ ಜಮೀನುಗಳಲ್ಲಿದ್ದ 15 ಕುಟುಂಬಗಳ ಸ್ಥಳಾಂತರಕ್ಕೆ ತಹಶೀಲ್ದಾರ್ ಕ್ರಮ ಕೈಗೊಂಡಿದ್ದಾರೆ. ನೀಲಕಂಠರಾಯನಗಡ್ಡಿ, ಬೆಂಚಿಗಡ್ಡಿ ಸೇತುವೆ ಬಂದ್ ಮಾಡಲಾಗಿದೆ. ಮೇಲಿನ ಗಡ್ಡಿ, ದೇವರಗಡ್ಡಿ ಸೇರಿದಂತೆ ಮೂರ್ನಾಲ್ಕು ಗಡ್ಡಿಗಳಲ್ಲಿನ ಜನರನ್ನು ತೆರವುಗೊಳಿಸಲಾಗಿದೆ. ತಿಂಥಣಿಗೆ ಒಳ ಹೋಗುವ ರಸ್ತೆ, ಕರ್ನಾಳ ರಸ್ತೆ, ಹೆಮನೂರ ಗ್ರಾಮಗಳ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ.
ಮುಳುಗಿದ ಜಾಕ್ವೆಲ್: ಸುರಪುರ ನಗರಕ್ಕೆ ನೀರು ಸರಬರಾಜು ಮಾಡುವ ಶೆಳ್ಳಗಿ ಜಾಕ್ವೆಲ್ ಕೃಷ್ಣೆ ಪ್ರವಾಹದಲ್ಲಿ ಮುಳುಗಿದೆ. ಇದರಿಂದ ನಗರಕ್ಕೆ ನೀರು ಸರಬರಾಜು ಸ್ಥಗಿತಗೊಂಡಿದ್ದು, ನಾಗರಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜೂ.1ರಿಂದ ಅತಿವೃಷ್ಟಿ ಮತ್ತು ಪ್ರವಾಹದಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ ಅಪಾರ ಬೆಳೆ ನಷ್ಟವಾಗಿದೆ. ಸುರಪುರ-ಅಂದಾಜು 400, ಹುಣಸಗಿ-40.77 ಸೇರಿ ಅಂದಾಜು ಸಾವಿರ ಹೆಕ್ಟೇರ್ ಬೆಳೆ ನಷ್ಟವಾಗಿರಬಹುದು. ಇದುವರೆಗಿನ ಮಾಹಿತಿ ಪ್ರಕಾರ 30 ಮನೆ ಜಖಂಗೊಂಡಿವೆ. 40 ವಿದ್ಯುತ್ ಕಂಬಗಳು, 3 ವಿದ್ಯುತ್ ಪರಿವರ್ತಕಗಳು ಸುಟ್ಟಿದ್ದು, ಅಂದಾಜು 7 ಕಿ.ಮೀ ವಿದ್ಯುತ್ ತಂತಿ ಹಾಳಾಗಿದೆ ಎಂದು ಅಂದಾಜಿಸಲಾಗಿದೆ. ಬೆಳೆ ನಷ್ಟ ಕುರಿತು ಕೃಷಿ, ರಸ್ತೆ ಸೇತುವೆಗಳ ಕುರಿತು ಲೋಕೋಪಯೋಗಿ, ವಿದ್ಯುತ್ ನಷ್ಟದ ಬಗ್ಗೆ ಜೆಸ್ಕಾಂ ಇಲಾಖೆ ಎಲ್ಲ ಇಲಾಖೆಗಳಿಂದ ಸಮಗ್ರ ವರದಿ ಬರಕೇಕಿದೆ ಎಂದು ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ತಿಳಿಸಿದ್ದಾರೆ.
*ಸಿದ್ದಯ್ಯ ಪಾಟೀಲ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.