ಉಡುಪಿ ಜಿಲ್ಲೆ: ರಜತೋತ್ಸವ ವರ್ಷ ಆರಂಭ


Team Udayavani, Aug 26, 2021, 8:00 AM IST

ಉಡುಪಿ ಜಿಲ್ಲೆ: ರಜತೋತ್ಸವ ವರ್ಷ ಆರಂಭ

ಉಡುಪಿ: ಉಡುಪಿ ಜಿಲ್ಲೆ 1997 ಆಗಸ್ಟ್‌ 25ರಂದು ಶ್ರೀಕೃಷ್ಣಜನ್ಮಾಷ್ಟಮಿಯ ಮರು ದಿನ ವಿಟ್ಲಪಿಂಡಿಯಂದು ಉದಯಿಸಿತು. ಜಿಲ್ಲೆಯು 25ರ ಏರುಜವ್ವನದ ವರ್ಷಕ್ಕೆ 2021ರ ಆ. 25ರಂದು ಪಾದಾರ್ಪಣೆ ಮಾಡಿದೆ.

ಅಜ್ಜರಕಾಡು ಕ್ರೀಡಾಂಗಣದಲ್ಲಿ  ಆಗಿನ ಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಅವರು ಜಿಲ್ಲೆಯನ್ನು ಉದ್ಘಾಟಿಸಿದ್ದರು. ಆಗ ಕೆ.ಜಯಪ್ರಕಾಶ ಹೆಗ್ಡೆ ಅವಿಭಜಿತ ದ.ಕ. ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ಸಂಸದರಾಗಿ ಆಸ್ಕರ್‌ ಫೆರ್ನಾಂಡಿಸ್‌, ಶಾಸಕರಾಗಿ ಯು.ಆರ್‌.ಸಭಾಪತಿ, ವಿಧಾನ ಪರಿಷತ್‌ ಸದಸ್ಯರಾಗಿ ಡಾ|ವಿ.ಎಸ್‌.ಆಚಾರ್ಯ ಪಾಲ್ಗೊಂಡಿದ್ದರು. ಪ್ರಥಮ ಜಿಲ್ಲಾಧಿಕಾರಿಯಾಗಿ ಜಿ.ಕಲ್ಪನಾ, ಪ್ರಥಮ ಎಸ್ಪಿಯಾಗಿ ಸವಿತಾ ಹಂಡೆ, ಪ್ರಥಮ ಜಿ.ಪಂ. ಅಧ್ಯಕ್ಷರಾಗಿ ರೆಮಿಡಿಯಾ ಡಿ’ಸೋಜಾ, ಪ್ರಥಮ ಸಿಇಒ ಆಗಿ ಬಿ.ಎಚ್‌.ಅನಿಲ್‌ಕುಮಾರ್‌ ಸೇವೆ ಸಲ್ಲಿಸಿದ್ದರು. ಆಗಲೂ ಈಗಲೂ ಯುವಕರು ಸಚಿವರಾಗಿದ್ದಾರೆ.

ಆಗಿನ ಮುಖ್ಯಮಂತ್ರಿಯ ಒಡನಾಟದಲ್ಲಿದ್ದ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದು ಈಗ ಮುಖ್ಯಮಂತ್ರಿಯಾಗಿದ್ದಾರೆ. ಆಗಿನ ಉಸ್ತುವಾರಿ ಸಚಿವ ಜಯಪ್ರಕಾಶ್‌ ಹೆಗ್ಡೆ ಅವರು ಈಗ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು. ಇತ್ತೀಚಿಗಷ್ಟೇ ಸುನಿಲ್‌ಕುಮಾರ್‌ ಸಚಿವರಾಗಿ ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜಾರೋಹಣ ಮಾಡಿ ಜಿಲ್ಲೆಯ ಚುಕ್ಕಾಣಿ ಹಿಡಿದಿದ್ದಾರೆ. ಈಗ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರದ ಸಚಿವೆ, ಆಸ್ಕರ್‌ ಫೆರ್ನಾಂಡಿಸ್‌ ರಾಜ್ಯಸಭಾ ಸದಸ್ಯರು, ಶಾಸಕರಾಗಿ ಕೆ.ರಘುಪತಿ ಭಟ್‌, ಜಿಲ್ಲಾಧಿಕಾರಿಯಾಗಿ ಜಿ.ಜಗದೀಶ್‌, ಎಸ್‌ಪಿಯಾಗಿ ವಿಷ್ಣುವರ್ಧನ್‌, ಜಿ.ಪಂ. ಸಿಇಒ ಆಗಿ ಡಾ|ನವೀನ್‌ ಭಟ್‌ ಕಾರ್ಯನಿರ್ವಹಿಸುತ್ತಿದ್ದಾರೆ.

