ಅದಲು ಬದಲು ಲಸಿಕೆ ಸ್ವೀಕಾರ ಮಾಡಬಹುದು.!? : ಐಸಿಎಂಆರ್ ವರದಿ : ಈ ಬಗ್ಗೆ WHO ಏನ್ ಹೇಳಿದೆ..?
Team Udayavani, Aug 8, 2021, 4:25 PM IST
ನವ ದೆಹಲಿ : ಭಾರತದಲ್ಲಿ ಲಭ್ಯವಿರುವ ಕೋವಿಡ್ -19 ಲಸಿಕೆಗಳಾದ ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳ ಅದಲು ಬದಲು ಪ್ರಮಾಣ ಪಡೆದುಕೊಂಡರೂ ಕೂಡ ಸೋಂಕಿನ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಉತ್ತಮ ಫಲಿತಾಂಶಗಳನ್ನು ತೋರಿಸಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಅಧ್ಯಯನ ತಿಳಿಸಿದೆ.
ಉತ್ತರಪ್ರದೇಶದಲ್ಲಿ ಮೇ ಹಾಗೂ ಜೂನ್ ನಡುವನಲ್ಲಿ ಈ ಅಧ್ಯಯನವನ್ನು ಮಾಡಲಾಯಿತು. ಕೋವಿಡ್ ಸೋಂಕಿನ ಯಾವುದೇ ರೂಪಾಂತರಿಯ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಿ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದೆ.
ಇದನ್ನೂ ಓದಿ : ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಆದೇಶವನ್ನು ಕೂಡಲೇ ಹಿಂಪಡೆಯಬೇಕು: ಸಿದ್ದರಾಮಯ್ಯ
ಈ ರೀತಿಯ ಅದಲು ಬದಲು( ಕೋವ್ಯಾಕ್ಸಿನ್ / ಕೋವಿಶೀಲ್ಡ್ ) ಲಸಿಕೆಗಳನ್ನು ಸ್ವೀಕಾರ ಮಾಡುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಕೂಡ ಅಧ್ಯಯನ ವರದಿ ತಿಳಿಸದೆ. ನಿರ್ದಿಷ್ಟ ಲಸಿಕೆಗಳ ಕೊರತೆಯ ಸವಾಲುಗಳಿಂದ ಹೊರಬರಲು ಕೂಡ ಈ ವರದಿ ಸಹಾಯ ಮಾಡಲಿದೆ.
ಜುಲೈ 30 ರಂದು, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್ಸಿಒ) ನ ವಿಷಯ ತಜ್ಞರ ಸಮಿತಿಯು ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳ ಮಿಶ್ರಣ ಡೋಸ್ಗಳ ಕುರಿತು ಅಧ್ಯಯನ ನಡೆಸಲು ಶಿಫಾರಸು ಮಾಡಿತ್ತು. ಉತ್ತರ ಪ್ರದೇಶದನ್ನು ಮಾತ್ರ ಈ ಅಧ್ಯಯನಕ್ಕೆ ಒಳಪಡಿಸಿಕೊಂಡಿದ್ದರಿಂದ ಈ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನವನ್ನು ಐಸಿಎಂಆರ್ ಮಾಡಬೇಕಿದೆ.
ವಿಶ್ವ ಆರೋಗ್ಯ ಸಂಸ್ಥೆ ಈ ಬಗ್ಗೆ ಏನ್ ಹೇಳಿದೆ..?
ಕಳೆದ ಜಲೈ ನ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್, ಅದಲು ಬದಲು ಲಸಿಕೆಗಳ ಸ್ವೀಕಾರ ಅಡ್ಡ ಪರಿಣಾಮ ಬೀರಬಹುದು. ಬೇರೆ ಬೇರೆ ಸಂಸ್ಥೆಗಳಿಂದ ಉತ್ಪಾದನೆಯಾಗುವುದರಿಂದ ಇದು ಅಪಾಯಕಾರಿ ಎಂದು ಹೇಳಿದ್ದರು.
ಇದನ್ನೂ ಓದಿ : ಗೋವಾ ವಾಸ್ಕೊ ವಿಮಾನ ನಿಲ್ದಾಣದಿಂದ ಯುಎಇ ವಿಮಾನ ಹಾರಾಟ ಆರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.