ಪಶ್ಚಿಮಘಟ್ಟದ ರಮಣೀಯ ತಾಣ ಕ್ಯಾತನಮಕ್ಕಿ


Team Udayavani, Aug 29, 2021, 2:41 PM IST

ಪಶ್ಚಿಮಘಟ್ಟದ ರಮಣೀಯ ತಾಣ ಕ್ಯಾತನಮಕ್ಕಿ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ ಕ್ಯಾತನಮಕ್ಕಿ. ಮೂಡಿಗೆರೆಯಿಂದ ಕ್ಯಾತನಮಕ್ಕಿ 72 ಕಿ.ಮೀ ದೂರದಲ್ಲಿದ್ದು ಮೊದಲು ಮೂಡಿಗೆರೆ ತಾಲೂಕಿನಲ್ಲಿದ್ದ ಈ ಸ್ಥಳ ಈಗ ನೂತನವಾಗಿ ಘೋಷಣೆಯಾದ ಕಳಸ ತಾಲೂಕಿಗೆ ಬರುತ್ತದೆ.

ಹೊರನಾಡು ಶ್ರೀ ಕ್ಷೇತ್ರ ಅನ್ನಪೂರ್ಣೇಶ್ವರಿ ದೇವಸ್ಥಾನದ ಸಮೀಪವಿರುವ ಈ ತಾಣಕ್ಕೆ ಶ್ರಂಗೇರಿಗೆ ಸಂಪರ್ಕಿಸುವ ರಸ್ತೆಯಲ್ಲಿ ಸಾಗಬೇಕು. ಕಳಸದಿಂದ ಈ ಸುಂದರ ತಾಣ ತಲುಪಲು 20 ಕಿ.ಮೀ ಕ್ರಮಿಸಬೇಕು. ಬಲಿಗೆ ಜೈನ ಬಸದಿಯ ಸಮಿಪದಲ್ಲಿ ಈ ಕ್ಯಾತನಮಕ್ಕಿ ಸುಂದರ ಪ್ರಕ್ರತಿ ತಾಣ ಸಿಗುತ್ತದೆ.

ಇದನ್ನೂ ಓದಿ:ಅನ್ನ-ಅರಿವು ನೀಡುವುದೇ ನಿಜ ಧರ್ಮ

ಮೊದಲಿಗೆ ಅರಣ್ಯ ಇಲಾಖೆಯ ತಪಾಸಣಾ ಕೇಂದ್ರ ಸಿಗುತ್ತದೆ. ಅಲ್ಲಿ ಪ್ರತಿಯೊಬ್ಬರಿಗೂ 50 ರೂ ಟಿಕೇಟ್ ನಿಗದಿ ಮಾಡಲಾಗಿದೆ. ವಾಹನದ ನಂ ಮತ್ತು ಪ್ರವಾಸಿಗರ ಬಗ್ಗೆ ದಾಖಲೆ ಪುಸ್ತಕದಲ್ಲಿ ನಮೂದಿಸಿ ನಂತರ ನಮ್ಮನ್ನು ಮುಂದೆ ಬಿಡಲಾಗುತ್ತದೆ. ನಂತರ ಆರಂಭವಾಗುವುದೇ ಬಹಳ ಕಡಿದಾದ ರಸ್ತೆಯ ಯಾತ್ರೆ. ಮಳೆ ಬಂದರಂತೂ ಸಾಗಲು ಅಸಾಧ್ಯವಾದ ರಸ್ತೆ, ಕಲ್ಲು ಕೆಸರಿನಿಂದ ಮತ್ತು ಇಳಿಜಾರಿನಿಂದ ಕೂಡಿದ್ದು, ಮುಂದೆ ವಾಹನ ಬಂದರೆ ಜಾಗ ಕೊಡಲು ಅಸಾಧ್ಯವಾದ ರಸ್ತೆಯಲ್ಲಿ ಬಹಳಷ್ಟು ಜಾಗ್ರತೆಯಿಂದ ಸಾಗಬೇಕು. ಇಲ್ಲಿ ಸಾಗಲು ಫೋರ್ ವೀಲ್ ವಾಹನಗಳಷ್ಟೆ ಸಾಧ್ಯ. ಚಾಲನೆಯಲ್ಲಿ ಎಷ್ಟೇ ಹುಷಾರುಗಿದ್ದರೂ ಸಾಲದು, ಚಾಲಕ ಸ್ವಲ್ಪ ಮೈಮರೆತರೂ ದೊಡ್ಡ ಪ್ರಪಾತಕ್ಕೆ ಬೀಳುವ ಸಾಧ್ಯತೆಯೇ ಹೆಚ್ಚು.

