ಸತ್ಕಾರ್ಯದಿಂದ ಮನುಷ್ಯ ಜನ್ಮ ಸಾರ್ಥಕ: ವಿಧುಶೇಖರ ಭಾರತಿ ಸ್ವಾಮೀಜಿ
Team Udayavani, Aug 20, 2021, 6:50 PM IST
ಶೃಂಗೇರಿ: ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡ ಸಂಸ್ಕಾರ, ಪುಣ್ಯ ಕರ್ಮದ ಫಲವನ್ನು ಮುಂದಿನ ಜನ್ಮದಲ್ಲಿ ಪಡೆಯುತ್ತಾರೆ ಎಂದು ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಬಾರತೀ ಸ್ವಾಮಿಗಳು ಹೇಳಿದರು.
ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಟಾರ ಬ್ರಾಹ್ಮಣ ಮಹಾಸಭಾದಿಂದ ಗುರುವಾರ ಏರ್ಪಡಿಸಿದ್ದ ಗುರುದರ್ಶನ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಮನುಷ್ಯ ಜನ್ಮ ಸಾರ್ಥಕವಾಗಬೇಕಾದರೆ ನಾವು ಸತ್ಕಾರ್ಯ ಮಾಡಬೇಕು. ನಿತ್ಯ ಜೀವನದಲ್ಲಿ ಕರ್ಮಾನುಷ್ಠಾನ ಮಾಡುವುದರ ಮೂಲಕ ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು. ಭಗವಂತನ ಆರಾಧನೆಗೆ ಹಲವಾರು ಮಾರ್ಗವಿದೆ. ಅದರಲ್ಲಿ ನಮಗೆ ಸಾಧ್ಯವಿರುವ ಮಾರ್ಗವನ್ನು ಆಯ್ಕೆ ಮಾಡಿಕೊಂಡು ಅದರಂತೆ ದೇವರನ್ನು ಸ್ಮರಿಸಬೇಕು.
ಮನುಷ್ಯ ಜನ್ಮವಿರುವುದೇ ಅನುಭವಿಸುವುದಕ್ಕೆ ಎಂದು ತಿಳಿಯಬಾರದು. ಸಮಯವನ್ನು ವ್ಯರ್ಥ ಮಾಡದೆ ಕಾಲಹರಣ ಮಾಡದೆ ನಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕು. ಧರ್ಮಾಚರಣೆ ಮಾಡುವುದರ ಮೂಲಕ ಪ್ರತಿಯೊಬ್ಬರೂ ಉನ್ನತ ಸ್ಥಾನ ಪಡೆಯಬಹುದು ಎಂದರು.
ಮಹಾಸಭಾದ ಅಧ್ಯಕ್ಷ ಜಿ.ಸಿ. ಗೋಪಾಲಕೃಷ್ಣ ಮಾತನಾಡಿ, ಜಗದ್ಗುರುಗಳ ಆದೇಶದಂತೆ ಸಮಾಜ ಬಾಂಧವರು ಕಳೆದ ವರ್ಷ ಕೋಟಿ ಗಾಯತ್ರಿ ಜಪ ಕೈಗೊಂಡಿದ್ದು,ಈ ವರ್ಷವೂ ಅದನ್ನು ಮುಂದುವರಿಸಲಾಗುತ್ತದೆ. ಮಹಿಳೆಯರು ಲಲಿತಾ ಸಹಸ್ರನಾಮ ಪಾರಾಯಣ ನಡೆಸಲು ಶ್ರೀಗಳು ಸೂಚಿಸಿದ್ದು,ಅದರಂತೆ ಲಲಿತಾ ಸಹಸ್ರನಾಮ ಮಾಡಲಿದ್ದಾರೆ ಎಂದರು. ಮಹಾಸಭಾದಿಂದ ಜಗದ್ಗುರುಗಳಿಗೆ ಸಮಷ್ಠಿ ಬಿ ವಂದನೆ, ಫಲ- ಪುಷ್ಪ ಸಮರ್ಪಿಸಲಾಯಿತು. ಮಹಾಸಭಾದ ಪದಾ ಧಿಕಾರಿಗಳಾದ ಗೋಳಾರ್ ನಾಗೇಂದ್ರರಾವ್, ಹುಲ್ಕುಳಿ ದೀಪಕ್, ಕೋಟೇತೋಟ ವಿಜಯರಂಗ, ಪ್ರವೀಣ್ ಕೆಸವೆ, ಹೆಬ್ಬಿಗೆ ಗಣೇಶ್, ಮೇಗೂರು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ತಲವಾನೆ ಪ್ರಕಾಶ್, ಶ್ರೀ ಶಾರದಾ ಸೌಹಾರ್ದ ಸಹಕಾರ ಸಂಘದ ನಿರ್ದೇಶಕರು ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Belthangady: ತೋಡಿಗೆ ಅಡಿಕೆ ಮರವೇ ಸಂಕ!
Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.