“ಕಾಕ್‌ಟೇಲ್‌ ಲಸಿಕಾ ಪದ್ಧತಿ ಬೆಂಬಲಿಸಲ್ಲ’

ಸೀರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಮುಖ್ಯಸ್ಥ ಪೂನಾವಾಲಾ ಹೇಳಿಕೆ

Team Udayavani, Aug 13, 2021, 10:15 PM IST

“ಕಾಕ್‌ಟೇಲ್‌ ಲಸಿಕಾ ಪದ್ಧತಿ ಬೆಂಬಲಿಸಲ್ಲ’

ನವದೆಹಲಿ: ಎರಡು ಲಸಿಕೆಗಳ ಸಮ್ಮಿಶ್ರಣ (ವ್ಯಾಕ್ಸಿನ್‌ ಕಾಕ್‌ಟೇಲ್‌) ನೀಡುವ ಪರಿಕಲ್ಪನೆಯನ್ನು ತಾವು ಬೆಂಬಲಿಸುವುದಿಲ್ಲ ಎಂದು ಭಾರತದಲ್ಲಿ ಕೋವಿಶೀಲ್ಡ್‌ ಲಸಿಕೆ ತಯಾರಿಸುವ “ಸೀರಂ ಇನ್‌ ಸ್ಟಿಟ್ಯೂಟ್‌ ಆಫ್ ಇಂಡಿಯಾ’ (ಎಸ್‌ಐಐ) ಮುಖ್ಯಸ್ಥ ಡಾ. ಸೈರಸ್‌ ಪೂನಾವಾಲಾ ಹೇಳಿದ್ದಾರೆ.

ನವದೆಹಲಿಯಲ್ಲಿ ಶುಕ್ರವಾರ, ಲೋಕಮಾನ್ಯ ತಿಲಕ್‌ ಪ್ರಶಸ್ತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “”ಲಸಿಕೆಗಳ ಸಮ್ಮಿಶ್ರಣದಿಂದ ಯಾವುದೇ ವ್ಯಕ್ತಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚದಿದ್ದರೆ, ಲಸಿಕೆಗಳ ಮಾತೃಸಂಸ್ಥೆಗಳು ಪರಸ್ಪರರ ಮೇಲೆ ಆರೋಪ ಮಾಡಿಕೊಳ್ಳಬಹುದು. ಹಾಗಾಗಿ, ಇದು ಒಳ್ಳೆಯ ಕ್ರಮವಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ” ಎಂದರು.

ಇತ್ತೀಚೆಗೆ, ಲಸಿಕೆಗಳ ಸಮ್ಮಿಶ್ರಣದಂದ ಕೋವಿಡ್‌ ನಿರೋಧಕತೆ ಅಗಾಧವಾಗಿ ಹೆಚ್ಚಾಗುವ ಸಾಧ್ಯತೆಯಿರುತ್ತದೆ ಎಂದು ಐಸಿಎಂಆರ್‌ನ ಅಧ್ಯಯನವೊಂದು ಹೇಳಿದ್ದಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:ಭಾರತೀಯ ಕ್ರಿಕೆಟಿಗೆ ವಿದಾಯ ಹೇಳಿದ ಉನ್ಮುಕ್ತ್ ಚಂದ್‌

ಹೊಸ ಲಸಿಕೆಗೆ ಒಪ್ಪಿಗೆ: ಇದೇ ಮೊದಲ ಬಾರಿಗೆ ಭಾರತ್‌ ಬಯೋಟೆಕ್‌ ಸಂಸ್ಥೆಯ “ಮೂಗಿನ ಮೂಲಕ ಹಾಕಬಹುದಾದ ಕೋವಿಡ್‌ ಲಸಿಕೆ’ಯ ಫೇಸ್‌ 2 ಮತ್ತು ಫೇಸ್‌ 3 ಪ್ರಯೋಗಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಗುಣಮುಖರ ಸಂಖ್ಯೆ ಶೇ. 97ಕ್ಕೆ
ಬುಧವಾರ-ಗುರುವಾರ ನಡುವಿನ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 40,120 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ, ದೇಶದಲ್ಲಿ ಕೋವಿಡ್‌ ಪೀಡಿತರ ಒಟ್ಟು ಸಂಖ್ಯೆ 3,21,17,826ಕ್ಕೇರಿದೆ. ಇನ್ನು, ಗುಣಮುಖರಾಗುತ್ತಿರುವರ ಪ್ರಮಾಣ ಶೇ. 97.46ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ನಡುವೆ, ಮುಂಬೈನಲ್ಲಿ ಇದೇ ಮೊದಲ ಬಾರಿಗೆ ಕೋವಿಡ್‌ ವೈರಾಣುವಿನ ಡೆಲ್ಟಾ ಪ್ಲಸ್‌ ರೂಪಾಂತರಿಯಿಂದ ನರಳುತ್ತಿದ್ದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ.

ಪ್ರೊಟೀನ್‌ ಆಧಾರಿತ ಹೊಸ ಲಸಿಕೆ
ನೋಡಲು ಕೋವಿಡ್‌ ವೈರಾಣುವಿನಂತೆಯೇ ಕಾಣುವ ಪ್ರತಿಕಾಯಗಳನ್ನು ಹೊಂದಿರುವ ಕೋವಿಡ್‌ ಲಸಿಕೆಯೊಂದನ್ನು ಅಮೆರಿಕದ ಚಿಕಾಗೋ ವಿವಿಯ ಸಂಶೋಧಕರು ಅಭಿವೃದ್ಧಿಪಡಿಸಿರುವುದಾಗಿ “ಎಸಿಎಸ್‌ ಸೆಂಟ್ರಲ್‌ ಸೈನ್ಸ್‌’ ಎಂಬ ನಿಯತಕಾಲಿಕೆ ವರದಿ ಮಾಡಿದೆ. “ಇದೊಂದು ಪ್ರೋಟೀನ್‌ ಆಧಾರಿತ ಲಸಿಕೆಯಾಗಿದ್ದು, ಸಾಮಾನ್ಯ ಲಸಿಕೆಗಳು ನೀಡುವುದಕ್ಕಿಂತ ಹೆಚ್ಚಿನ ನಿರೋಧಕತೆ ನೀಡುತ್ತದೆ’ ಎಂದು ವರದಿಯಲ್ಲಿ ಬಣ್ಣಿಸಲಾಗಿದೆ. ಈ ನಡುವೆ, ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದ ನಂತರವೂ ರೋಗ ನಿರೋಧಕತೆ ಪ್ರಮಾಣ ಕಡಿಮೆ ಇರುವ ಅಮೆರಿಕನ್ನರಿಗೆ ಬೂಸ್ಟರ್‌ ಕೋವಿಡ್‌ ಲಸಿಕೆ ನೀಡಲು ಅಲ್ಲಿನ ಸರ್ಕಾರ ಒಪ್ಪಿಗೆ ನೀಡಿದೆ.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.