78 ಸಾವಿರ ಆಸ್ತಿ ಮಾಲೀಕರಿಗೆ ನೋಟಿಸ್‌?

1,021 ಮಂದಿಗೆ ಸದ್ಯಕ್ಕೆ ನೋಟಿಸ್‌ ; ಲಾಕ್‌ಡೌನ್‌ನಿಂದ ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಸಂಕಷ್ಟ

Team Udayavani, Aug 19, 2021, 2:08 PM IST

78 ಸಾವಿರ ಆಸ್ತಿ ಮಾಲೀಕರಿಗೆ ನೋಟಿಸ್‌?

ಬೆಂಗಳೂರು: ಕೋವಿಡ್‌ ಲಾಕ್‌ಡೌನ್‌ನಿಂದ ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ತೀವ್ರ ಆರ್ಥಿಕ ಸಂಕಷ್ಟ…ಮತ್ತೊಂದೆಡೆ, ಪಾಲಿಕೆ ನೀಡುತ್ತಿರುವ ಆಸ್ತಿ ತೆರಿಗೆ ಬಾಕಿ ವಸೂಲಿ ಹಾಗೂ ದಂಡದ ಬಡ್ಡಿ ಪಾವತಿ ನೋಟಿಸ್‌ನಿಂದ ಸಾಲದ ಸುಳಿಗೆ ಸಿಲುಕುವ ಭೀತಿ!

ಇದು, ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರು ಪ್ರಸ್ತುತ ಎದುರಿಸುತ್ತಿರುವ ಸಂಕಷ್ಟಗಳು. ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ವಲಯ
ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡ ಆಸ್ತಿ ಮಾಲೀಕರು, ದಂಡ ಮತ್ತು ದಂಡದ ಬಡ್ಡಿ ಪಾವತಿಸುವ ಸುಳಿಗೆ ಸಿಲುಕಿದ್ದಾರೆ. ಈ ನಡುವೆ
ಸರ್ಕಾರದಿಂದ ದಂಡ ವಸೂಲಾತಿ ತಗ್ಗಿಸುವ ಹಾಗೂ ರದ್ದುಗೊಳಿಸುವ ವಿನಾಯಿತಿ ಸಿಗುಬಹುದೇ ಎಂದು ದಿನ ಎಣಿಸುತ್ತಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ತಪ್ಪಾಗಿ ವಲಯ ವರ್ಗೀಕರಣ ಘೋಷಿಸಿಕೊಂಡ 78 ಸಾವಿರ ಆಸ್ತಿ ಮಾಲೀಕರಿಗೆ ಪಾಲಿಕೆಯಿಂದ ನೋಟಿಸ್‌ ನೀಡಲು ನಿರ್ಧರಿಸಲಾಗಿದೆ.

ಮಾರ್ಚ್‌ ತಿಂಗಳಲ್ಲೇ ಇಷ್ಟು ನೋಟಿಸ್‌ಗಳು ಜನರೇಟ್‌ ಆದರೂ, ಪಾಲಿಕೆ ಕಂದಾಯ ಅಧಿಕಾರಿಗಳು ಈವರೆಗೂ ವಲಯ ವರ್ಗೀಕರಣದಡಿ ತಪ್ಪಾಗಿ ಆಸ್ತಿ ತೆರಿಗೆ ಘೋಷಿಸಿಕೊಂಡ ಕೇವಲ 1,021 ಆಸ್ತಿ ಮಾಲೀಕರಿಗೆ ಮಾತ್ರ ದಂಡ ಹಾಗೂ ದಂಡದ ಬಡ್ಡಿ ಮೊತ್ತವನ್ನು
ಪಾವತಿಸುವಂತೆ ನೋಟಿಸ್‌ ನೀಡಿದ್ದಾರೆ. ಮತ್ತೊಂದೆಡೆ, ಪಾಲಿಕೆ ವ್ಯಾಪ್ತಿಯಲ್ಲಿನ 481 ಆಸ್ತಿ ಮಾಲೀಕರು, ಸ್ವಯಂಪ್ರೇರಿತವಾಗಿ ಆನ್‌ಲೈನ್‌ನಲ್ಲಿ
ಪರಿಶೀಲನೆ ನಡೆಸಿ ತಾವೇ ಖುದ್ದಾಗಿ ಬಡ್ಡಿ ಹಾಗೂ ದುಪ್ಪಟ್ಟು ದಂಡದ ಮೊತ್ತದೊಂದಿಗೆ ವ್ಯತ್ಯಾಸದ ಹಣವನ್ನೂ ಪಾವತಿ ಮಾಡಿದ್ದಾರೆ. ಜೂ.2ರ ವೇಳೆಗೆ ತಪ್ಪಾಗಿ ವಲಯ ವರ್ಗೀಕರಣಘೋಷಿಸಿಕೊಂಡ ಒಟ್ಟು 1,502 ಆಸ್ತಿ ಮಾಲೀಕರು ಒಟ್ಟು 3.57 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿ ಮಾಡಿದ್ದಾರೆ ಎಂದು ಪಾಲಿಕೆಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ : ಬಿಜೆಪಿಗೆ ಸಾಧ್ಯವಾದೀತೆ ಮಿಷನ್‌-60?

