ನಂದಿಬೆಟ್ಟಕ್ಕೆ ನಿರ್ಬಂಧ; ಅವುಲಬೆಟ್ಟದತ್ತ ಪ್ರವಾಸಿಗರು

ಪ್ರಾಕೃತಿಕ ಸೌಂದರ್ಯ ಸವಿದು ವಾರಾಂತ್ಯ ಕಳೆದ ಪ್ರವಾಸಿಗರು; ಸ್ಥಳೀಯರಲ್ಲಿ ಕೋವಿಡ್‌ 3ನೇ ಅಲೆ ಭೀತಿ

Team Udayavani, Aug 9, 2021, 3:55 PM IST

ನಂದಿಬೆಟ್ಟಕ್ಕೆ ನಿರ್ಬಂಧ; ಅವುಲಬೆಟ್ಟದತ್ತ ಪ್ರವಾಸಿಗರು

ಗುಡಿಬಂಡೆ ತಾಲೂಕಿನ ಆವುಲಬೆಟ್ಟದ ಮೇಲೆ ಪ್ರವಾಸಿಗರ ದಂಡು.

ಗುಡಿಬಂಡೆ: ಜಿಲ್ಲೆಯ ಪ್ರಸಿದ್ಧ ಗಿರಿಧಾಮ ನಂದಿಬೆಟ್ಟಕ್ಕೆ ವಾರಾಂತ್ಯದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಏರಿರುವುದರಿಂದ, ಹತ್ತಿರದ ಆವುಲಬೆಟ್ಟಕ್ಕೆ,
ಸುರಸದ್ಮಗಿರಿ ಬೆಟ್ಟ, ವಾಟದಹೊಸಹಳ್ಳಿ ಕೆರೆಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಕೋವಿಡ್‌ 3ನೇ ಅಲೆಯ ಆತಂಕ ಎದುರಾಗಿದೆ.

ಕೋವಿಡ್‌ ಮೂರನೇ ಅಲೆ ಸೋಂಕು ಈಗಾಗಲೇ ನೆರೆಯ ರಾಜ್ಯಗಳಲ್ಲಿ ಕಾಣಿಸಿಕೊಂಡು ಕರ್ನಾಟಕಕ್ಕೂ ವಿಸ್ತರಿಸುತ್ತಿರುವ ಸಮಯದಲ್ಲೇ ಆಯಾ  ಜಿಲ್ಲೆಯ ಜಿಲ್ಲಾಧಿಕಾರಿಗಳು, ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಏರಿ ಆದೇಶ ಹೊರಡಿಸಿದ್ದಾರೆ.

ನಂದಿ ಬೆಟ್ಟಕ್ಕೆ ನಿರ್ಬಂಧ: ಅದರಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್‌.ಲತಾ ಅವರು ಕೋವಿಡ್‌ ಹೆಚ್ಚಾಗದಂತೆ ಸೂಕ್ತ ಕ್ರಮವಹಿಸುವ ನಿಟ್ಟಿನಲ್ಲಿ ಈಗಾಗಲೇ ಸ್ಥಳೀಯ ಸಂಸ್ಥೆ ಅಧಿಕಾರಿಗಳ ಜೊತೆ ಸಂವಾದ ನಡೆಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಹಾಗೆಯೇ ನಂದಿ ಬೆಟ್ಟಕ್ಕೆ ವಾರಾಂತ್ಯದಲ್ಲಿ ಪ್ರವಾಸಿಗರ ಭೇಟಿಗೆ ನಿರ್ಬಂಧ ಏರಿದ್ದಾರೆ.

ಇದನ್ನೂ ಓದಿ:ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಶೇಕಡಾ 99.9 ವಿದ್ಯಾರ್ಥಿಗಳು ಪಾಸ್, ಓರ್ವ ಮಾತ್ರ ಫೇಲ್

ಅವುಲಬೆಟ್ಟಕ್ಕೆ ಭೇಟಿ: ಬೆಂಗಳೂರಿನಿಂದ ಕೂಗಳತೆಯ ದೂರದಲ್ಲಿರುವ ಜಿಲ್ಲೆಯ ನಂದಿಬೆಟ್ಟ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಆದರೆ,
ವಾರಾಂತ್ಯದಲ್ಲಿ ನಿರ್ಬಂಧ ಏರಿರುವ ವಿಷಯ ತಿಳಿಯದ ಪ್ರವಾಸಿಗರು ಅಲ್ಲಿಗೆ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದಾರೆ. ನಿರ್ಬಂಧದ
ವಿಷಯ ತಿಳಿದ ನಂತರ ಬಂದ ದಾರಿಗೆ ಸುಂಕವಿಲ್ಲ ‌ ವೆಂಬಂತೆ ವಾಪಸ್‌ ಆಗುವುದು ಏಕೆ ಎಂದು, ನಂದಿ ಬೆಟ್ಟದ ಹತ್ತಿರುವ ಇರುವ ಅವುಲ
ಬೆಟ್ಟ, ಸುರಸದ್ಮಗಿರಿ ಮತ್ತು ವಾಟದ ಹೊಸಹಳ್ಳಿಯ ಕೆರೆಗೆ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಪ್ರಾಕೃತಿಕ ಸೌಂದರ್ಯ ಸವಿದು ಸಂಭ್ರಮಿಸಿದ್ದರು‌ .

ಬೆಟ್ಟದ ಮೇಲಕ್ಕೆ ನಿರ್ಬಂಧ: ಅವುಲಬೆಟ್ಟಕ್ಕೆ ದಿನೇ ದಿನೆ ಪ್ರವಾಸಿಗರು ಹೆಚ್ಚಾಗುತ್ತಿದ್ದ ಕಾರಣ ಬೆಟ್ಟದ ಬುಡದಲ್ಲೇ ವಾಹನಗಳಿಗೆ ಪಾರ್ಕಿಂಗ್‌ ವ್ಯವಸ್ಥೆ ಮಾಡಿದ್ದು, ಬೆಟ್ಟದ ಮೇಲೆ ಹೋಗಲು ವಾಹನಗಳಿಗೆ ನಿರ್ಬಂಧ ಏರಲಾಗಿದೆ.

ದೇವಸ್ಥಾನಕ್ಕೂ ನಿರ್ಬಂಧ: ಅವುಲಬೆಟ್ಟದ ಮೇಲಿರುವ ನರಸಿಂಹ ದೇವರ ‌ದೇವಸ್ಥಾನಕ್ಕೂ ಪ್ರವೇಶ ನಿಷೇಧಿಸಿದು, ಭಕ್ತರಿಗೆ ದೇವರ ದರ್ಶನಕ್ಕೆ ಪ್ರವೇಶವಿಲ್ಲ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.