‘ಡೆವಿಲ್ ಈಸ್ ಬ್ಯಾಕ್’… ಶಸ್ತ್ರ ಚಿಕಿತ್ಸೆ ಬಳಿಕ ನಟ ಪ್ರಕಾಶ್ ರೈ ಟ್ವೀಟ್
Team Udayavani, Aug 12, 2021, 1:26 PM IST
ಚಿತ್ರೀಕರಣದ ವೇಳೆ ಗಾಯಗೊಂಡಿದ್ದ ಬಹುಭಾಷಾ ನಟ ಪ್ರಕಾಶ್ ರೈ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಶೀಘ್ರವೇ ಚಿತ್ರೀಕರಣಕ್ಕೆ ಹಾಜರಾಗುವುದಾಗಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಪ್ರಕಾಶ್ ರೈ ತಮಿಳು ನಟ ಧನುಷ್ ನಟನೆಯ ‘D44’ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಆಗಸ್ಟ್ 10 ರಂದು ಚೆನ್ನೈನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕೆಳಗೆ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಅಲ್ಲೇ ಸ್ಥಳಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೈದರಾಬಾದ್ ಗೆ ತೆರಳಿದ್ದರು. ಇದೀಗ ಶಸ್ತ್ರ ಚಿಕಿತ್ಸೆ ಮುಗಿದಿದೆ.
ಸರ್ಜರಿ ಬಳಿಕ ಮೊದಲ ಫೋಟೋ ಶೇರ್ ಮಾಡಿರುವ ಪ್ರಕಾಶ್, “ಡೆವಿಲ್ ಈಸ್ ಬ್ಯಾಕ್. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ನನ್ನ ಆತ್ಮೀಯ ಸ್ನೇಹಿತ ಡಾ.ಗುರುವರೆಡ್ಡಿ ಮತ್ತು ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆಗೆ ಧನ್ಯವಾದಗಳು. ಸದ್ಯದಲ್ಲೇ ಕೆಲಸಕ್ಕೆ ಮರಳುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.
ಇನ್ನು ಆಗಸ್ಟ್ 5 ರಂದು ಧನುಷ್ ನಟನೆಯ ಹೊಸ ಸಿನಿಮಾ ಸೆಟ್ಟೇರಿತ್ತು. ಮಿಥುನ್ ಆರ್ ಜವಾಹರ್ ಈ ಚಿತ್ರ ನಿರ್ದೇಶಿಸುತ್ತಿದ್ದು, ಔಟ್ ಅಂಡ್ ಔಟ್ ಆಕ್ಷನ್ ಸಿನಿಮಾ ಎಂದು ಹೇಳಲಾಗಿದೆ. ಪ್ರಕಾಶ್ ರೈ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಿತ್ಯಾ ಮೆನನ್, ರಾಶಿ ಖನ್ನಾ, ಪ್ರಿಯಾ ಭವಾನಿ ಶಂಕರ್ ಸಹ ಈ ಚಿತ್ರದಲ್ಲಿ ನಟಿಸಲಿದ್ದಾರೆ. ಸನ್ ಪಿಕ್ಚರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್ ಧ್ವನಿ; ಹೀರೋ ಮೇಲೆ ಆರೋಪ
Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್
Border 2: ಸನ್ನಿ ಡಿಯೋಲ್ ʼಬಾರ್ಡರ್-2ʼಗೆ ʼಫೌಜಿʼಯಾಗಿ ಬಂದ ಸುನಿಲ್ ಶೆಟ್ಟಿ ಪುತ್ರ
Bollywood Actor Govinda: ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು
‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.