ಪಶು ಇಲಾಖೆ ಖಾಲಿ ಹುದ್ದೆ ಶೀಘ್ರ ಭರ್ತಿ: ಚವ್ಹಾಣ್‌


Team Udayavani, Aug 29, 2021, 11:00 PM IST

ಪಶು ಇಲಾಖೆ ಖಾಲಿ ಹುದ್ದೆ ಶೀಘ್ರ ಭರ್ತಿ: ಚವ್ಹಾಣ್‌

ಹಾವೇರಿ: ರಾಜ್ಯದಲ್ಲಿ 100 ಎಕರೆ ಜಾಗದಲ್ಲಿ ಒಂದು ಸಾವಿರ ಕೋಟಿ ರೂ. ವೆಚ್ಚದಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಪಶುಲೋಕ್‌ (ಕಾಯಂ ಸ್ವರೂಪಿ ಪಶು ಪಾಲನೆ) ನಿರ್ಮಿಸುವುದರ ಜತೆಗೆ ರಾಜ್ಯದಲ್ಲಿ ಪಶು ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಚಿಂತನೆ ನಡೆದಿದೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಶು ಲೋಕ್‌ನಿಂದ ಟೂರಿಸಂ ಜತೆಗೆ ಪಶುಗಳ ವಿವಿಧ ತಳಿಗಳ ಅಧ್ಯಯನ, ಸಂರಕ್ಷಣೆ ಮಾಡುವುದು, ಪ್ರಾಣಿಗಳ ಬಗ್ಗೆ ಪ್ರತಿಯೊಬ್ಬರಿಗೂ ಸಂಪೂರ್ಣ ಮಾಹಿತಿ ನೀಡಲು ಸಹಕಾರಿಯಾಗುತ್ತದೆ. ಪಶು ಸಂಗೋಪನೆ ಇಲಾಖೆಯ 18 ಸಾವಿರ ಹುದ್ದೆಗಳಲ್ಲಿ 8 ಸಾವಿರ ಹುದ್ದೆಗಳು ಖಾಲಿ ಇದ್ದು, ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೆರಿಟ್‌ ಮೇಲೆ ನೇರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಪ್ರಾಣಿ ರಕ್ಷಣೆಗಾಗಿ ರಾಜ್ಯದಲ್ಲಿ ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಲಾಗಿದೆ. ಪಶು ಸಂಜೀವಿನಿ ಆ್ಯಂಬುಲೆನ್ಸ್‌ 15 ಜಿಲ್ಲೆಗಳಿಗೆ ಒದಗಿಸಲಾಗಿದ್ದು, ಇನ್ನುಳಿದ ಜಿಲ್ಲೆಗಳಿಗೆ ಆ್ಯಂಬುಲೆನ್ಸ್‌ ಒದಗಿಸಲಾಗುವುದು ಎಂದರು.

ದೇಶದಲ್ಲಿಯೇ ಮೊದಲು ಎಲ್ಲ ಪ್ರಾಣಿಗಳ ಯೋಗಕ್ಷೇಮಕ್ಕಾಗಿ ಪ್ರಾಣಿ ಕಲ್ಯಾಣ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಈ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ. ರೈತರು ಪಶುಗಳ ಚಿಕಿತ್ಸೆ, ಪ್ರಾಣಿಗಳ ಸಮಸ್ಯೆ, ಪಶು ಕುರಿತ ಯಾವುದೇ ಮಾಹಿತಿ ಪಡೆದುಕೊಳ್ಳಬಹುದು.

ಇದನ್ನೂ ಓದಿ:ಎಐಎಡಿಎಂಕೆಯನ್ನು ಹಿಡಿತಕ್ಕೆ ಪಡೆಯಲು ಶಶಿಕಲಾ ಕಾದು ನೋಡುವ ತಂತ್ರ!

ಆರ್‌ಐಡಿಎಫ್‌ ಯೋಜನೆಯಡಿ 288 ಕಟ್ಟಡಗಳಿಗೆ ಅನುದಾನ ಒದಗಿಸಲಾಗಿದೆ. ರಾಜ್ಯದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ನ್ಯಾಷನಲ್‌ ನ್ಯಾವಲ್‌ ಸ್ಟಾಕ್‌ ಮಿಷನ್‌ ಅಡಿ ರೈತರಿಗೆ ಅನುಕೂಲವಾಗುವಂತಹ ನಾರಿ ಸುರ್ವಣ ಕುರಿ ತಳಿ ಅಭಿವೃದ್ಧಿ, ನಂದಿನಿ ದುರ್ಗ ಮೇಕೆ ಅಭಿವೃದ್ಧಿ, ಪಶು ಚಿಕಿತ್ಸೆ, ಔಷಧಿ ಕೇಂದ್ರಗಳು, ಅಮೃತ ಶಿಲಾ ಯೋಜನೆಯಲ್ಲಿ ರೈತರಿಗೆ ಹೋರಿ, ಕರು ವಿತರಣೆ, ದೇಶಿ ತಳಿಗಳ ಅಭಿವೃದ್ದಿ ಯೋಜನೆಗಳನ್ನು ಘೋಷ‌ಣೆ ಮಾಡಲಾಗಿದೆ ಎಂದರು.

ರಾಜ್ಯ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಆಯೋಗದ ಅಧ್ಯಕ್ಷ, ಶಾಸಕ ನೆಹರು ಓಲೇಕಾರ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಪಶು ಸಂಗೋಪನಾ ಇಲಾಖೆ ಜಂಟಿ ನಿರ್ದೇಶಕ ಡಾ| ಭಾಸ್ಕರ್‌ ರಾವ್‌, ಉಪನಿರ್ದೇಶಕ ರಾಜು ಕೂಲೇರ ಸೇರಿದಂತೆ ಇತರರು ಇದ್ದರು.

2021-22ರ ಬಜೆಟ್‌ನಲ್ಲಿ ಜಿಲ್ಲೆಗೊಂದು ಗೋಶಾಲೆ ನೀಡಲಾಗಿದೆ. 22 ಜಿಲ್ಲೆಗಳಲ್ಲಿ ಗೋಶಾಲೆಗೆ ಸ್ಥಳ ಗುರುತಿಸಲಾಗಿದೆ. ಪ್ರತಿ ಜಿಲ್ಲೆ ಗೋಶಾಲೆಯಲ್ಲಿ 6-7 ಸಾವಿರ ಗೋವುಗಳನ್ನು ನೋಡಿಕೊಳ್ಳಬಹುದು. ಆಹಾರ, ನೀರು, ಗೋವುಗಳ ಆರೈಕೆ ಮಾಡಲಾಗುವುದು. ಈಗಾಗಲೇ ರಾಜ್ಯದಲ್ಲಿ 188 ಖಾಸಗಿ ಗೋಶಾಲೆಗಳು ನೋಂದಣಿಯಾಗಿವೆ. ಇವುಗಳಿಗೆ ಅನುದಾನ ನೀಡಲಾಗುತ್ತಿದೆ.
– ಪ್ರಭು ಚವ್ಹಾಣ, ಪಶು ಸಂಗೋಪನಾ ಇಲಾಖೆ ಸಚಿವ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.