ತುಂಬಿದ ಭದ್ರೆಗೆ ರೈತ ಸಂಘದ ಬಾಗಿನ


Team Udayavani, Aug 13, 2021, 6:45 PM IST

13-23

ಶಿವಮೊಗ್ಗ: ಮಧ್ಯ ಕರ್ನಾಟಕದ ಜನರ ಜೀವನಾಡಿ ಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘದಿಂದ ಗುರುವಾರ ಬಾಗಿನ ಅರ್ಪಿಸಲಾಯಿತು. ಬಾಗಿನ ಅರ್ಪಿಸಿದ ರೈತ ಸಂಘದ ಗೌರವಾಧ್ಯಕ್ಷ ಎಚ್‌.ಆರ್‌.ಬಸವರಾಜಪ್ಪ ಮಾತನಾಡಿ, ರೈತರ ಜೀವನಾಡಿಯಾದ ಭದ್ರಾ ಅಣೆಕಟ್ಟೆಯಲ್ಲಿ ಕಳೆದ ವರ್ಷ ಈ ಸಂದರ್ಭದಲ್ಲಿ 155ಅಡಿ ಮಾತ್ರ ನೀರಿತ್ತು. ನಂತರ ದಿನಗಳಲ್ಲಿ ಭರ್ತಿಯಾಗಿದೆ.

ಈ ವರ್ಷ ಬಹಳ ಬೇಗನೆ ಅಣೆಕಟ್ಟು ಭರ್ತಿಯಾಗಿರುವುದು ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಂತಸ ತಂದಿದೆ. ಜಲಾಶಯದ ನೀರು ಬಳಸಿಕೊಂಡು ಕಳೆದ ವರ್ಷ ಸಹ ಸುಮಾರು 2.60 ಲಕ್ಷ ಎಕರೆಯಲ್ಲಿ ಭತ್ತ, ಮೆಕ್ಕೆಜೋಳ ಇತ್ಯಾದಿ ಬೆಳೆಗಳನ್ನು 2 ಬಾರಿ ಬೆಳೆದಿದ್ದಾರೆ. ಈ ವರ್ಷವೂ 2 ಬೆಳೆ ಬೆಳೆಯಬಹುದಾಗಿದೆ. ಅಲ್ಲದೆ ಅಡಿಕೆ, ತೆಂಗು ತೋಟಗಳಿಗೂ ಈ ನೀರು ಬಳಸಬಹುದಾಗಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಗೆ ತುಂಗಾ ನದಿಯಿಂದ 17.4 ಟಿ.ಎಂ.ಸಿ. ಭದ್ರಾ ಅಣೆಕಟ್ಟೆಯಿಂದ 12.5 ಟಿ.ಎಂ.ಸಿ ಒಟ್ಟು 29.9 ಟಿ.ಎಂ.ಸಿ. ನೀರು ಹರಿಸಲು ಸರ್ಕಾರದಿಂದ ಡಿಪಿಆರ್‌ ಆಗಿದೆ. ಹೋದ ವರ್ಷ ಮತ್ತು ಈ ವರ್ಷ ಭದ್ರಾ ಮೇಲ್ದಂಡೆಗೆ ನೀರು ಹರಿಸಲಾಗುತ್ತಿದೆ. ಈ ಯೋಜನೆ ಪೂರ್ಣಗೊಂಡ ನಂತರ ಪ್ರತಿದಿನ 2,800 ಕ್ಯೂಸೆಕ್‌ ನೀರನ್ನು ಹರಿಸಬೇಕಾಗುತ್ತದೆ. ಅಣೆಕಟ್ಟೆ ತುಂಬಿದಾಗ ನೀರು ಹರಿಸಿದರೆ ತೊಂದರೆ ಇಲ್ಲ. ಹಿಂದಿನ ಕೆಲವು ವರ್ಷಗಳಲ್ಲಿ ಅಣೆಕಟ್ಟೆ ಅರ್ಧ ಸಹ ಭರ್ತಿಯಾಗಿರದ ಉದಾಹರಣೆಗಳಿವೆ. ಈ ಸಂದರ್ಭದಲ್ಲಿ ಭದ್ರಾ ನದಿಯಿಂದ 12.5 ಟಿಎಂಸಿ ನೀರನ್ನು ಹರಿಸಿದರೆ ಭದ್ರಾ ಅಣೆಕಟ್ಟೆ ಕೆಳಭಾಗದ ಕೆಲವು ಪಟ್ಟಣ ಮತ್ತು ಹಳ್ಳಿಗಳ ಜನರಿಗೆ ಕುಡಿಯುವ ನೀರು ಮತ್ತು ಬೆಳೆದು ನಿಂತಿರುವ ದೀರ್ಘಾವಧಿ ಬೆಳೆಗಳಾದ ಅಡಿಕೆ, ತೆಂಗು ಸಹ ನೀರಿಲ್ಲದೆ ಒಣಗಿ ಹೋಗಿ ಮರ ಕಡಿಯುವ ಸಂದರ್ಭ ಎದುರಾಗಬಹುದು ಎಂದರು.

