2025ರಲ್ಲಿ ಮಾಹೆಗೆ ಜಗತ್ತಿನ 500 ಶ್ರೇಷ್ಠ ವಿ.ವಿ.ಗಳಲ್ಲಿ ಸ್ಥಾನ


Team Udayavani, Aug 12, 2021, 5:51 AM IST

2025ರಲ್ಲಿ ಮಾಹೆಗೆ ಜಗತ್ತಿನ 500 ಶ್ರೇಷ್ಠ ವಿ.ವಿ.ಗಳಲ್ಲಿ ಸ್ಥಾನ

ಉಡುಪಿ: ಭಾರತ ಸರಕಾರದಿಂದ ಇನ್‌ಸ್ಟಿಟ್ಯೂಟ್‌ ಆಫ್ ಎಮಿನೆನ್ಸ್‌ ಮಾನ್ಯತೆ ಪಡೆದುಕೊಂಡಿರುವ ಮಣಿಪಾಲ ಮಾಹೆ ವಿ.ವಿ. 2025-26ರಲ್ಲಿ ಜಗತ್ತಿನ ಶ್ರೇಷ್ಠ 500 ವಿ.ವಿ.ಗಳಲ್ಲಿ ಮತ್ತು 2028-29ರಲ್ಲಿ ಜಗತ್ತಿನ ಶ್ರೇಷ್ಠ 200 ವಿ.ವಿ.ಗಳಲ್ಲಿ ಒಂದಾಗಿ ಹೊರಹೊಮ್ಮಲಿದೆ ಎಂದು ಮಾಹೆ ಸಹಕುಲಾಧಿಪತಿ ಡಾ| ಎಚ್‌.ಎಸ್‌.ಬಲ್ಲಾಳ್‌ ಮತ್ತು ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇನ್‌ಸ್ಟಿಟ್ಯೂಟ್‌ ಆಫ್ ಎಮಿನೆನ್ಸ್‌ ಮಾನ್ಯತೆಯನ್ನು ಈ  ಮೊದಲು ಆರು ಸಂಸ್ಥೆಗಳಿಗೆ ನೀಡಲಾಗಿತ್ತು. ಈಗ ಒಟ್ಟು 20 ಸಂಸ್ಥೆಗಳಿವೆ. ಆದರೆ ಆರೋಗ್ಯ, ಮಾನವಿಕ, ತಾಂತ್ರಿಕ, ಸಮಾಜ ವಿಜ್ಞಾನ, ನಿರ್ವಹಣೆ ಇತ್ಯಾದಿ

ಬಹುಶ್ರೇಣಿಯ ಕೋರ್ಸುಗಳಿರುವ ಏಕ ಮಾತ್ರ ವಿ.ವಿ. ಎಂದೆನಿಸಿರುವ ಮಾಹೆಯಲ್ಲಿ ಜಗತ್ತಿನ ಇಂಗ್ಲಿಷ್‌ ಮಾತನಾಡುವ ಭಾರತ ಸಹಿತ 57 ದೇಶಗಳ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ ಎಂದರು.

ಕ್ಯೂಎಸ್‌, ಟೈಮ್ಸ್‌ ಮುಂತಾದ ಸಂಸ್ಥೆಗಳು ಜಾಗತಿಕವಾಗಿ ವಿ.ವಿ.ಗಳ ಶ್ರೇಣಿಗಳನ್ನು ಪ್ರಕಟಿಸುತ್ತಿದ್ದು ಮಾಹೆಗೆ ಈಗಾಗಲೇ ಹಲವು ಸ್ತರದ ಮಾನ್ಯತೆಗಳು ದೊರಕಿವೆ. 2020-21ರಲ್ಲಿ ಭಾರತದ ಶ್ರೇಷ್ಠ ಖಾಸಗಿ ವಿ.ವಿ.ಯಾಗಿ ಹೊರಹೊಮ್ಮಿದೆ.

