ಬಾರದ ಮಳೆ; ಮುದುಡಿದ ಬೆಳೆ; ಸರ್ವೇ ಮಾಡಿ ಪರಿಹಾರ ನೀಡಿ

ಔಷಧ, ಕೂಲಿ ಸೇರಿ ಪ್ರತಿ ಎಕರೆಗೆ ಅಂದಾಜು 15 ರಿಂದ 20 ಸಾವಿರ ರೂ. ಖರ್ಚು ಮಾಡಿದ್ದೇವೆ.

Team Udayavani, Aug 14, 2021, 5:59 PM IST

ಬಾರದ ಮಳೆ; ಮುದುಡಿದ ಬೆಳೆ; ಸರ್ವೇ ಮಾಡಿ ಪರಿಹಾರ ನೀಡಿ

ಕಮಲನಗರ: ಈ ಮೊದಲು ಅತಿವೃಷ್ಟಿ-ಅನಾವೃಷ್ಟಿ ಎರಡನ್ನೂ ರೈತ ಸಮುದಾಯ ಅಕ್ಷರಶಃ ನಲುಗಿತ್ತು. ಆದರೆ ಇದೀಗ ತಾಲೂಕಿನಾದ್ಯಂತ ಕಳೆದ ಮೂರ್‍ನಾಲ್ಕು ವಾರಗಳಿಂದ ಮಳೆ ಬಾರದಿರುವುದು ರೈತರನ್ನು ಚಿಂತೆಗೀಡು ಮಾಡಿದ್ದು, ಚೆನ್ನಾಗಿ ಬೆಳೆದಿದ್ದ ಬೆಳೆಗಳೆಲ್ಲ ಕಳೆ ಕಳೆದುಕೊಂಡು ಒಣಗುತ್ತಿವೆ. ಹೀಗಾಗಿ ರೈತರು ಮತ್ತೆ ಆಗಸದತ್ತ ಮುಖ ಮಾಡಿ ಮೇಘರಾಜನಿಗಾಗಿ ಕಾಯುತ್ತಿದ್ದಾರೆ.

ಮುಂಗಾರು ಮಳೆ ಸಮಯಕ್ಕೆ ಸರಿಯಾಗಿ ಸುರಿದ ಕಾರಣ ರೈತರ ಮೊಗದಲ್ಲಿ ಸಂತಸ ಮೂಡಿತ್ತು. ಉತ್ತಮ ಮಳೆ ಬಿದ್ದಿರುವುದರಿಂದ ರೈತರು ಬಿತ್ತನೆ ಮಾಡಿ, ಬೆಳೆದ ಬೆಳೆಗೆ ಔಷಧ ಸಿಂಪಡಿಸಿ ಉತ್ತಮ ಇಳುವರಿ-ಉತ್ಪನ್ನದ ನಿರೀಕ್ಷೆಯಲ್ಲಿದ್ದರು. ಆದರೆ ಇದೀಗ ಮಳೆ ಕೈಕೊಟ್ಟಿದ್ದು, ಈ ಆಸೆಗೆ ತಣ್ಣೀರೆರಚಿದಂತಾಗಿದೆ.

ಮುಂಗಾರು ಹಂಗಾಮಿನ ಸೋಯಾ, ತೊಗರಿ, ಹೆಸರು, ಉದ್ದು ಸೇರಿದಂತೆ ಎಲ್ಲ ಬೆಳೆಗಳು ಚೆನ್ನಾಗಿ ಬೆಳೆದಿವೆ. ಈಗ ಬಹುತೇಕ ಬೆಳೆಗಳು ಹೂ ಬಿಡುವ ಹಾಗೂ ಕಾಳು ಕಟ್ಟುವ ಹಂತದಲ್ಲಿದ್ದು, ಮಳೆ ಅವಶ್ಯಕತೆ ಇದೆ. ಒಂದು ವೇಳೆ ಮಳೆ ಬಾರದೆ ಇದ್ದರೆ ಬೆಳೆಗಳು ಸಂಪೂರ್ಣ ಬಾಡುವ ಮೂಲಕ ನೆಲಕಚ್ಚುವ ಆತಂಕ ರೈತರಲ್ಲಿ ಮನೆ ಮಾಡಿದೆ.

