ಸೋಂಕಿತರಿಗೆ ಕೇರ್‌ ಸೆಂಟರ್‌ನಲ್ಲಿ ಚಿಕಿತ್ಸೆ


Team Udayavani, Aug 8, 2021, 12:50 AM IST

ಸೋಂಕಿತರಿಗೆ ಕೇರ್‌ ಸೆಂಟರ್‌ನಲ್ಲಿ ಚಿಕಿತ್ಸೆ

ಉಡುಪಿ: ಕೊರೊನಾ ನಿಯಂತ್ರಣಕ್ಕಾಗಿ ಸೋಂಕಿತರಿಗೆ ಇನ್ನು ಮುಂದೆ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ (ಸಿಸಿಸಿ) ಚಿಕಿತ್ಸೆ ನೀಡಲು ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ಶನಿವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಕೋವಿಡ್‌ 19 ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಿರ್ಣಯ ತಳೆದಿದೆ.

10 ದಿನಗಳ ಹಿಂದೆ 1,368 ಸಕ್ರಿಯ ಪ್ರಕರಣ ಗಳಿದ್ದವು. ಸೋಂಕು ಹೆಚ್ಚುತ್ತಿದೆ. 1,408 ಸೋಂಕಿತರಲ್ಲಿ 139 ಮಂದಿ ಆಸ್ಪತ್ರೆಗಳಲ್ಲಿ, 12 ಮಂದಿ ಸಿಸಿಸಿಗಳಲ್ಲಿ, ಉಳಿದ 1,257 ಮಂದಿ ಹೋಂ ಐಸೊಲೇಶನ್‌ನಲ್ಲಿದ್ದಾರೆ. ಎಲ್ಲ ಸೋಂಕಿತರನ್ನೂ ಸಿಸಿಸಿಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲು ಸೋಂಕಿತರು ಮತ್ತು ಮನೆಯವರು ಸಹಕರಿಸಬೇಕು ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

ಮೈಕ್ರೋ ಕಂಟೈನ್ಮೆಂಟ್ ಝೋನ್ :

ಮಣಿಪಾಲ ಎಂಐಟಿ, ಕಾರ್ಕಳದ ಮಿಯಾರು, ಕುಂದಾಪುರದ ಹಳೆಯ ಆದರ್ಶ ಆಸ್ಪತ್ರೆ, ನಿಟ್ಟೆ, ಹೆಬ್ರಿ  ಮೊದಲಾದೆಡೆ ಸಿಸಿಸಿ ಆರಂಭಿಸಲಾಗಿದೆ. ಸಿಸಿಸಿಯಲ್ಲಿ ಒಟ್ಟು 2,000 ಬೆಡ್‌ ವ್ಯವಸ್ಥೆ ಮಾಡಲಾಗು ವುದು ಎಂದರು.

ಆಗಸ್ಟ್ನಲ್ಲಿ 50 ಐಸಿಯು ಬೆಡ್ ಸಿದ್ಧ:

2ನೇ ಅಲೆಯಲ್ಲಿ ಸೋಂಕು ಕಡಿಮೆ ಇದ್ದ ಗ್ರಾ.ಪಂ.ಗಳಲ್ಲಿ ಈ ಬಾರಿ ಹೆಚ್ಚಾಗಿರುವುದು ಕಂಡುಬಂದಿದೆ. ಆಗಸ್ಟ್‌ ಅಂತ್ಯದೊಳಗೆ ಕಾರ್ಕಳ- ಕುಂದಾಪುರದಲ್ಲಿ ತಲಾ 15, ಜಿಲ್ಲಾಸ್ಪತ್ರೆಯಲ್ಲಿ 20 ಮಕ್ಕಳ ಐಸಿಯು ಬೆಡ್‌ಗಳನ್ನು ನಿರ್ಮಿಸಲಾಗುವುದು ಎಂದರು.