ಪಾಲಿಕೆಗೆ 116 ಕೋಟಿ ರೂ. ನಷ್ಟ: ನಗರದಲ್ಲಿ ಒಟ್ಟು 22 ಲಕ್ಷ ಆಸ್ತಿಗಳಿದ್ದು, ಈ ಪೈಕಿ 78 ಸಾವಿರ ಆಸ್ತಿ ಮಾಲೀಕರು ತಮ್ಮ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿ ಕೊಂಡಿದ್ದಾರೆ. ಅಂದರೆ, “ಎ’ ವಲಯದಲ್ಲಿ ಆಸ್ತಿ ಇದ್ದವರು ಆಸ್ತಿ ತೆರಿಗೆ ಪಾವತಿ ವೇಳೆ “ಬಿ’ ವಲಯವನ್ನು ನಮೂದಿಸಿ ಅದಕ್ಕನುಗುಣವಾಗಿ ಕಡಿಮೆ ತೆರಿಗೆ ಪಾವತಿಸಿದ್ದಾರೆ. ಅನೇಕ ಆಸ್ತಿ ಮಾಲೀಕರು, ಬದಲಾದ ವ್ಯವಸ್ಥೆಯ ಅರಿವಿಲ್ಲದೆ ಆಕಸ್ಮಿಕವಾಗಿ ತಪ್ಪು ವಲಯ ನಮೂದಿಸಿದ್ದಾರೆ. ಮತ್ತೊಂದೆಡೆ, ಹಲವು ವಾಣಿಜ್ಯ ಆಸ್ತಿಗಳ ಮಾಲೀಕರು ಕಡಿಮೆ ಆಸ್ತಿ ತೆರಿಗೆ ಪಾವತಿಸಲು ಉದ್ದೇಶ ಪೂರ್ವಕವಾಗಿ ತಪ್ಪು ವಲಯ ಘೋಷಿಸಿದ್ದಾರೆ. ಇದರಿಂದ ಪಾಲಿಕೆಗೆ 116 ಕೋಟಿ ರೂ. ಆದಾಯ ನಷ್ಟವಾಗಲಿದೆ ಎಂದು ಮಾಹಿತಿ
ನೀಡಿದ್ದಾರೆ.

