ಕೋಲಾರ: ಭೌತಿಕ ತರಗತಿ ಆರಂಭಕ್ಕೆ ಭರದ ಸಿದ್ದತೆ


Team Udayavani, Aug 18, 2021, 2:36 PM IST

Preparing for the start of class

ಕೋಲಾರ: ಅಂತೂ ಇಂತೂ ಶಾಲಾ ಕಾಲೇಜುಆರಂಭಿಸಲು ಸರಕಾರ ಮಾರ್ಗಸೂಚಿ ಹೊರಡಿಸಿದ್ದು,ಕೋಲಾರ ಜಿಲ್ಲೆಯಲ್ಲಿ ಸಿದ್ಧತೆ ಆರಂಭವಾಗಿದೆ.ಶೇ.2ಕ್ಕಿಂತಲೂ ಕಡಿಮೆ ಕೊರೊನಾ ಪಾಸಿಟಿವಿಟಿ ದರಇರುವ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಭೌತಿಕತರಗತಿಗಳನ್ನುಮಾರ್ಗಸೂಚಿಗೊಳಪಡಿಸಿಆರಂಭಿಸಲುಸರಕಾರ ಸೂಚನೆ ನೀಡಿದೆ.

ಇದರನ್ವಯ ಜಿಲ್ಲೆಯಲ್ಲಿಆ.15ರಂದು ಪಾಸಿಟಿವಿಟಿ ದರ ಶೇ.0.92 ರಷ್ಟಿದ್ದು,ಶಾಲಾ ಕಾಲೇಜು ಆರಂಭಿಸುವ ಅರ್ಹತೆಯನ್ನುಪಡೆದುಕೊಂಡಿದೆ.ಭೌತಿಕ ತರಗತಿ ಆರಂಭಕ್ಕೆ ಸಿದ್ಧತೆ: ಆರೇಳುತಿಂಗಳುಗಳ ನಂತರ ಶಾಲಾ ಕಾಲೇಜುಗಳಲ್ಲಿ ಭೌತಿಕತರಗತಿ ಆರಂಭಿಸಲು ಸಾರ್ವಜನಿಕ ಶಿಕ್ಷಣ ಮತ್ತುಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಸಡಗರದ ಸಿದ್ಧತೆಆರಂಭವಾಗಿದೆ.

ಬಹುತೇಕ ಶಿಕ್ಷಕರು ಹಾಗೂ ಮಕ್ಕಳುಶಾಲಾರಂಭಕ್ಕೆ ಸರ್ಕಾರ ಹಸಿರು ನಿಶಾನೆನೀಡಿರುವುದನ್ನು ಸ್ವಾಗತಿಸುತ್ತಿದ್ದಾರೆ. ಸರಕಾರನೀಡಿರುವ ಮಾರ್ಗಸೂಚಿ ಹಾಗೂ ಕೋವಿಡ್‌ಮಾರ್ಗಸೂಚಿಯನ್ವಯ ಯಾವುದೇ ಲೋಪಕ್ಕೆಅವಕಾಶ ನೀಡದಂತೆ ಮುನ್ನಚ್ಚರಿಕೆ ಕ್ರಮಗಳೊಂದಿಗೆಶಾಲಾ ಕಾಲೇಜು ಆರಂಭಿಸಲಾಗುವುದು ಎಂದುಅಧಿಕಾರಿಗಳು ತಿಳಿಸುತ್ತಿದ್ದಾರೆ.

ಹೆಚ್ಚುವರಿ ಆಗಿ ಶೇ.10 ಮಕ್ಕಳು ಸೇರ್ಪಡೆ:ಕೋಲಾರ ಜಿಲ್ಲೆಯಲ್ಲಿ ಪದವಿ ಪೂರ್ವ ಹಂತದಲ್ಲಿ ಕಳೆದವರ್ಷ 15 ಸಾವಿರಕ್ಕೂ ಮೇಲ್ಪಟ್ಟು ವಿದ್ಯಾರ್ಥಿಗಳುದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು, ಈ ಬಾರಿಶೇ.99 ಫ‌ಲಿತಾಂಶ ಎಸ್‌ಎಸ್‌ಎಲ್‌ಸಿಯಲ್ಲಿಬಂದಿರುವುದರಿಂದ ಹಿಂದಿನ ಸಾಲಿಗಿಂತಲೂ ಶೇ.10ಹೆಚ್ಚಿನ ಮಕ್ಕಳು ಕಾಲೇಜುಗಳಿಗೆ ದಾಖಲಾಗುವ ನಿರೀಕ್ಷೆಹೊಂದಲಾಗಿದೆ.ಪದವಿ ಪೂರ್ವ ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳಿಂದ ಹೊರಡುವ ಮಾರ್ಗಸೂಚಿಗಾಗಿಕಾಯುತ್ತಿದ್ದು, ಅದರಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲುಸಜ್ಜಾಗಿದ್ದಾರೆ.

