![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 5, 2021, 1:18 PM IST
ವಿರಾರ್: ತಂದೆಯ ಶವವನ್ನು ಕೊರೊನಾ ನಿರ್ಬಂಧದ ಭಯದಿಂದ ಮನೆಯಲ್ಲೇ ಅಡಗಿಸಿಟ್ಟ ಇಬ್ಬರು ಸಹೋದರಿಯರು ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದು, ಓರ್ವಳನ್ನು ರಕ್ಷಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಆಗುಂಬೆ: ಪ್ರಪಾತದತ್ತ ನುಗ್ಗಿದ ಟ್ರಕ್, ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರಿ ದುರಂತ
ಅವಿವಾಹಿತ ಹೆಣ್ಣು ಮಕ್ಕಳು
ವಿರಾರ್ ಪಶ್ಚಿಮದ ಅಗರವಾಲ್ನ ಗೋಕುಲ್ ಟೌನ್ಶಿಪ್ನಲ್ಲಿರುವ ಬ್ರೂಕ್ಲಿನ್ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದ ಮೃತ ಹರಿದಾಸ್ ಸಹಾರ್ಕರ್(72) ಅವರಿಗೆ
ವಿದ್ಯಾ (40) ಮತ್ತು ಸ್ವಪ್ನಾಲಿ (36) ಎಂಬ ಇಬ್ಬರು ಅವಿವಾಹಿತ ಹೆಣ್ಣು ಮಕ್ಕಳಿದ್ದು, ಸಹೋದರಿಯರು ತಮ್ಮ ತಂದೆಯ ಸಾವಿಗೆ ಕೊರೊನಾ ಕಾರಣ ಎಂದು ಅಪಾರ್ಥ ಮಾಡಿಕೊಂಡು, ಹೊರ ಪ್ರಪಂಚಕ್ಕೆ ತಿಳಿದರೆ ಅಧಿಕಾರಿಗಳು ಎಲ್ಲರನ್ನೂ ನಿರ್ಬಂಧಿಸುತ್ತಾರೆ ಎಂದು ಹೆದರಿ ತಮ್ಮ ತಂದೆಯ ಶವವನ್ನು ಮನೆಯಲ್ಲಿ ಅಡಗಿಸಿಟ್ಟಿದ್ದರು.
ಸಮುದ್ರಕ್ಕೆ ಹಾರಿ ಆತ್ಮಹತ್ಯೆ
ಇದರಿಂದ ಭಯ ಹಾಗೂ ಖಿನ್ನತೆಗೊಳಗಾದ ವಿದ್ಯಾ ಮಂಗಳವಾರ ಸಂಜೆ ನವಪುರ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬುಧವಾರ ಬೆಳಗ್ಗೆ ತಂಗಿ ಸ್ವಪ್ನಾಲಿ ಕೂಡ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ದೋಣಿ ವಿಹಾರ ನಡೆಸುತ್ತಿದ್ದ ನಾಗರಿಕರು ಮತ್ತು ಸ್ಥಳೀಯ ಪೊಲೀಸರು ಅವಳನ್ನು ರಕ್ಷಿಸಿದರು. ಸ್ಥಳೀಯ ಪೊಲೀಸರು ಆಕೆಯನ್ನು ವಿಚಾರಣೆಗೊಳಪಡಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.