ವಲಯ ವರ್ಗೀಕರಣ ಹೇಗೆ?: ಪಾಲಿಕೆ ಆಸ್ತಿ ತೆರಿಗೆ ಪಾವತಿಸಲು ಇದ್ದ ವ್ಯವಸ್ಥೆಯನ್ನು 2016ರಲ್ಲಿ ಬದಲಾವಣೆ ಮಾಡಿತ್ತು. “ಎ’ ಎಂದರೆ ಅತಿ ಹೆಚ್ಚು ತೆರಿಗೆ ವಿಧಿಸುವ ಹಾಗೂ “ಎಫ್’ ಎಂದರೆ ಕಡಿಮೆ ತೆರಿಗೆ ಪಾವತಿಸುವ ವಲಯಗಳಾಗಿ ವಿಂಗಡಿಸಲಾಯಿತು. ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯಾ ಪ್ರದೇಶದ ವ್ಯಾಪ್ತಿಯಲ್ಲಿ ನಿಗದಿಪಡಿಸಿರುವ ಆಸ್ತಿಯ ಮಾರ್ಗಸೂಚಿ ದರದ ಆಧಾರದ ಮೇಲೆ “ಎ’ ವಲಯದಿಂದ “ಎಫ್’ ವಲಯದ ತನಕ ಆರು (ಎ, ಬಿ, ಸಿ, ಡಿ, ಇ, ಎಫ್) ರೀತಿಯ ವಲಯ ವರ್ಗೀಕರಣ ಮಾಡಿದೆ. ಇದನ್ನು ಆಧಾರವಾಗಿಟ್ಟುಕೊಂಡು ಆಯಾ ವಲಯ ವರ್ಗೀಕರಣದ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರು, ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ ಯಡಿ ತಮ್ಮ ಆಸ್ತಿಗಳ ತೆರಿಗೆಯನ್ನು ಲೆಕ್ಕ ಹಾಕಿ ಪಾಲಿಕೆಗೆ ತೆರಿಗೆ ಪಾವತಿಸಬೇಕು. ಆದರೆ, ಅತಿಹೆಚ್ಚು ಮಾರ್ಗಸೂಚಿ ದರವಿರುವ “ಎ’ ವಲಯ ವ್ಯಾಪ್ತಿಯ ಆಸ್ತಿ ಮಾಲೀಕರು”ಬಿ’ಅಥವಾ”ಸಿ’ ವಲಯದಲ್ಲಿರುವ ಆಸ್ತಿಗಳನ್ನು ಘೋಷಿಸಿಕೊಂಡಿದ್ದಾರೆ. ಆ ಮೂಲಕ ಪಾಲಿಕೆಗೆ ಕಡಿಮೆ ಆಸ್ತಿ ತೆರಿಗೆ ಕಟ್ಟಿರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಬಡ್ಡಿ, ದಂಡಕ್ಕೆ ಸಿಗುವುದೇ ವಿನಾಯಿತಿ?
ನಗರದಲ್ಲಿ ಒಟ್ಟು 22 ಲಕ್ಷ ಆಸ್ತಿಗಳಿದ್ದು, 78,000 ಆಸ್ತಿಗಳ ಮಾಲೀಕರು 2016ರಲ್ಲಿ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿ ಕೊಂಡಿದ್ದಾರೆ. ಇದರಿಂದಾಗಿ ಪಾಲಿಕೆಗೆ ಸುಮಾರು 116 ಕೋಟಿ ರೂ.ಆದಾಯ ಖೋತಾ ಆಗಿದೆ.ಈ ವಿಷಯವನ್ನು ಯೋಜನೆ ಜಾರಿ ಮಾಡಿದಾಗಲೇ ಆಸ್ತಿ ಮಾಲೀಕರಿಗೆ ಮನವರಿಕೆ ಮಾಡಬೇಕಿತ್ತು. ಅದರೆ, ಹಾಗೆ ಮಾಡದೇ 2016ರಿಂದ ಅನ್ವಯವಾಗುಂತೆ ಇದರ ಮೇಲೆ 89 ಕೋಟಿ ರೂ. ಬಡ್ಡಿ ಮತ್ತು ಮಾಡಿದ ತಪ್ಪಿಗೆ 232 ಕೋಟಿ ರೂ. ದಂಡ ವಿಧಿಸಲು ಮುಂದಾಗಿದೆ. ಇದರ ಬದಲು ಬಡ್ಡಿ ಮತ್ತು ದಂಡ ಪಾವತಿಗೆ ವಿನಾಯಿತಿ ನೀಡಬೇಕು. ಅಲ್ಲದೆ,ಆಸ್ತಿತೆರಿಗೆಯನ್ನುಮಾತ್ರಕಟ್ಟಿಸಿಕೊಳ್ಳಬೇಕು ಎಂದು ಆಸ್ತಿ ತೆರಿಗೆ ಮಾಲೀಕರು, ಪಾಲಿಕೆಗೆ ಅವಲೊತ್ತು ಕೊಂಡಿದ್ದಾರೆ