ಪೂರ್ವಭಾವಿಯಾಗಿ ಈಗಾಗಲೇ ಶಾಲಾಕಾಲೇಜುಗಳ ಸ್ವತ್ಛತೆ, ಕೋವಿಡ್‌ ಮಾರ್ಗಸೂಚಿಗಳನ್ನುಅನುಸರಿಸಲು ಸಿದ್ಧತೆ ನಡೆಸುತ್ತಿದ್ದಾರೆ.ಆ.19ರಿಂದ ಪುನರಾವರ್ತಿತ ಅಭ್ಯರ್ಥಿಗಳಿಗೆದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುವುದರಿಂದಪರೀಕ್ಷಾ ಕೇಂದ್ರಗಳಾಗಿರುವ ತರಗತಿಗಳನ್ನುಸ್ವತ್ಛಗೊಳಿಸಿಕೊಳ್ಳಲಾಗಿದೆ.

ಪರೀಕ್ಷೆಯನ್ನು ಸುಗಮವಾಗಿನಡೆಸಲು ಡೀಸಿ, ಎಡೀಸಿ ಸಭೆ ನಡೆಸಿ ನೀಡುತ್ತಿರುವಸೂಚನೆಗಳನ್ನು ಈಗಾಗಲೇ ಪಾಲಿಸುತ್ತಿದ್ದಾರೆ.
ಮಕ್ಕಳ ಹಂತದಲ್ಲಿ: ಸುದೀರ್ಘ‌ ರಜೆ ಅನುಭವಿಸಿ,ಆನ್‌ಲೈನ್‌ ತರಗತಿಗಳಲ್ಲಿ ಮುಳುಗಿರುವ ಮಕ್ಕಳುಶಾಲಾ ಕಾಲೇಜಿಗೆ ತೆರಳಲು ಉತ್ಸುಕರಾಗಿದ್ದಾರೆ. ಶಾಲಾಆರಂಭಿಸಲು ಸರಕಾರ ತೆಗೆದುಕೊಂಡಿರುವ ನಿರ್ಧಾರಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಚೈತನ್ಯ ಬರಲುಕಾರಣವಾಗಿದೆ. ಕೋವಿಡ್‌ ಎರಡು ಮೂರು ಅಲೆಗಳಅಬ್ಬರದಲ್ಲಿ ಶಾಲಾ ಕಾಲೇಜುಗಳು ಆರಂಭವಾಗದೆಯೇಪರೀಕ್ಷೆ ನಡೆಸುತ್ತಾರೆಯೇ ಎಂಬ ಆತಂಕದಲ್ಲಿದ್ದಮಕ್ಕಳಿಗೆ ಕಾಲೇಜಿಗೆ ಹೋಗುವ ಅವಕಾಶ ಸಿಗುತ್ತಿರುವುದು ಸಂತಸಕ್ಕೆ ಕಾರಣವಾಗಿದೆ. ಇದರ ನಡುವೆಯೂಪೋಷಕರಲ್ಲಿ ಕೊರೊನಾ ಸೋಂಕು ಹರಡುವ ಭೀತಿಇದೆಯಾದರೂ,ಈಭಯವನ್ನು ಕೋವಿಡ್‌ಮಾರ್ಗಸೂಚಿಯನ್ನು ಕಡ್ಡಾಯವಾಗಿ ಅನುಸರಿಸುವಮೂಲಕ ನಿವಾರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಮತ್ತು ಪದವಿ ಪೂರ್ವ ಶಿಕ್ಷಣಇಲಾಖೆ ಸಜ್ಜಾಗಿದೆ.

ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

isreal

Coastal People in Israel: ಸದ್ಯ ಸುರಕ್ಷಿತ, ಆದರೂ ಆದರೆ ಭವಿಷ್ಯವೇನು ಎಂಬ ಆತಂಕ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

Kota-poojary

Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು

adike

Areca nut; ಬಳಲಿರುವ ಅಡಿಕೆಗೆ ಚೀನ ವೈರಸ್‌ ಸಿಡಿಲು!

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

isreal

Coastal People in Israel: ಸದ್ಯ ಸುರಕ್ಷಿತ, ಆದರೂ ಆದರೆ ಭವಿಷ್ಯವೇನು ಎಂಬ ಆತಂಕ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

Kota-poojary

Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.