ಮಗನಿಗೆ ವಿನಯ್ ಹೆಸರಿಟ್ಟ ಕುಲಕರ್ಣಿ ಅಭಿಮಾನಿ
Team Udayavani, Aug 23, 2021, 10:51 PM IST
ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಯವರು ಹಿಂಡಲಗಾ ಜೈಲಿನಿಂದ ಜಾಮೀನಾಗಿದ್ದ ದಿನವೇ ಜನ್ಮ ತಾಳಿದ ಅಭಿಮಾನಿಯೋರ್ವ ತನ್ನ ಮಗನಿಗೆ ವಿನಯ ಎಂದು ನಾಮಕರಣ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ.
ಧಾರವಾಡ ಜಿಲ್ಲೆಯ ವಿನಯ್ ಕುಲಕರ್ಣಿ ಅವರು ಪ್ರತಿನಿಧಿಸುತ್ತಿದ್ದ ಗ್ರಾಮೀಣ ಕ್ಷೇತ್ರದ ಯಾದವಾಡ ಗ್ರಾಮದ ಬಸವರಾಜ ಬೆಂಡಿಗೇರಿ ಎಂಬುವವರೇ ತಮ್ಮ ಮಗನಿಗೆ ವಿನಯ ಎಂದು ನಾಮಕರಣ ಮಾಡುವ ಮೂಲಕ ತಮ್ಮನಾಯಕನ ಬಗ್ಗೆ ಪ್ರೀತಿಯನ್ನ ತೋರಿಸಿದ್ದಾರೆ.
ವಿನಯ್ ಕುಲಕರ್ಣಿ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ ದಿನವೇ ಜನಿಸಿದ ನವಜಾತ ಶಿಶುವಿಗೆ ವಿನಯ ಎಂದು ನಾಮಕರಣ ಮಾಡಲಾಗಿದೆ. ಗ್ರಾಮೀಣ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿ ತಮ್ಮ ವರ್ಚಸ್ಸು ಹೊಂದಿದ್ದು ನಿನ್ನೆ 6 ಸಾವಿರಕ್ಕೂ ಅಧಿಕ ಜನ ಹಿಂಡಲಗಾಕ್ಕೆ ವಿನಯ್ ಸ್ವಾಗತಕ್ಕೆ ತೆರಳಿದ್ದರು.
ವಿನಯ್ ಸಚಿವರಾಗಿದ್ದಾಗ ಯಾದವಾಡ ಗ್ರಾಮದಲ್ಲಿ ಕೊಟ್ಯಂತರ ರೂಪಾಯಿ ಅನುದಾನ ತಂದು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರು.
ಅದೂ ಅಲ್ಲದೇ ಅದೇ ಗ್ರಾಮದ ನೂರಾರು ಕುಟುಂಬಗಳೊಂದಿಗೆ ವಿನಯ್ ಅವರು ಸದಾ ಒಡನಾಟ ಹೊಂದಿದ್ದು, ಇದೀಗ ವಿನಯ್ ಬಿಡುಗಡೆ ಗೆ ಕುಟುಂಬಸ್ತರಿಗೆ ತೀವ್ರ ಸಂತಸವಾಗಿದ್ದು ತಮ್ಮ ಮಗುವಿಗೆ ವಿನಯ್ ಹೆಸರಿಟ್ಟು ಅಭಿಮಾನ ಮೆರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: 2.5 ಕೋಟಿ ರೂ. ಮೌಲ್ಯದ ಕೆರೆ ಒತ್ತುವರಿ ಜಾಗ ತೆರವು ಕಾರ್ಯಾಚರಣೆ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
Bengaluru: ಚರ್ಚ್ ಸ್ಟ್ರೀಟ್ ನಲ್ಲಿದ್ದ 50 ಅನಧಿಕೃತ ಅಂಗಡಿ ತೆರವು
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.