ಟಿಸಿ ಇಲ್ಲದೆ ಸರಕಾರಿ ಶಾಲೆಗೆ ಸೇರುತ್ತಿರುವ ಮಕ್ಕಳು!


Team Udayavani, Aug 5, 2021, 8:00 AM IST

ಟಿಸಿ ಇಲ್ಲದೆ ಸರಕಾರಿ ಶಾಲೆಗೆ ಸೇರುತ್ತಿರುವ ಮಕ್ಕಳು!

ಕುಂದಾಪುರ: ಕೊರೊನಾದಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಭೌತಿಕ ತರಗತಿಗಳು ನಡೆಯದೆ, ಪಾಲಕರಿಗೆ ಆರ್ಥಿಕ ಹೊಡೆತವೂ ಇರುವ ಕಾರಣದಿಂದ ಸರಕಾರಿ ಶಾಲೆಗಳತ್ತ ಮುಖ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕಲಿಯುತ್ತಿದ್ದ ಶಾಲೆಗೆ ಮಾಹಿತಿಯೇ ಕೊಡದೆ, ಟಿಸಿ (ವರ್ಗಾವಣೆ ಪ್ರಮಾಣಪತ್ರ) ಇಲ್ಲದೆ ಸರಕಾರಿ ಶಾಲೆಗೆ ಸೇರುತ್ತಿದ್ದಾರೆ.

ವಿಳಂಬ:

ಎಲ್ಲವೂ ಸರಿಯಾಗಿದ್ದರೆ ಆ.2 ರಿಂದಲೇ ಭೌತಿಕ ತರಗತಿಗಳು ಆರಂಭ ವಾಗಬೇಕಿತ್ತು. ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆ, ಕಾರ್ಯ ಯೋಜನೆ  ನಡೆಸಿತ್ತು. ಕೊರೊನಾ ಮೂರನೇ ಅಲೆಯ ಭೀತಿ ಯಿಂದಾಗಿ ವಿಳಂಬವಾಗಿದೆ. ಯಾವಾಗ ಮುಖಾಮುಖೀ ತರಗತಿ ಆರಂಭವಾಗಲಿದೆ ಎನ್ನುವುದೇ  ನಿಖರವಾಗಿಲ್ಲ.

ತರಗತಿ:

ಟಿವಿಗಳಲ್ಲಿ ಸಂವೇದ ತರಗತಿ ಆರಂಭವಾಗಿದೆ. ವಾಟ್ಸ್‌ಆ್ಯಪ್‌ ಮೂಲಕ ಪಠ್ಯ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಬೋಧನ ಸಾಮಗ್ರಿ ಪೂರೈಕೆ, ಪಠ್ಯಗಳ ಪೂರೈಕೆ, ಪಾಠ ಪ್ರವಚನ ಪೂರೈಕೆ ಜಾಲತಾಣದ ಮೂಲಕವೇ ಮಾಡಲಾಗುತ್ತಿದೆ. ಜಾಲತಾಣಗಳಿಲ್ಲದ ಮನೆಯ ವರಿಗೆ ಟಿವಿ ಮೂಲಕ ಬೋಧಿಸ ಲಾಗುತ್ತಿದೆ. ಟಿವಿಯೂ ಇಲ್ಲ, ಜಾಲತಾಣವೂ ಇಲ್ಲದಂತಹ ಮಕ್ಕಳಿಗೆ ಶಿಕ್ಷಕರೇ ತೆರಳಿ ತಮ್ಮ ಮೊಬೈಲ್‌ ಮೂಲಕ ಪಾಠಗಳನ್ನು ತೋರಿಸುವ ಬೋಧನ ಕ್ರಮ ವೂ ಕೆಲವೆಡೆ ನಡೆಯುತ್ತಿದೆ.

ಟಿಸಿ ಇಲ್ಲ :