ಜಿಲ್ಲಾ ಪುನರ್ವಿಂಗಡಣೆ:

1985ರವರೆಗೆ ರಾಜ್ಯದಲ್ಲಿದ್ದ 19 ಜಿಲ್ಲೆ 1985ರಲ್ಲಿ 21 ಆಯಿತು. 1997ರಲ್ಲಿ ಮತ್ತೆ ಉಡುಪಿ ಸಹಿತ ಏಳು ಜಿಲ್ಲೆಗಳಾದವು. 1998, 2007, 2010ರಲ್ಲಿ ಹೊಸ ಹೊಸ ಜಿಲ್ಲೆಗಳಾದವು. 2020ರಲ್ಲಿ ಅಸ್ತಿತ್ವಕ್ಕೆ ಬಂದ ವಿಜಯನಗರ ಜಿಲ್ಲೆ 31ನೇ ಜಿಲ್ಲೆ.

1983ರಲ್ಲಿ ಡಾ|ವಿ.ಎಸ್‌.ಆಚಾರ್ಯ ಉಡುಪಿ ಶಾಸಕರಾಗಿ ವಿಧಾನಸಭೆಯಲ್ಲಿ ಆಡಿದ ಸಣ್ಣ ಸಣ್ಣ ಜಿಲ್ಲೆಗಳ ಸೃಷ್ಟಿಯ ಅಗತ್ಯದ ಭಾಷಣದಿಂದ ಆಗಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಟಿ.ಎಂ.ಹುಂಡೇಕರ್‌ ನೇತೃತ್ವದಲ್ಲಿ ಜಿಲ್ಲಾ ಪುನರ್ವಿಂಗಡಣ ಸಮಿತಿ ರಚಿಸಿದರು. ಈ ಸಮಿತಿಯ ಶಿಫಾರಸಿನಂತೆ ಉಡುಪಿ ಜಿಲ್ಲೆಯ ಉಗಮವಾಯಿತು.

ತಾಲೂಕು ಪುನರ್ವಿಂಗಡಣೆ : 

1956ರಲ್ಲಿ ಅಖಂಡ ಕರ್ನಾಟಕ ಉದಯವಾಗು ವಾಗ ಇದ್ದ ತಾಲೂಕು 175. ಅನಂತರ ಹೊಸದಾಗಿ ಆದ ತಾಲೂಕು ಒಂದೇ ಒಂದು. ಅದು ಬೆಂಗಳೂರು ದಕ್ಷಿಣ. ಹಿಂದೆ ಜಗದೀಶ ಶೆಟ್ಟರ್‌ ಅವರ ಸರಕಾರವಿದ್ದಾಗ 43 ತಾಲೂಕುಗಳು, ಸಿದ್ದರಾಮಯ್ಯ ನವರ ಸರಕಾರವಿದ್ದಾಗ 49 ಹೊಸ ತಾಲೂಕುಗಳನ್ನು ಘೋಷಿಸಲಾಯಿತು. ಈ ಪೈಕಿ ಉಡುಪಿ ಜಿಲ್ಲೆಯಲ್ಲಿ ಕಾಪು, ಬ್ರಹ್ಮಾವರ, ಬೈಂದೂರು, ಹೆಬ್ರಿ ಸೇರಿವೆ.

ಹೊಸ ಹೊಸ ನಿರೀಕ್ಷೆಗಳು :

