![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 24, 2021, 7:40 AM IST
ಹೊಸದಿಲ್ಲಿ: ಬಿಜೆಪಿ ನೇತೃತ್ವದ ಎನ್ಡಿಎ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳ ಒಕ್ಕೂಟ ರಚನೆಯಾಗಲಿದ್ದು, ಮುಂದಿನ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕಣಕ್ಕಿಳಿಯುತ್ತೇವೆ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ವಿಪಕ್ಷಗಳ ಸಭೆಯ ಅನಂತರ ಖರ್ಗೆಯವರ ಈ ಹೇಳಿಕೆ ಮಹತ್ವ ಪಡೆದಿದೆ.
ನಮ್ಮ ಪಕ್ಷ ಸಕಾರಾತ್ಮಕ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸುವ ಪಾತ್ರವನ್ನು ವಹಿಸುತ್ತ ಬಂದಿದೆ. ವಿಪಕ್ಷಗಳ ಒಕ್ಕೂಟ ರಚನೆಯಲ್ಲೂ ನಮ್ಮ ನಿಲುವು ಅದೇ. ಕಾಂಗ್ರೆಸ್ನ ಹಿಂದಿನ ವರ್ಚಸ್ಸು ಮರಳಲಿದೆ. ಚುನಾವಣೆಗಳನ್ನು ಒಗ್ಗಟ್ಟಾಗಿ ಎದುರಿಸಲಿದ್ದೇವೆ ಎಂದು ಆಂಗ್ಲ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದಾರೆ.
ಮುಂಗಾರು ಅಧಿವೇಶನ ದಲ್ಲಿ ಪೆಗಾಸಸ್, ಕೊರೊನಾ ಗಳನ್ನು ಸರಕಾರ ನಿರ್ವಹಿಸಿದ ರೀತಿಯನ್ನು ಜನರಿಗೆ ಯಶಸ್ವಿ ಯಾಗಿ ವಿವರಿಸಿದ್ದೇವೆ. ವಿಪಕ್ಷಗಳು ಕೃಷಿ ಕಾಯ್ದೆ ರದ್ದು, ವಾಕ್ ಸ್ವಾತಂತ್ರ್ಯದ ರಕ್ಷಣೆ ಬಗ್ಗೆ ಚರ್ಚೆ ನಡೆಸಲು ಮನವಿ ನೀಡಿದ್ದೆವು. ಆದರೆ ಅಧಿವೇಶನ ಸರಿಯಾಗಿ ನಡೆಯದೆ ಇರಲು ಸರಕಾರದ ಧೋರಣೆ ಕಾರಣ ಎಂದು ಖರ್ಗೆ ಹೇಳಿದ್ದಾರೆ.
ಜಾತಿ ಗಣತಿ ಬೇಕು :
ಯಾರು ಬಡವರು, ಯಾರು ಯಾವ ಉದ್ಯೋಗ ನಡೆಸುತ್ತಿದ್ದಾರೆ ಎಂಬುದನ್ನು ಅರಿಯಲು ಜಾತಿ ಗಣತಿ ಬೇಕು ಎಂದು ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.
ಸಿಎಂ ಬದಲಾವಣೆಯಿಂದ ಕರ್ನಾಟಕ ಬದಲಾಗಿಲ್ಲ :
ಕರ್ನಾಟಕದಲ್ಲಿ ಬಿಜೆಪಿ ಮುಖ್ಯಮಂತ್ರಿಯನ್ನು ಬದಲಾಯಿಸಿದೆ. ಆದರೆ ಅದರಿಂದ ಪರಿಸ್ಥಿತಿಯಲ್ಲಿ ಬದಲಾವಣೆಯಾಗಿಲ್ಲ. ಹಿಂದಿನ ಸರಕಾರ ರಾಜ್ಯವನ್ನು ನಾಶಗೊಳಿಸಿದೆ. ಹಾಲಿ ಮುಖ್ಯಮಂತ್ರಿ ಹಿಂದಿನ ಸರಕಾರದಲ್ಲಿ ಸಚಿವರಾಗಿದ್ದವರು. ಹೊಸ ಮುಖ್ಯಮಂತ್ರಿಯವರು ಹಿಂದಿನ ಮುಖ್ಯಮಂತ್ರಿಯವರ ಮಾತನ್ನು ಕೇಳಲೇ ಬೇಕಾಗುತ್ತದೆ. ಹೊಸದಿಲ್ಲಿಯಲ್ಲಿ ಕುಳಿತ ಬಿಜೆಪಿ ಮುಖಂಡರು ಏನು ಮಾಡಬೇಕು ಎಂದು ನಿರ್ದೇಶನ ನೀಡುತ್ತಾರೆ. ಯಡಿಯೂರಪ್ಪನವರು ಸಿಎಂ ಆಗಿದ್ದಾಗಲೂ ಇದೇ ಮಾದರಿ ಅನುಸರಿಸಿದ್ದರು. ಕರ್ನಾಟಕ ಅತ್ಯುತ್ತಮ ಪ್ರಗತಿ ಹೊಂದಿರುವ ರಾಜ್ಯವಾಗಿತ್ತು ಎಂದು ಖರ್ಗೆ ಹೇಳಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.