1,000 ಕೋ.ರೂ. ವೆಚ್ಚ :

ಇನ್ನು 3ರಿಂದ 5 ವರ್ಷಗಳಲ್ಲಿ ವಿವಿಧ ಕ್ಯಾಂಪಸ್‌ಗಳಲ್ಲಿ ಸುಮಾರು 1,000 ಕೋ.ರೂ. ವೆಚ್ಚ ಮಾಡಲಿದೆ. ಬೆಂಗಳೂರಿನಲ್ಲಿ ಆರಂಭಿಸುವ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಐದು ಕೋರ್ಸುಗಳು ಆರಂಭವಾಗ ಲಿವೆ. ಜಮ್ಶೆಡ್‌ಪುರದಲ್ಲಿ ಟಾಟಾ ಸಂಸ್ಥೆ ಜತೆ ಆರಂಭಿಸುವ ವೈದ್ಯಕೀಯ ಕಾಲೇಜಿಗೆ ಮಾಹೆ 300 ಕೋ.ರೂ. ಖರ್ಚು ಮಾಡಲಿದೆ. ಮುಂದಿನ 15 ವರ್ಷಗಳಲ್ಲಿ ಸಂಸ್ಥೆ ಮುನ್ನಡೆಯುವ ಪಥವನ್ನು ಈಗಾಗಲೇ ಗುರುತಿಸಲಾಗಿದೆ ಎಂದವರು ತಿಳಿಸಿದರು.

ಬ್ಯಾಂಕ್‌ ಆಫ್ ಕ್ರೆಡಿಟ್‌ :

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಂತೆ ಅಕಾಡೆಮಿಕ್‌ ಬ್ಯಾಂಕ್‌ ಆಫ್ ಕ್ರೆಡಿಟ್‌ 2021-22ರಿಂದ ಅನ್ವಯವಾಗಲಿದೆ. ಒಂದು ಕೋರ್ಸ್‌ನಲ್ಲಿ ಒಂದು ವರ್ಷ ಓದಿ ಮತ್ತೆರಡು ವರ್ಷ ಬಿಟ್ಟು ಅದೇ ಸಂಸ್ಥೆ ಅಥವಾ ಈ ಶ್ರೇಣಿಯ ಇನ್ನೊಂದು ಸಂಸ್ಥೆಗೆ ಸೇರುವುದಾದರೆ ಯಾವುದೇ ತೊಂದರೆ ಆಗುವುದಿಲ್ಲ. ಅಕಾಡೆಮಿಕ್‌ ಬ್ಯಾಂಕ್‌ ಆಫ್ ಕ್ರೆಡಿಟ್‌ಗೆ ಮಾಹೆ ಮಾನ್ಯವಾಗಿದೆ.

 40 ವಿದ್ಯಾರ್ಥಿಗಳ ಶುಲ್ಕ ಮನ್ನಾ :

ಕೊರೊನಾ ಸೋಂಕಿನಿಂದಾಗಿ ಆದಾಯಕ್ಕೆ ತೊಂದರೆಯಾಗಿದ್ದರೂ ಸಿಬಂದಿಗೆ ಪೂರ್ಣಪ್ರಮಾಣದಲ್ಲಿ ವೇತನವನ್ನು ಪಾವತಿಸಲಾಗಿದೆಯ ಲ್ಲದೇ ಈ ವರ್ಷ ಹೆಚ್ಚಿಗೆ ಪರಿಷ್ಕರಿಸಲಾಗಿದೆ. ಸೋಂಕಿನಿಂದ ಪೋಷಕ ರನ್ನು ಕಳೆದುಕೊಂಡು ಆರ್ಥಿಕವಾಗಿ ಕಂಗೆಟ್ಟ 40 ವಿದ್ಯಾರ್ಥಿಗಳ ಶುಲ್ಕವನ್ನು ಮನ್ನಾ ಮಾಡಲಾಗಿದೆ. ವಿ.ವಿ.ಯ ಶೇ. 90ರಷ್ಟು ವಿದ್ಯಾರ್ಥಿ, ಸಿಬಂದಿಗೆ ಉಚಿತವಾಗಿ ಲಸಿಕೆ ನೀಡಲಾಗಿದೆ ಎಂದರು.

