ತೆರೆಯಲಿದೆ ಫ್ಲೈಓವರ್‌ ದಾರಿ ಸರ್ವಿಸ್‌ ರಸ್ತೆಯೆಡೆಗೆ


Team Udayavani, Aug 26, 2021, 3:10 AM IST

ತೆರೆಯಲಿದೆ ಫ್ಲೈಓವರ್‌ ದಾರಿ ಸರ್ವಿಸ್‌ ರಸ್ತೆಯೆಡೆಗೆ

ಕುಂದಾಪುರ: ದಶಕಗಳ ಕನಸಾದ ಶಾಸ್ತ್ರಿ ಸರ್ಕಲ್‌ ಫ್ಲೈಓವರ್‌ ಕಾಮಗಾರಿ ಮುಗಿದು ಜನರಿಂದಲೇ ಲೋಕಾರ್ಪಣೆಯಾಗಿದ್ದು  ರಾಷ್ಟ್ರೀಯ ಹೆದ್ದಾರಿಯಿಂದ ಸರ್ವಿಸ್‌ ರಸ್ತೆಗೆ ಪ್ರವೇಶ ನೀಡಲು ಕೊನೆಗೂ ಕೆಲವು ಹಂತಗಳ ಅಡೆತಡೆ ತೆರವಾಗಿದೆ. ಇನ್ನು  ಕಾಮಗಾರಿ ಮಾಡುವುದಷ್ಟೇ ಬಾಕಿ.

ವಿಳಂಬ :

ಹೆದ್ದಾರಿ, ಸರ್ವಿಸ್‌ ರಸ್ತೆಯ ಸಮಸ್ಯೆ ಇಂದು ನಿನ್ನೆಯದಲ್ಲ. ದಶಕಗಳಿಂದ ಕಾಮಗಾರಿ ಅರೆಬರೆ ಯಾಗಿ ನಡೆಯುತ್ತಿದೆ. ಅನೇಕ ಹೋರಾಟಗಳು ನಡೆದವು. ಜಿಲ್ಲಾಧಿಕಾರಿಗಳು, ಸಹಾಯಕ ಕಮಿಷನರ್‌ಗಳು ಕಾನೂನಿನ ಸರಿಯಾದ ಬಳಕೆ ಮಾಡಿದರು. ಈ ಮೂಲಕ ಜನರ ಸಮಸ್ಯೆಗೆ ಪರಿಹಾರ ಒದಗಿಸುವಲ್ಲಿ ಮಹತ್ತರ ಪಾತ್ರ ವಹಿಸಿದರು. ಇನ್ನೂ ಅನೇಕ ಸಮಸ್ಯೆಗಳಿಗೆ ಪರಿಹಾರ ದೊರೆತಿಲ್ಲ. ಅನೇಕ ಕಾರಣಗಳಿಂದ ಕಾಮಗಾರಿ ವಿಳಂಬವಾಗಿ, ಪೂರ್ಣ ವಾಗಿಲ್ಲ. ಹೆದ್ದಾರಿ ಗುತ್ತಿಗೆದಾರರು, ಇಲಾಖೆ ಇಲ್ಲಿನ ಆಡಳಿತದ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ.

ಬಾಕಿ:

ಸರ್ವಿಸ್‌ ರಸ್ತೆ ಕಾಮಗಾರಿ ಆಗಿಲ್ಲ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಳಿ ನಿರ್ಮಿಸಿದ ಕ್ಯಾಟಲ್‌ ಪಾಸ್‌ ಅನ್ನು ಪೂರ್ಣವಾಗಿ ಓಡಾಟಕ್ಕೆ ಬಿಟ್ಟುಕೊಟ್ಟಿಲ್ಲ. ಬಸ್ರೂರು ಮೂರುಕೈ ಅಂಡರ್‌ಪಾಸ್‌ ವಾಹನಗಳ ಓಡಾಟಕ್ಕೆ ತೆರವಾಗಿದೆ. ಆದರೆ ಮಳೆ ಬಂದಾಗ ನೀರು ನಿಲ್ಲುತ್ತದೆ. ಇದರ ತೆರವಿಗೆ ಕ್ರಮ ವಹಿಸಲೇ ಇಲ್ಲ. ಹೆದ್ದಾರಿಯ ಇಕ್ಕೆಲದಲ್ಲಿ ಇರುವ ಸರ್ವಿಸ್‌ ರಸ್ತೆಗಳ ಬದಿಯಲ್ಲಿ ಚರಂಡಿ ಕಾಮಗಾರಿ ಹತ್ತಾರು ಕಡೆ ಬಾಕಿಯಾಗಿದೆ. ಫ್ಲೈಓವರ್‌ನಲ್ಲಿ ಬೀದಿ ದೀಪಗಳ ಅಳವಡಿಕೆ ಆಗಿಲ್ಲ. ಫ‌ಲಕಗಳ ಅಳವಡಿಕೆ ಆಗಿಲ್ಲ. ಶಾಸ್ತ್ರಿ ಸರ್ಕಲ್‌ನಲ್ಲಿ ವೃತ್ತ ನಿರ್ಮಾಣ ಆಗಿಲ್ಲ. ಕುಂದಾಪುರ ನಗರಕ್ಕೆ ಸ್ವಾಗತ ಕಮಾನು ಆಗಿಲ್ಲ.

