ಒಂದೂವರೆ ವರ್ಷದ ಬಳಿಕ ಗಂಟೆ ಸದ್ದು

ಗುರು-ಶಿಷ್ಯರ ಸಮಾಗಮಕ್ಕೆ ಕೂಡಿಬಂದ ಕಾಲ | ಶಾಲೆ ಆವರಣದಲ್ಲಿ ಇಂದಿನಿಂದ ಮಕ್ಕಳ ಕಲರವ ,  ಮೊದಲ ಹಂತದಲ್ಲಿ 9-10ನೇ ತರಗತಿ ಆರಂಭ | ಭೌತಿಕ ಶಿಕ್ಷಣಕ್ಕೆ ಪಾಲಕರ ಲಿಖೀತ ಒಪ್ಪಿಗೆ ಕಡ್ಡಾಯ 

Team Udayavani, Aug 23, 2021, 1:29 PM IST

hrtyrt

ವರದಿ: ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ಒಂದುವರೆ ವರ್ಷದಿಂದ ಮರೆಯಾಗಿದ್ದ ಢಣ ಢಣ ಗಂಟೆಯ ಸದ್ದು, ಕಪ್ಪು ಹಲಗೆಯ ಪಾಠ-ಪ್ರವಚನ, ಆವರಣದಲ್ಲಿ ಮಕ್ಕಳ ಕಲರವ, ಗುರು-ಶಿಷ್ಯರ ಸಮಾಗಮಕ್ಕೆ ಸೋಮವಾರ ಕಾಲ ಕೂಡಿ ಬಂದಿದೆ.

ಶಾಲೆಗಳ ಪುನರಾರಂಭಕ್ಕೆ ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಇನ್ನಿಲ್ಲದ ಕಸರತ್ತು ನಡೆದಿವೆ. ವಿದ್ಯಾರ್ಥಿಗಳ, ಶಿಕ್ಷಕರ ಸುರಕ್ಷತೆಗೆ ಮಾರ್ಗಸೂಚಿ ರೂಪಿಸಲಾಗಿದ್ದು, ಮಕ್ಕಳ ಬರುವಿಕೆಗಾಗಿ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ. ಶಾಲೆಗಳ ಆರಂಭಕ್ಕೆ ಕಳೆದೊಂದು ವಾರದಿಂದ ಸುರಕ್ಷಿತ ಕ್ರಮಗಳ ಬಗ್ಗೆ ತಾಲೀಮು ನಡೆದಿದೆ. ಮೊದಲ ಹಂತದಲ್ಲಿ 9, 10 ನೇ ತರಗತಿಗಳನ್ನು ಆರಂಭಕ್ಕೆ ಚಾಲನೆ ನೀಡಲಾಗಿದ್ದು, ಈಗಾಗಲೇ ಪಾಲಕರ, ಪೋಷಕರ ಸಭೆಗಳನ್ನು ನಡೆಸಿ ಅವರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ.

ಆನ್‌ ಲೈನ್‌ ಶಿಕ್ಷಣಕ್ಕೆ ತೊಂದರೆ, ಆರ್ಥಿಕ ಸಮಸ್ಯೆ ಇರುವ ಪಾಲಕರು, ಹೆಚ್ಚಿನ ಪ್ರಮಾಣದಲ್ಲಿ ಗ್ರಾಮೀಣ ಭಾಗದ ಜನರು ಭೌತಿಕ ಶಿಕ್ಷಣಕ್ಕೆ ಒಲವು ತೋರಿದ್ದಾರೆ. ಶಿಕ್ಷಕರ, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸರಕಾರ ನೀಡಿರುವ ಎಸ್‌ಒಪಿ ಪ್ರಕಾರ ತರಗತಿಗಳು ನಡೆಯಲಿದ್ದು, ಜಿಲ್ಲೆಯಲ್ಲಿರುವ ಎಲ್ಲಾ ಪ್ರೌಢಶಾಲೆಗಳನ್ನು ಶುಚಿಗೊಳಿಸಿ ಸಿದ್ಧತೆ ಮಾಡಲಾಗಿದೆ.

ಸುರಕ್ಷತಾ ಕ್ರಮಕ್ಕೆ ಒತ್ತು

ಮೂರನೇ ಅಲೆ ಮಕ್ಕಳ ಮೇಲೆ ಎನ್ನುವ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಶಾಲೆ ಆರಂಭಕ್ಕೆ ಅಧಿಕೃತ ಮುದ್ರೆ ಬೀಳುತ್ತಿದ್ದಂತೆ ಮಕ್ಕಳ ಆರೋಗ್ಯ ತಪಾಸಣೆ, ತರಗತಿ, ಕಚೇರಿ, ಆವರಣ, ಅಡುಗೆ ಕೋಣೆ, ಪಾತ್ರೆ ಸ್ವತ್ಛಗೊಳಿಸಲಾಗಿದೆ. ತರಗತಿಯಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯ, ನಿತ್ಯವೂ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, ಪಠ್ಯಕ್ರಮದೊಂದಿಗೆ ಆರೋಗ್ಯ ವೃದ್ಧಿಗಾಗಿ ಯೋಗ, ಲಘು ವ್ಯಾಯಾಮಕ್ಕೆ ಒತ್ತು ನೀಡಲಾಗಿದೆ.

ಮನೆಯಿಂದಲೇ ಊಟ, ಉಪಹಾರ ನೀರು ತರಬೇಕಿದೆ. ಪಠ್ಯ ಸಾಮಗ್ರಿಗಳನ್ನು ಸ್ನೇಹಿತರೊಂದಿಗೆ ಹಂಚಿಕೊಳ್ಳದಿರುವ ಬಗ್ಗೆ ಜಾಗೃತಿ, ವಿದ್ಯಾರ್ಥಿ, ಶಿಕ್ಷಕರು ಹೊರತುಪಡಿಸಿ ಇತರರಿಗೆ ತರಗತಿಗಳಿಗೆ ಅವಕಾಶವಿಲ್ಲ. ಭೌತಿಕ ಶಿಕ್ಷಣಕ್ಕೆ ಪಾಲಕರ ಲಿಖೀತ ಒಪ್ಪಿಗೆ ಕಡ್ಡಾಯವಾಗಿದ್ದು, ಹಾಜರಾತಿ ಕಡ್ಡಾಯವಲ್ಲ. ಆದರೆ ಆನ್‌ ಲೈನ್‌ ಅಥವಾ ಭೌತಿಕ ಶಿಕ್ಷಣ ಎರಡರಲ್ಲಿ ಒಂದಕ್ಕಾದರೂ ಹಾಜರಾತಿ ಕಡ್ಡಾಯವಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.