ಸಿದ್ಧತೆಯೊಂದಿಗೆ ತರಗತಿ :

ಮಾಹೆಯು 2020ರ ರಾಷ್ಟ್ರೀಯ ಶಿಕ್ಷಣ ನೀತಿಯಂತೆ ಪಠ್ಯ ವಿಷಯಗಳನ್ನು ರೂಪಿಸಿ ಕೊಂಡಿದೆ. ಕೊರೊನಾದಿಂದ ಡಿಜಿಟಲ್‌ ತಂತ್ರಜ್ಞಾನದಿಂದ ಮುನ್ನಡೆಯುತ್ತಿದೆ. ಸಪ್ಟೆಂಬರ್‌ನಲ್ಲಿ ಭೌತಿಕ ತರಗತಿಗಳನ್ನು ಹಂತಹಂತವಾಗಿ ಆರಂಭಿಸಲಾಗುತ್ತದೆ. ನೆಗೆಟಿವ್‌ ಪ್ರಮಾಣ ಪತ್ರ, ಲಸಿಕೆಪಡೆದ ದಾಖಲೆ, ಮಾಸ್ಕ್ ಧಾರಣೆ, ಮೊದಲು ಒಂದು ವಾರ ಕ್ವಾರಂಟೈನ್‌ ಮೊದಲಾದ ಷರತ್ತುಗಳೊಂದಿಗೆ ತರಗತಿಗಳು ಆರಂಭವಾಗಲಿವೆ. ಹಿಂದಿನ ವರ್ಷಗಳ ಆರೋಗ್ಯ ವಿಜ್ಞಾನಗಳ ಕೋರ್ಸುಗಳ ತರಗತಿ ಆರಂಭವಾಗಿದ್ದು ಒಂದು ತರಗತಿಯಲ್ಲಿ ಶೇ. 30ರಷ್ಟು ವಿದ್ಯಾರ್ಥಿಗಳು ಮಾತ್ರ ಭಾಗವಹಿಸ ಬಹುದು. ಉಳಿದವರಿಗೆ ಆನ್‌ಲೈನ್‌ ತರಗತಿ ನಡೆಯುತ್ತವೆ.

ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಸಾರ್ವಜನಿಕ ಸಂಪರ್ಕ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ನಿರ್ದೇಶಕ ಎಸ್‌.ಪಿ. ಕಾರ್‌ ಉಪಸ್ಥಿತರಿದ್ದರು.

ಮಾಹೆ ವ್ಯಾಪ್ತಿಗೆ ಟ್ಯಾಪ್ಮಿ  :

ಜಾಗತಿಕ ಸ್ತರದ ನಿರ್ವಹಣ ಶಿಕ್ಷಣ ಸಂಸ್ಥೆ ಮಣಿಪಾಲದ ಟಿ.ಎ.ಪೈ ಮ್ಯಾನೇಜ್‌ಮೆಂಟ್‌ ಇನ್‌ಸ್ಟಿಟ್ಯೂಟ್‌ (ಟ್ಯಾಪ್ಮಿ ) ಇನ್ನು ಮುಂದೆ ಮಾಹೆ ವ್ಯಾಪ್ತಿಗೆ ಬರಲಿದೆ. ಇದರ ಕುರಿತಾದ ಪತ್ರ ವ್ಯವಹಾರ ನಡೆಯುತ್ತಿದೆ. ಟ್ಯಾಪ್ಮಿ ಮ್ಯಾನೇಜ್‌ಮೆಂಟ್‌ ಕೋರ್ಸ್‌ ನೀಡುವುದರಿಂದ ಮುಂದೆ ಮಾಹೆ ಅಧೀನದಲ್ಲಿದ್ದ ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ ಕೋರ್ಸ್‌ನ್ನು ರದ್ದುಗೊಳಿಸಲಾಗುವುದು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.