ಪ್ರವೇಶಿಕೆ:

ಕುಂದಾಪುರ ನಗರಕ್ಕೆ ಫ್ಲೈಓವರ್‌ ಆರಂಭಕ್ಕೆ ಮುನ್ನ ಪ್ರವೇಶ ನೀಡಬೇಕೆಂದು ಅನೇಕ ಸಮಯಗಳಿಂದ ಹೋರಾಟ ನಡೆಯುತ್ತಿದೆ. ಪುರಸಭೆ ವ್ಯಾಪ್ತಿ ಆರಂಭವಾಗುವ ಮುನ್ನವೇ ಹೆದ್ದಾರಿಯಿಂದ ಸರ್ವಿಸ್‌ ರಸ್ತೆಗೆ ಅವಕಾಶ ನೀಡಲಾಗಿದೆ. ಅದಾದ ಬಳಿಕ ಪುರಸಭೆ ವ್ಯಾಪ್ತಿ ಮುಗಿಯುವುದಕ್ಕಿಂತ ತುಸುವೇ ಮೊದಲು ಹೆದ್ದಾರಿಯಿಂದ ಇಳಿಯಲು ಅವಕಾಶ ನೀಡಲಾಗಿದೆ. ಹೆದ್ದಾರಿ ವಾಹನಗಳು ಕುಂದಾಪುರ ನಗರಕ್ಕೆ  ಪ್ರವೇಶ ಪಡೆಯುವುದು  ಗೊಂದಲಕ್ಕೀಡು ಮಾಡುತ್ತದೆ. ಅರಿಯದೇ ಹೆದ್ದಾರಿಯಲ್ಲಿ ಮುಂದುವರಿದರೆ ಕುಂದಾಪುರ ನಗರದೊಳಗೆ ಬರುವುದೇ ತ್ರಾಸದಾಯಕ ಎಂಬ ಸ್ಥಿತಿ ಇದೆ. ಪುರಸಭೆ ವ್ಯಾಪ್ತಿಯ ಜನರಿಗೆ, ವರ್ತಕರಿಗೆ ಇದರಿಂದ ಸಮಸ್ಯೆಯಾಗಿದೆ. ವ್ಯವಹಾರಗಳೆಲ್ಲ ಇಳಿಮುಖವಾಗಿದೆ. ನಗರಕ್ಕೆ ಜನರ ಬರುವಿಕೆ  ಕಡಿಮೆಯಾಗಿದೆ. ಅವಶ್ಯವಿದ್ದರೆ, ತುರ್ತು ಕಾರ್ಯವಿದ್ದರೆ ಜನ ಬಂದೇ ಬರುತ್ತಾರೆ. ಆದರೆ ಹೆದ್ದಾರಿಯಲ್ಲಿ ಹೋಗುವವರು ಹೊಟೇಲ್‌, ಬಟ್ಟೆ ಮಳಿಗೆ, ಪುಸ್ತಕ ಪತ್ರಿಕೆ ಖರೀದಿ, ಆಭರಣ ಮಳಿಗೆ ಅಥವಾ ಇನ್ಯಾವುದಾದರೂ ವ್ಯಾಪಾರಕ್ಕಾಗಿ ಬರುವವರು ನೇರ ಹೆದ್ದಾರಿ ಮೂಲಕ ಹೋಗುತ್ತಾರೆ. ಹೀಗೆ ಬಂದು ಹಾಗೆ ಹೋಗುವವರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಮೊದಲೇ ಲಾಕ್‌ಡೌನ್‌ ಮತ್ತೂಂದು ಮಗದೊಂದು ಎಂದು ವ್ಯಾಪಾರದಲ್ಲಿ ಏರುಗತಿ ಕಾಣುತ್ತಿದೆಯಷ್ಟೆ. ಅದರ ಮಧ್ಯೆಯೇ ಫ್ಲೈಓವರ್‌ ಹೊಡೆತ ಗಾಯದ ಮೇಲೆ ಬರೆ ಎಳೆದಂತಾಗಿತ್ತು.

ಪತ್ರ:

ಸಂಸದೆ ಶೋಭಾ ಕರಂದ್ಲಾಜೆ ಸ್ಪಂದಿಸಿದ್ದರು. ಸಚಿವೆಯಾದ ಬಳಿಕ ಈಚೆಗೆ ಕುಂದಾಪುರಕ್ಕೆ ಭೇಟಿ ನೀಡಿದ್ದಾಗ ಗಮನ ಸೆಳೆದಾಗ ಸ್ಪಂದಿಸಿ, ಶಾಸಕರು ಕೂಡ ತಿಳಿಸಿದ್ದು ಹೆದ್ದಾರಿ ಇಲಾಖೆಗೆ ಸೂಚಿಸುವುದಾಗಿ ಹೇಳಿದ್ದರು. ಇದೀಗ ಅವರ ಸೂಚನೆಯಂತೆ ಜಿಲ್ಲಾಧಿಕಾರಿಗಳು ಹೆದ್ದಾರಿ ಪ್ರಾಧಿಕಾರದ ಯೋಜನ ನಿರ್ದೇಶಕರಿಗೆ ಪತ್ರ ಬರೆದು ಹೆದ್ದಾರಿಯಿಂದ ಸರ್ವಿಸ್‌ ರಸ್ತೆಗೆ ತೆರಳಲು ಅವಕಾಶ ನೀಡಲು ಪರಿಶೀಲಿಸಲು ಸೂಚಿಸಿದ್ದಾರೆ.