ಬಾಡಿವೆ ಬೆಳೆಗಳು: ಒಂದು ತಿಂಗಳಿಂದ ಬಾರದ ಮಳೆಗೆ ಸೋಯಾ, ತೊಗರಿ ಸೇರಿದಂತೆ ಮುಂಗಾರು ಹಂಗಾಮಿನ ಬೆಳೆಗಳು ಬಾಡುತ್ತಿವೆ. ತಕ್ಷಣ ಮಳೆ ಸುರಿಯದಿದ್ದರೆ ಬೆಳೆಗಳು ಸಂಪೂರ್ಣ ಒಣಗಿ ಹೋಗುವ ಭಯ ರೈತರನ್ನು ಅಕ್ಷರಶಃ ಚಿಂತೆಯ ಕಡಲಲ್ಲಿ ಮುಳುಗಿಸಿದೆ.

ಈಗಾಗಲೇ ಬೀಜ, ಗೊಬ್ಬರ, ಔಷಧ, ಕೂಲಿ ಸೇರಿ ಪ್ರತಿ ಎಕರೆಗೆ ಅಂದಾಜು 15 ರಿಂದ 20 ಸಾವಿರ ರೂ. ಖರ್ಚು ಮಾಡಿದ್ದೇವೆ. ಆದರೆ ಮಳೆ ಅಭಾವದಿಂದ ರೈತರ ನಿರೀಕ್ಷೆಗಳೆಲ್ಲ ತಲೆ ಕೆಳಗಾಗಿವೆ. ನೀರಿನ ಕೊರೆತೆಯಿಂದ ಬೆಳೆಗಳು ಬಾಡುತ್ತಿದ್ದು, ಹೊಲದಲ್ಲಿನ ಬೆಳೆ ನೋಡಲು ಮನಸ್ಸೇ ಆಗುತ್ತಿಲ್ಲ ಎನ್ನುತ್ತಾರೆ ಖತಗಾಂವನ ರೈತ ಚನ್ನಬಸವಾ ಪಾಟೀಲ್‌. ಕೂಡಲೇ ಕಂದಾಯ ಹಾಗೂ ಕೃಷಿ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಿ ರೈತರ ನೆರವಿಗೆ ನಿಲ್ಲಬೇಕೆಂದು ಸೋನಾಳ ರೈತ ಅಂಕೋಶ ಹಣಮಶೆಟ್ಟೆ ಮನವಿ ಮಾಡಿದ್ದಾರೆ.

ತಾಲೂಕಿನಾದ್ಯಂತ ಕಳೆದ ಮೂರ್‍ನಾಲ್ಕು ವಾರಗಳಿಂದ ಮಳೆ ಬಾರದ ಹಿನ್ನೆಲೆಯಲ್ಲಿ ಹೊಲದಲ್ಲಿನ ಬೆಳೆ ಸಂಪೂರ್ಣ ಒಣಗುವ ಹಂತದಲ್ಲಿವೆ. ಕೂಡಲೇ ಅ ಧಿಕಾರಿಗಳು ಸರ್ವೇ ಮಾಡಿ ವಿಮೆ ಕಂಪನಿಯಿಂದ ರೈತರಿಗೆ ಪರಿಹಾರ ಕೊಡಿಸಬೇಕು.

ಶ್ರೀರಂಗ ಪರಿಹಾರ
ಜಿಲ್ಲಾ ಉಪಾಧ್ಯಕ್ಷ, ರೈತ ಮೋರ್ಚಾ

2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಿದ್ದೇವೆ. ಆದರೆ ಕೆಲವರಿಗೆ ವಿಮೆ ಹಣ ಬಂದಿದ್ದು, ಇನ್ನೂ ಕೆಲವರಿಗೆ ಬಂದಿಲ್ಲ. ಅಲ್ಲದೇ ತೊಗರಿ ಬೆಳೆ ವಿಮೆ ಮಾಡಿಸಿದವರಿಗೆ ಕೇವಲ 40-50 ರೂ. ಖಾತೆಗೆ ಜಮೆ ಆಗಿದೆ. ಇದರಿಂದ ವಿಮೆ ಕಂಪನಿ ಮೇಲೆ ನಂಬಿಕೆ ಇಲ್ಲದಂತಾಗಿದೆ. ಕೂಡಲೇ ವಿಮೆ ಕಂಪನಿಯವರು ಸಮೀಕ್ಷೆ ನಡೆಸಿ ರೈತರ ಖಾತೆಗೆ ಬೆಳೆ ಹಾನಿ ಹಣ ಜಮೆ ಮಾಡಬೇಕು.
ಚನ್ನಬಸವಾ ಪಾಟೀಲ್‌
ಖತಗಾಂವ, ರೈತ

*ಮಹಾದೇವ ಬಿರಾದಾರ್‌

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-

Bidar: ವಿಮಾನಯಾನ ಸೇವೆ ಕುರಿತಂತೆ ಈಶ್ವರ ಖಂಡ್ರೆ ಸಭೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.