ಕಲಿಯುತ್ತಿರುವ ಶಾಲೆಗೆ ಮಾಹಿತಿ ನೀಡದೆ, ವರ್ಗಾವಣೆ ಪ್ರಮಾಣಪತ್ರ ಪಡೆಯದೆ ಸರಕಾರಿ ಶಾಲೆಗೆ ಸೇರಿಸಲಾಗುತ್ತಿದೆ. ಇದರಿಂದ ಕಂಗಾಲಾದ ಖಾಸಗಿ ಶಾಲೆಗಳು ಟಿಸಿ ನೀಡುತ್ತಿಲ್ಲ. ಚೈಲ್ಡ್‌ ಹೆಲ್ಪ್ ಲೈನ್‌ಗೆ ಇಂತಹ ಅನೇಕ ದೂರುಗಳು ಬರುತ್ತಿದ್ದು ಶಿಕ್ಷಣ ಇಲಾಖೆ ಕ್ರಮಕೈಗೊಳ್ಳುತ್ತಿದೆ. ಒಂದೇ ತಿಂಗಳ ಅವಧಿಯಲ್ಲಿ ಮೂರು ನೋಟಿಸ್‌ ನೀಡಿ, ಆಗಲೂ ಟಿಸಿ ನೀಡದೆ ಇದ್ದರೆ ಆನ್‌ಲೈನ್‌ ಮೂಲಕ ಇಲಾಖೆಯೇ ಟಿಸಿ ನೀಡಲು ಕ್ರಮ ವಹಿಸಲಾಗುತ್ತಿದೆ. ಇದು ಈಚಿನ ದಿನಗಳಲ್ಲಿ ಕ್ರಾಂತಿಕಾರಕ ಹಾಗೂ ಹೊಸ ಬೆಳವಣಿಗೆ. ಅಷ್ಟಲ್ಲದೆ ಶುಲ್ಕದ ಕುರಿತು ಶಾಲೆಗಳ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಇಲಾಖೆಯಿಂದ ಶಾಲೆಗಳಿಗೆ ತೆರಳಿ ಪರಿಶೀಲನೆಯೂ ನಡೆಯಲಿದೆ. ಹೀಗೆ ಖಾಸಗಿಯಿಂದ ಸರಕಾರಿ ಶಾಲೆಗೆ ಕಳೆದ ವರ್ಷ 5 ಶೇ., ಈ ವರ್ಷ ಇನ್ನೂ ಹೆಚ್ಚು ಮಕ್ಕಳು ಸೇರಿದ್ದಾರೆ.

ಖಾಸಗಿಯಿಂದ ಸರಕಾರಿ ಶಾಲೆಯತ್ತ :

ಖಾಸಗಿ ಆಂಗ್ಲಮಾಧ್ಯಮ ಶಾಲೆಗಳಿಂದ ಸರಕಾರಿ ಶಾಲೆಗೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಆಯ್ದ ಸರಕಾರಿ ಶಾಲೆಗಳಲ್ಲೂ  ಇಂಗ್ಲಿಷ್‌ ಮೀಡಿಯಂ ಅನ್ನು ನಿಶುÏಲ್ಕವಾಗಿ ಬೋಧಿಸುತ್ತಿರುವ ಕಾರಣ ಹೆತ್ತ ವರು ಈ ಆಯ್ಕೆ ಮಾಡುತ್ತಿದ್ದಾರೆ. ಶಾಲಾ ಬಸ್‌, ಯೂನಿಫಾರಂ, ಖಾಸಗಿ ಶಾಲೆ ಎಂಬ ಯಾವುದೇ ಭೇದ ಭಾವ ಇಲ್ಲದೆ ಈಗ ಎಲ್ಲವೂ ಆನ್‌ಲೈನ್‌ ಮೂಲಕವೇ ನಡೆಯುತ್ತಿರುವ ಕಾರಣ ಹಮ್ಮುಬಿಮ್ಮಿಗೂ ಅವಕಾಶ ಇಲ್ಲ. ಕೆಲವು ಖಾಸಗಿ ಶಾಲೆಗಳು ಶುಲ್ಕ ಕ್ಕಾಗಿ ಪೀಡೆ ಕೊಡುತ್ತಿರುವುದು ಕೂಡ ಸರಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಕಾರಣ ಎನ್ನಲಾಗಿದೆ.