ಹೋರಾಟ :

ಪುರಸಭೆ ಸದಸ್ಯರು ಅನೇಕ ಸಾಮಾನ್ಯ ಸಭೆಗಳಲ್ಲಿ ಚರ್ಚೆ ನಡೆಸಿ ನಗರದೊಳಗೆ ಪ್ರವೇಶ ನೀಡಲು ಆಗ್ರ ಹಿಸಿದ್ದರು. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಬಳಿಯೂ ಮನವಿ ನೀಡಿದ್ದರು. ಸಾರ್ವಜನಿಕರು ಅಧಿಕಾರಿಗಳಿಗೆ, ಶಾಸಕರಿಗೆ ಮನವಿ ನೀಡಿದ್ದರು.ಎಲ್‌ಐಸಿ, ಡಿವೈಎಸ್‌ಪಿ , ಮೆಸ್ಕಾಂ, ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ರೇಷ್ಮೆ ಇಲಾಖೆ ಸೇರಿದಂತೆ 15ಕ್ಕೂ ಅಧಿಕ ಸರಕಾರಿ ಕಚೇರಿಗಳಿದ್ದು, ಕಲ್ಯಾಣಮಂಟಪ ಸೇರಿದಂತೆ ತೆರಳಲು ಸಾರ್ವಜನಿಕರಿಗೆ ಹೆದ್ದಾರಿಯಿಂದ ಸರ್ವಿಸ್‌ ರಸ್ತೆಗೆ ಹೋಗಲು ಅವಕಾಶ ನೀಡದೇ ಇದ್ದರೆ ತೊಂದರೆಯಾಗುತ್ತದೆ. ಈಗ ಹಾಕಿದ ಕಬ್ಬಿಣದ ಗೇಟನ್ನು ಸಾಹಸದ ಮೂಲಕ ದಾಟಿ ಹೋಗುವ ಜನ ಆಯತಪ್ಪಿ ಬೀಳುತ್ತಿದ್ದಾರೆ. ಮಹಿಳೆಯರ ಪಾಡು ಹೇಳತೀರದು. ಬಸ್ರೂರು ಮೂರುಕೈ ಅಂಡರ್‌ಪಾಸ್‌ ಮುಗಿದು, ಶಾಸ್ತ್ರಿ ಸರ್ಕಲ್‌ ಫ್ಲೈಓವರ್‌ ಆರಂಭಕ್ಕೆ ಮುನ್ನ ಬೊಬ್ಬರ್ಯನಕಟ್ಟೆ ಬಳಿ ಸರ್ವಿಸ್‌ ರಸ್ತೆಗೆ ಹೋಗಲು ಅವಕಾಶ ಬೇಕಿದೆ. ಇದೇ ರೀತಿ ವಿರುದ್ಧ ದಿಕ್ಕಿನಲ್ಲಿಯೂ ಬೇಕು. ಇಂತಹ ಪ್ರವೇಶಾವಕಾಶಗಳು ಮಂಗಳೂರಿನಿಂದ ಕುಂದಾಪುರವರೆಗೆ ಅನೇಕ ಕಡೆ ಇದೆ.

ಸಚಿವರ ಕಡೆಯಿಂದ ಬಂದ ಸೂಚನೆಯಂತೆ ಹೆದ್ದಾರಿ ಇಲಾಖೆಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದೇವೆ. -ಜಿ. ಜಗದೀಶ್‌, ಜಿಲ್ಲಾಧಿಕಾರಿ, ಉಡುಪಿ

ಟಾಪ್ ನ್ಯೂಸ್

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Siddapura: ಪತ್ನಿಯ ಮೇಲೆ ಪತಿ ಹಲ್ಲೆ; ಕೊಲೆ ಬೆದರಿಕೆ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Siddapura: ಪತ್ನಿಯ ಮೇಲೆ ಪತಿ ಹಲ್ಲೆ; ಕೊಲೆ ಬೆದರಿಕೆ

12

Udupi: ಕೆಲಸಕ್ಕೆ ಸೇರಿದ ವ್ಯಕ್ತಿಯಿಂದ ಚಿನ್ನ ಕಳವು

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-bcci

INDvBAN Day 3: 515 ರನ್ ಚೇಸ್ ; ಬಾಂಗ್ಲಾ 4 ವಿಕೆಟ್ ನಷ್ಟಕ್ಕೆ 158 ರನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.