ಜಿಲ್ಲೆ ಉಗಮವಾಗಿ 14 ವರ್ಷಗಳ ಬಳಿಕ 2011ರಲ್ಲಿ ಜಿಲ್ಲಾಧಿಕಾರಿ ಕಚೇರಿ ಸ್ವಂತ ಕಟ್ಟಡದಲ್ಲಿ ಉದ್ಘಾಟನೆ ಯಾಯಿತು. ಜಿಲ್ಲೆಯಾಗಿ ರಜತೋತ್ಸವ ವರ್ಷದಲ್ಲಿ ಕೊರೊನಾ ಸೋಂಕು ಆವರಿಸಿಕೊಂಡಿರುವಾಗಲೇ ಹತ್ತು ಹಲವು ಆಶಯಗಳನ್ನು ಹೊತ್ತು ಸಾಗುತ್ತಿದೆ. ಜಿಲ್ಲೆ ಉದಯಿಸುವಾಗ ಇದ್ದ ಒಂದು ಉಪವಿಭಾಗ, ಒಂದು ಅರಣ್ಯ ಇಲಾಖೆ ಉಪವಿಭಾಗ ಹಾಗೆಯೇ ಮುಂದುವರಿಯುತ್ತಿದೆ. ಜಿಲ್ಲೆಗೊಂದು ಸರಕಾರಿ ವೈದ್ಯಕೀಯ ಕಾಲೇಜು, ವಿಮಾನ ನಿಲ್ದಾಣದಂತಹ ಬೇಡಿಕೆಗಳು ಈಡೇರಬೇಕಾಗಿದೆ.

ರಜತೋತ್ಸವ ವರ್ಷದಲ್ಲಿ 2 ಸಚಿವರು:

ಈ ವರ್ಷ ಇದುವರೆಗೆ ಲಭ್ಯವಿಲ್ಲದ ಜಿಲ್ಲೆಯ ಇಬ್ಬರಿಗೆ ಸಚಿವ ಪದವಿ ಸಿಕ್ಕಿದೆ. ಕೋಟ ಶ್ರೀನಿವಾಸ ಪೂಜಾರಿ ಅವರು ಹಿರಿಯ ಅನುಭವಿಯಾದರೆ ವಿ.ಸುನಿಲ್‌ಕುಮಾರ್‌ ಕ್ರಿಯಾಶೀಲ ಯುವಕರು.

1799ರಿಂದ… :

ಕರ್ನಾಟಕದ ಕರಾವಳಿಗೆ ಅಧಿಕೃತವಾಗಿ ಜಿಲ್ಲೆಯ ಸ್ಥಾನಮಾನ ಗೋಚರವಾಗುವುದು ಟಿಪ್ಪುವಿನ ಕಾಲಾನಂತರ 1799ರಿಂದ ಬ್ರಿಟಿಷರ ಸುಪರ್ದಿಗೆ ಬಂದಾಗ. ಆಗ ಕಾಸರಗೋಡಿನಿಂದ ಕಾರವಾರದವರೆಗೆ ಒಂದೇ ಕೆನರಾ ಜಿಲ್ಲೆ. 1862ರಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಎಂದು ವಿಭಜನೆ ಮಾಡಿದಾಗ ದ.ಕ. ಮದ್ರಾಸ್‌ ಪ್ರಾಂತ್ಯದ ಅಧೀನಕ್ಕೂ ಉ.ಕ. ಜಿಲ್ಲೆ ಮುಂಬಯಿ ಪ್ರಾಂತ್ಯದ ಅಧೀನಕ್ಕೂ ಹೋಯಿತು. ಕುಂದಾಪುರ ತಾಲೂಕು ಮೊದಲು ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿದ್ದದ್ದು ಮತ್ತೆ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಸೇರಿತು. 1956ರಲ್ಲಿ ರಾಜ್ಯ ಪುನರ್ವಿಂಗಡಣೆಯಾಗುವಾಗ ಕಾಸರಗೋಡು ದ.ಕ. ಜಿಲ್ಲೆಯ ವ್ಯಾಪ್ತಿಯಿಂದ ತಪ್ಪಿ ಕೇರಳಕ್ಕೆ ಹೋಯಿತು. 1997ರಲ್ಲಿ ಉಡುಪಿ ಜಿಲ್ಲೆ ದ.ಕ. ಜಿಲ್ಲೆಯಿಂದ ಬೇರ್ಪಟ್ಟು ಹೊಸ ಜಿಲ್ಲೆಯಾಯಿತು. ಆಗ ಉಡುಪಿ, ಕುಂದಾಪುರ ಪೂರ್ಣ ತಾಲೂಕು ಮತ್ತು ಮೂಡುಬಿದಿರೆ ಭಾಗವನ್ನು ದ.ಕ. ಜಿಲ್ಲೆಗೆ ಸೇರಿಸಿ ಉಳಿದ ಕಾರ್ಕಳ ತಾಲೂಕನ್ನು ಉಡುಪಿ ಜಿಲ್ಲೆಗೆ ಸೇರಿಸಲಾಯಿತು.

 

-ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.