34,000 ಎರಡನೇ ಡೋಸ್ ಬಾಕಿ:

ಜಿಲ್ಲೆಯಲ್ಲಿ 2ನೇ ಡೋಸ್‌ ಲಸಿಕೆ ತೆಗೆದುಕೊಳ್ಳಲು 34,000 ಜನರಿದ್ದಾರೆ. ಮೊದಲ ಡೋಸ್‌ ತೆಗೆದುಕೊಂಡವರು ಜಿಲ್ಲೆಯಲ್ಲಿ ಶೇ. 64 ಇದ್ದು ರಾಜ್ಯದಲ್ಲಿ 2ನೇ ಸ್ಥಾನದಲ್ಲಿದ್ದೇವೆ. 2ನೇ ಡೋಸ್‌ ತೆಗೆದುಕೊಂಡವರಲ್ಲಿ ಮೊದಲ ಸ್ಥಾನದಲ್ಲಿದ್ದೇವೆ. ಆದಷ್ಟು ಹೆಚ್ಚಿಗೆ ಲಸಿಕೆ ಪಡೆಯಲು ರಾಜ್ಯ ಮಟ್ಟದ ಅಧಿಕಾರಿಗಳ ಜತೆ ಮಾತನಾಡುತ್ತೇನೆ ಎಂದರು.

48 ಗಂಟೆಯೊಳಗೆ ಪರಿಹಾರ:

ತೌಖ್ತೆ ಚಂಡಮಾರುತದ ವೇಳೆ ಹಾನಿಗೀಡಾದ ಪ್ರದೇಶಗಳ ಯಥಾಸ್ಥಿತಿಗೆ ಸುಮಾರು 100 ಕೋ. ರೂ. ಯೋಜನೆ ಸಿದ್ಧಪಡಿಸಿದ್ದು ಕೇಂದ್ರ ಸರಕಾರಕ್ಕೆ  ಸಲ್ಲಿಸುತ್ತೇವೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಜಿಲ್ಲಾಡಳಿತದಲ್ಲಿ 11 ಕೋ.ರೂ. ಇದೆ. ಹಾನಿಗೊಳ ಗಾಗಿ 48 ಗಂಟೆಗಳೊಳಗೆ ಪರಿಹಾರ ನೀಡುವಂತೆ ತಹಶೀಲ್ದಾರರಿಗೆ ತಿಳಿಸಿದ್ದೇವೆ ಎಂದರು.

ಶಾಸಕರಾದ ಕೆ. ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಬಿ.ಎಂ. ಸುಕುಮಾರ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಡಿಸಿ ಜಿ. ಜಗದೀಶ್‌, ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ಎಸ್‌ಪಿ ವಿಷ್ಣುವರ್ಧನ್‌, ಎಡಿಸಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

ಸಚಿವರ ಸ್ವಯಂ ನಿರ್ಬಂಧ :

ಕೊರೊನಾ ನಿಯಂತ್ರಣಕ್ಕಾಗಿ ಪ್ರವಾಸಿ ತಾಣಗಳಲ್ಲಿ ಕಠಿನ ನಿರ್ಬಂಧ ಜಾರಿಗೊಳಿಸಲಾಗುವುದು. ದೇವಸ್ಥಾನಗಳಲ್ಲಿಯೂ ಸ್ವಯಂ ನಿರ್ಬಂಧ ಹೇರಿಕೊಳ್ಳಬೇಕಾಗಿದೆ. ನಿನ್ನೆ ಅಭಿನಂದನೆ ನಡೆದಿದೆ. ಇನ್ನು ಮುಂದೆ ಯಾವುದೇ ಅಭಿನಂದನೆ ಬೇಡ. ನಾನೇ ಸ್ವಯಂ ಅನುಶಾಸನಕ್ಕೆ ಒಳಗಾಗಿದ್ದೇನೆ ಎಂದು ಸುನಿಲ್‌ ಕುಮಾರ್‌ ಹೇಳಿದರು.

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.