ತಪ್ಪು ವಲಯ ವರ್ಗೀಕರಣಕ್ಕೆ ದುಪ್ಪಟ್ಟು ದಂಡ, ಬಡ್ಡಿ
ವಲಯ ವರ್ಗೀಕರಣದ ನಿಯಮಾವಳಿ ಅನ್ವಯ ತಪ್ಪಾಗಿ ಆಸ್ತಿ ವರ್ಗೀಕರಣ ಮಾಡಿಕೊಂಡು ಆಸ್ತಿ ತೆರಿಗೆ (ಪ್ರಾಪರ್ಟಿ ಟ್ಯಾಕ್ಸ್‌) ಕಟ್ಟಿದ ಆಸ್ತಿಗಳ ವಿವರವನ್ನು ಪಾಲಿಕೆಯ ಆಸ್ತಿ ತಂತ್ರಾಂಶದ ಮೂಲಕ ಪತ್ತೆ ಮಾಡಲಾಗಿದೆ. ಆ ಮೂಲಕ 78,524 ನೋಟಿಸ್‌ಗಳ ಆಸ್ತಿ ಮಾಲೀಕರಿಗೆ ಕಂದಾಯ ವಿಭಾಗದವರು ವ್ಯತ್ಯಾಸ ಆಸ್ತಿ ತೆರಿಗೆ ಮೊತ್ತದೊಂದಿಗೆ ದಂಡ ಹಾಗೂ ದಂಡದ ಬಡ್ಡಿಯನ್ನು ಸೇರಿಸಿ ನೋಟಿಸ್‌(ಡಿಮ್ಯಾಂಡ್‌ ನೋಟಿಸ್‌) ನೀಡಿದ್ದಾರೆ. ಅದರಂತೆ, ವಲಯ ವರ್ಗೀಕರಣದಲ್ಲಿ 100 ರೂ. ವ್ಯತ್ಯಾಸದ ಆಸ್ತಿ ತೆರಿಗೆಕಂಡು ಬಂದರೆ ಆಸ್ತಿ ಮಾಲೀಕರು, ವ್ಯತ್ಯಾಸ
ಮೊತ್ತ ಹಾಗೂ ಅದಕ್ಕೆ ಎರಡು ಪಟ್ಟು ದಂಡವಾದ 200 ರೂ. ಹಾಗೂ ಬಡ್ಡಿಯೊಂದಿಗೆ ತೆರಿಗೆ ಪಾವತಿಸ ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡ ಆಸ್ತಿ ಮಾಲೀಕರಿಗೆ ದಂಡ ಮತ್ತು ದಂಡದ ಬಡ್ಡಿ ಪಾವತಿಗೆ ನೀಡಿರುವ ನೋಟಿಸ್‌ ಬಗ್ಗೆ ಪರಿಶೀಲಿಸಲಾಗುತ್ತಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಬಳಿಕ, ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ.
-ರಾಕೇಶ್‌ ಸಿಂಗ್‌,
ಬಿಬಿಎಂಪಿ ಆಡಳಿತಾಧಿಕಾರಿ

ತಪ್ಪಾಗಿ ವಲಯ ವರ್ಗೀಕರಣವನ್ನು ಘೋಷಿಸಿಕೊಂಡ ಆಸ್ತಿ ಮಾಲೀಕರಿಗೆ ನೋಟಿಸ್‌ ನೀಡಲಾಗಿದೆ. ದಂಡ ಪಾವತಿ ತಗ್ಗಿಸಲು, ರದ್ದು ಗೊಳಿಸುವಂತೆ ಆಸ್ತಿಮಾಲೀಕರು ಮನವಿ ಸಲ್ಲಿಸಿದ್ದು ಪರಿಶೀಲನೆ ನಡೆಸಿ, ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು.
-ಡಾ.ಎಸ್‌.ಬಸವರಾಜ್‌,
ಪಾಲಿಕೆ ವಿಶೇಷ ಆಯುಕ್ತ(ಕಂದಾಯ)

– ವಿಕಾಸ್‌ ಆರ್‌. ಪಿಟ್ಲಾಲಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.