ಬಯಲು ಸೀಮೆಗೆ ನೀರು ಹರಿಸುವುದಕ್ಕೆ ನಮ್ಮ ವಿರೋಧವಿಲ್ಲ. ತುಂಗಾ ನದಿಯಿಂದ ಯಥೇಚ್ಚವಾಗಿ ನೀರು ಸಮುದ್ರ ಸೇರುತ್ತದೆ. ಆದ್ದರಿಂದ ಈ ಯೋಜನೆಗೆ ಬೇಕಾಗಿರುವ ನೀರನ್ನು ಭದ್ರಾ ಅಣೆಕಟ್ಟೆಯ ಬದಲಾಗಿ ಸಂಪೂರ್ಣ 29.9 ಟಿಎಂಸಿ ನೀರನ್ನು ತುಂಗಾ ನದಿಯಿಂದಲೇ ಎತ್ತಿಕೊಡಬೇಕು. ಈ ಬಗ್ಗೆ ಸರ್ಕಾರ ತುಂಗಾ ನದಿಯಿಂದ ಹೆಚ್ಚುವರಿಯಾಗಿ 12.5ಟಿ.ಎಂ.ಸಿ. ನೀರೆತ್ತಲು ಹೊಸದಾಗಿ ಡಿಪಿಆರ್‌ ಮಾಡಬೇಕು ಎಂದರು.

ಈಗಿನ ಮುಖ್ಯಮಂತ್ರಿಗಳಾದ ಬಸವರಾಜ್‌ ಬೊಮ್ಮಾಯಿ ಅವರು ಹಿಂದೆ ನೀರಾವರಿ ಸಚಿವರಾಗಿದ್ದಾಗ ಭೇಟಿ ಮಾಡಿ ಈ ವಿಚಾರವನ್ನು ಮನವರಿಕೆ ಮಾಡಿಕೊಡಲಾಗಿತ್ತು. ಈಗ ಅವರೇ ಮುಖ್ಯಮಂತ್ರಿಗಳಾಗಿರುವುದರಿಂದ ಅನುಕೂಲವಾಗುತ್ತದೆ. ಆದ್ದರಿಂದ ಎಲ್ಲಾ ಪಕ್ಷ ಭೇದ ಮರೆತು ಸಭೆ ಕರೆದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲು ರೈತ ಸಂಘ ಒತ್ತಾಯಿಸಲಿದೆ ಎಂದರು.

ಈ ವಿಷಯದಲ್ಲಿ ಬಯಲು ಸೀಮೆಯ ಶಾಸಕರು, ಲೋಕಸಭಾ ಸದಸ್ಯರು ಆಸಕ್ತಿ ವಹಿಸುತ್ತಾರೆ. ಅದೇ ರೀತಿ ಅಚ್ಚುಕಟ್ಟು ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಯ ಶಾಸಕರು, ಲೋಕಸಭಾ ಸದಸ್ಯರು, ಜನ ಪ್ರತಿನಿ  ಧಿಗಳು ಆಸಕ್ತಿ ವಹಿಸಿ ಭದ್ರಾ ಅಣೆಕಟ್ಟೆಯ ಬದಲಾಗಿ ತುಂಗಾ ನದಿಯಿಂದಲೇ ನೀರೆತ್ತಲು ಹೊಸದಾಗಿ ಡಿಪಿಆರ್‌ ಮಾಡಲು ಒತ್ತಾಯಿಸಬೇಕು ಎಂದರು.

ಟಾಪ್ ನ್ಯೂಸ್

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.