ಶುಲ್ಕ ಕೊಡದ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿ ಮುಂದಿನ ತರಗತಿಗೆ ಹಾಕದಿರುವುದು, ಶುಲ್ಕ ಕೊಡದವರ ಹೆಸರನ್ನು ವಾಟ್ಸ್‌ಆ್ಯಪ್‌ ಗ್ರೂಪ್‌ಗ್ಳಲ್ಲಿ ಹಾಕುವುದು, ಆನ್‌ಲೈನ್‌ ತರಗತಿ ನಡೆಯುವಾಗ ಶುಲ್ಕ ಬಾಕಿ ಇರಿಸಿಕೊಂಡವರ ಹೆಸರು ಓದಿ ಹೇಳುವುದು, ಅಂತಹ ವಿದ್ಯಾರ್ಥಿಗೆ ಆನ್‌ಲೈನ್‌ ಬೋಧನೆ ಮಾಡದಿರುವುದು, ವಾಟ್ಸ್‌ಆ್ಯಪ್‌ ಗ್ರೂಪ್‌ಗ್ಳಿಂದ ಪ್ರತ್ಯೇಕ ಇಡುವಂತಹ  ತಂತ್ರಗಾರಿಕೆ ಮಾಡುತ್ತಿವೆ ಎಂಬ ಆರೋಪಗಳಿವೆ. ಕೆಲವು ಶಾಲೆಗಳು ಬೋಧನ ಶುಲ್ಕದಲ್ಲಿ ಕಡಿತ, ರಿಯಾಯಿತಿ ಘೋಷಿಸಿದ್ದರೆ ಕೆಲವರು ಪೂರ್ಣ ಶುಲ್ಕ ಅಥವಾ ಏರಿಸಿದ ಮೊತ್ತ ಪಡೆಯುತ್ತಿದ್ದಾರೆ. ಇಂತಹ ಕೆಲವೇ ಕೆಲವು ಶಾಲೆಗಳಿಂದಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವ ಹಿಸುತ್ತಿರುವ ಇತರ ಖಾಸಗಿ ಶಾಲೆಗಳಿಗೂ ಕೆಟ್ಟ ಹೆಸರು ಬಂದಿದೆ.

ದಾಖಲಾತಿ :

ಕುಂದಾಪುರ ತಾ|ನಲ್ಲಿ ಸರಕಾರಿ ಶಾಲೆಗಳಿಗೆ ಎಲ್‌ಕೆಜಿಗೆ 68, ಯುಕೆಜಿಗೆ 92, 1ನೇ ತರ ಗ ತಿಗೆ 1,289, 10ನೇ ತರಗತಿವರೆಗೆ ಒಟ್ಟು 13,397, ಅನುದಾನಿತ ಶಾಲೆಗಳಿಗೆ 2,594, ಅನುದಾನ ರಹಿತ ಶಾಲೆಗಳಿಗೆ 10,372, ವಸತಿ ಶಾಲೆಗಳಿಗೆ 296 ಮಕ್ಕಳ ಸೇರ್ಪಡೆ ಯಾಗಿದೆ. ಕಳೆದ ವರ್ಷ ಒಟ್ಟು  28,524 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿ ದ್ದರು. ಈ ವರ್ಷ ಆಗಸ್ಟ್‌ ತಿಂಗಳ ಕೊನೆವರೆಗೆ ದಾಖಲಾತಿ ಪ್ರಕ್ರಿಯೆ ನಡೆಯ ಲಿದೆ. ಅನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ.

ಸ್ಮಾರ್ಟ್‌ಫೋನ್‌ ಅಭಿಯಾನ :

ತಾಲೂಕಿನಲ್ಲಿ 109 ಮಕ್ಕಳಿಗೆ ಟಿವಿ ಹಾಗೂ ಸ್ಮಾರ್ಟ್‌ ಫೋನ್‌ ಸೌಲಭ್ಯ ಇಲ್ಲ. ಇಂತಹವರಿಗೆ ದಾನಿಗಳಿಂದ, ಶಿಕ್ಷಕರಿಂದ ಸ್ಮಾರ್ಟ್‌ಫೋನ್‌ ಸಂಗ್ರಹಿಸಿ ನೀಡುವ ಅಭಿಯಾನ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರ ಮೂಲಕ ನಡೆಯುತ್ತಿದೆ.

ದಾಖಲಾತಿ ಪ್ರಕ್ರಿಯೆ ಆಗಸ್ಟ್‌ ಕೊನೆವರೆಗೆ ನಡೆಯಲಿದೆ. ಟಿಸಿ ಇಲ್ಲದೆ ಸೇರುವ ವಿದ್ಯಾರ್ಥಿಗಳ ದೂರನ್ನು ಪರಿಶೀಲಿಸಿ ನೋಟಿಸ್‌ ನೀಡಿ, ಆನ್‌ಲೈನ್‌ ಮೂಲಕ ಟಿಸಿ ಕೊಡಿಸಲಾಗುತ್ತಿದೆ. ಟಿವಿ, ವಾಟ್ಸ್‌ಆ್ಯಪ್‌ ಮೂಲಕ ಪಠ್ಯ ಚಟುವಟಿಕೆ ನಡೆಸಲಾಗುತ್ತಿದೆ. -ಎಸ್‌. ಕೆ. ಪದ್ಮನಾಭ , ಕ್ಷೇತ್ರ ಶಿಕ್ಷಣಾಧಿಕಾರಿ, ಕುಂದಾಪುರ

 

-ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.