ರವಿಚಂದ್ರನ್ ಚಿನ್ನದ ಹೃದಯದ ವ್ಯಕ್ತಿ : ನಟ ಜಗ್ಗೇಶ್ ಹೀಗೇ ಹೇಳಿದ್ದೇಕೆ ?
Team Udayavani, Aug 20, 2021, 6:35 PM IST
ಬೆಂಗಳೂರು : ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಬಂಗಾರದ ಹೃದಯ ಹೊಂದಿರುವ ವ್ಯಕ್ತಿ ಎಂದು ಸ್ಯಾಂಡಲ್ವುಡ್ ನಟ ಜಗ್ಗೇಶ್ ಅವರು ನುಡಿದಿದ್ದಾರೆ.
ಚಿತ್ರರಂಗದಲ್ಲಿ ತಮ್ಮ ಆರಂಭಿಕ ದಿನಗಳ ಕುರಿತು ಮಾತನಾಡಿರುವ ಜಗ್ಗೇಶ್ ಅವರು, ಗಣೇಶನ ಹಬ್ಬದಂದು 200 ರೂ. ಕೇಳಿದ್ದಕ್ಕೆ ರವಿಚಂದ್ರನ್ ಅವರು 500 ರೂ. ಕೊಟ್ಟು ಕಳುಹಿಸಿದ ಪ್ರಸಂಗವನ್ನು ನೆನೆದು ಭಾವುಕರಾದರು.
ಇತ್ತೀಚಿಗೆ ರಂಗನಾಯಕ ಸಿನಿಮಾ ಮಾಧ್ಯಮಗೋಷ್ಠಿಯಲ್ಲಿ ಹಿಂದಿನ ದಿನಗಳನ್ನು ಸ್ಮರಿಸಿದ ಜಗ್ಗೇಶ್ ಅವರು, ಅಂದು ಹಿರಿಯ ಕಲಾವಿದರ ಕಿರಿಯರ ಕಷ್ಟ-ಸುಖ ವಿಚಾರಿಸುತ್ತಿದ್ದಾರೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿದ್ದರು. ಅದರಲ್ಲೂ ಅಂಬರೀಶ್ ಹಾಗೂ ಪ್ರಭಾಕರ್ ಅವರನ್ನಂತೂ ಮರೆಯಲು ಸಾಧ್ಯವಿಲ್ಲ. ತಮ್ಮ ಸಿನಿಮಾ ತಂಡದ ಕಿರಿಯ ಕಲಾವಿದರ ಬಗ್ಗೆ ಅವರು ತುಂಬಾ ಕಾಳಜಿ ವಹಿಸುತ್ತಿದ್ದರು. ಅವರೇ ಬಂದು ಕಷ್ಟ ಸುಖ ಆಲಿಸುವವರು. ಆದರೆ, ಇಂದು ಯಾಂತ್ರಿಕೃತ ಬದುಕು ಆಗಿದೆ ಎಂದರು ಜಗ್ಗೇಶ್.
ಇನ್ನು ಜಗ್ಗೇಶ್ ಅವರು ಸಣ್ಣಪುಟ್ಟ ಪಾತ್ರಗಳನ್ನು ಮಾಡುತ್ತ ಹೀರೋ ಆದವರು. ಅವರು ರವಿಚಂದ್ರನ್ ಅವರ ರಣಧೀರ ಹಾಗು ಯುದ್ಧಕಾಂಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ನಟಿಸಿದ್ದಾರೆ. ರವಿಚಂದ್ರನ್ ಹಾಗೂ ಜಗ್ಗೇಶ್ ಅವರದು ಹಳೆಯ ಸ್ನೇಹ. ಅದು ಇಂದಿಗೂ ಹಾಗೆ ನಡೆದುಕೊಂಡು ಬಂದಿದೆ. ಈ ಹಿಂದೆಯು ಸಾಕಷ್ಟು ಭಾರಿ ರವಿಮಾಮನ ಹೃದಯ ವೈಶಾಲ್ಯತೆ ಬಗ್ಗೆ ಜಗ್ಗೇಶ್ ಅವರು ನುಡಿದಿದ್ದುಂಟು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.