ಗುಡ್ಡದ ತುದಿಯಲ್ಲಿ ಸಿಗುವುದು ಮಲೆನಾಡಿನ ಸ್ವರ್ಗ ಕ್ಯಾತನಮಕ್ಕಿ ಸಿಗುತ್ತದೆ ಮೊದಲು ಪ್ರವಾಸಿಗರು ವಾಹನವನ್ನು ವೀವ್ ಪಾಯಿಂಟ್ ಬಳಿ ತೆಗೆದುಕೊಂಡು ಹೋಗಿ ಅಲ್ಲಿನ ರಸ್ತೆ ಹಾಳು ಮಾಡುತ್ತಿದ್ದುರಿಂದ ಅರಣ್ಯ ಇಲಾಖೆ ಸಂಪೂರ್ಣ ಬೇಲಿ ಹಾಕಿದ್ದು, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ನಡೆದು ಸಾಗಬೇಕು, ಮುಖ್ಯರಸ್ತೆಯಿಂದ ಬಾಡಿಗೆಗೆ ಪಿಕಪ್, ಜೀಪ್ ಗಳಿದ್ದು ಇವರಿಗೆ ಇಲ್ಲಿಗೆ ಪ್ರವಾಸಿಗರನ್ನು ಕರೆತಂದು ಅವರನ್ನು ಪುನಃ ಬಿಡುವುದು ಕೆಲಸ.  ಬೆಂಗಳೂರು ಬಾಗದ ಪ್ರವಾಸಿಗರಂತು ಬೈಕಿನಲ್ಲಿ ಬಂದು ಎದ್ದು ಬಿದ್ದು ನಿಸರ್ಗದ ಸೌಂದರ್ಯ ಸವಿಯಲು ಬರುತ್ತಿದ್ದಾರೆ. ಕಳಸದ ಸುತ್ತಮುತ್ತಲಿನ ಹೋಂ ಸ್ಟೇಗೆ ಬಂದ ಅತಿಥಿಗಳು ಇಲ್ಲಿಗೆ ಸಂದರ್ಶಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಇದು ರಾಜ್ಯಾದ್ಯಂತ ಪ್ರಖ್ಯಾತಿ ಪಡೆದಿದ್ದು ಹೆಚ್ಚಿನ ಯಾತ್ರಿಕರು ಭೇಟಿ ನೀಡುತ್ತಿದ್ದಾರೆ.

ಇದು ಕುದುರೆಮುಖ ಅರಣ್ಯಕ್ಕೆ ಅಂಟಿಕೊಂಡಿದ್ದು ಪಕ್ಕದ ಶ್ರಂಗೇರಿ, ಕೊಪ್ಪ ತಾಲೂಕಿಗೆ ಸಮೀಪದಲ್ಲಿದೆ, ಇದು ಪ್ರವಾಸಿಗರ ಸ್ವರ್ಗ ಇದನ್ನು ಹಾಗೆ ಕಾಪಾಡಿಕೊಳ್ಳುವುದು ಸಹ ನಮ್ಮ ಕರ್ತವ್ಯ. ಇಲ್ಲಿಗೆ ಬಂದಾಗ ಮೋಜು ಮಸ್ತಿಯಲ್ಲಿ ತೊಡಗದೆ ಬಾಟಲಿ ಪ್ಲಾಸ್ಟಿಕ್ ಬಿಸಡದೆ ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕಿರುವುದು ಪ್ರವಾಸಿಗರ ಕರ್ತವ್ಯವಾಗಬೇಕಿದೆ.

-ಸಂತೋಷ್

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.