ಕಾಂಗ್ರೆಸ್ ಚುನಾವಣಾ ನಿರೀಕ್ಷಕ ಪಿ.ಚಿದಂಬರಂ ಮುಂದಿನ ವಾರ ಗೋವಾಗೆ.!
Team Udayavani, Aug 20, 2021, 3:32 PM IST
ಪಣಜಿ : ಕಾಂಗ್ರೇಸ್ ಪಕ್ಷದ ವರಿಷ್ಠ, ಚುನಾವಣಾ ನಿರೀಕ್ಷಕ ಪಿ.ಚಿದಂಬರಂ ರವರು ಗೋವಾ ರಾಜ್ಯ ವಿಧಾನಸಭಾ ಚುನಾವಣೆಗೆ ರಣನೀತಿ ಸಿದ್ಧಪಡಿಸಲು ಮುಂದಿನ ವಾರ ಗೋವಾಗೆ ಆಗಮಿಸಲಿದ್ದಾರೆ.
ಕಾಂಗ್ರೇಸ್ ಪಕ್ಷವು ಸದ್ಯ ಉಮೇದುವಾರರ ಆಯ್ಕೆ ಆರಂಭಿಸಿದ್ದು, ಶೇ 80 ರಷ್ಟು ಹೊಸ ಮುಖಗಳಿಗೆ ಚುನಾವಣಾ ಸ್ಫರ್ಧೆಗೆ ಅವಕಾಶ ನೀಡಲು ಕಾಂಗ್ರೇಸ್ ಪಕ್ಷ ನಿರ್ಧರಿಸಿದೆ ಎನ್ನಲಾಗಿದೆ.
ಇದನ್ನೂ ಓದಿ : ಸತ್ಯಮಂಗಳದಲ್ಲಿ ಶಿವಣ್ಣ: ಮಮ್ಮಿ ಲೋಹಿತ್ ನಿರ್ದೇಶನ-ಬೈರಾಗಿ ಕೃಷ್ಣ ಸಾರ್ಥಕ್ ನಿರ್ಮಾಣ
ಕಳೆದ ಬಾರಿ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಗೆಲುವು ಸಾಧಿಸಿದ್ದ 10 ಜನ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೇಸ್ ಪಕ್ಷ ಇದೀಗ ಹೊಸ ಮುಖಗಳಿಗೆ ಟಿಕೇಟ್ ನೀಡಲು ಮುಂದಾಗಿದೆ.
ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೇಸ್ ಪಕ್ಷವು ಗೋವಾದಲ್ಲಿ ರಣನೀತಿ ರೂಪಿಸಲು ಕಾಂಗ್ರೇಸ್ ಪಕ್ಷದ ವರಿಷ್ಠ ಚುನಾವಣಾ ನಿರೀಕ್ಷಕರನ್ನಾಗಿ ಪಿ.ಚಿದಂಬರಂ ರವರನ್ನು ನಿಯುಕ್ತಿಗೊಳಿಸಿದೆ.
ಈ ಹಿನ್ನೆಲೆಯಲ್ಲಿ ಪಿ.ಚಿದಂಬರಂ ರವರು ಮುಂದಿನವಾರ ಗೋವಾಕ್ಕೆ ಆಗಮಿಸಲಿದ್ದಾರೆ ಎಂದು ಕಾಂಗ್ರೇಸ್ ಪಕ್ಷದ ಮೂಲದಿಂದ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ: ನಾಗರ ಪಂಚಮಿ ಆಚರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.