ನಗರದಲ್ಲಿ ರಸ್ತೆ ಬದಿ ತ್ಯಾಜ್ಯ ಎಸೆಯುವವರ ಕಣ್ಗಾವಲಿಗೆ ಸೋಲಾರ್‌ ಸಿಸಿ ಕೆಮರಾ


Team Udayavani, Sep 2, 2021, 3:30 AM IST

ನಗರದಲ್ಲಿ ರಸ್ತೆ ಬದಿ ತ್ಯಾಜ್ಯ ಎಸೆಯುವವರ ಕಣ್ಗಾವಲಿಗೆ ಸೋಲಾರ್‌ ಸಿಸಿ ಕೆಮರಾ

ಮಹಾನಗರ: ನಗರದ ರಸ್ತೆ ಬದಿಯಲ್ಲಿ ಅಲ್ಲಲ್ಲಿ ಕಸ ಹಾಕುವ “ಬ್ಲ್ಯಾಕ್‌ಸ್ಪಾಟ್‌’ಗಳನ್ನು ನಿಯಂತ್ರಿಸಲು ನಗರದ ವಿವಿಧೆಡೆ ಸೋಲಾರ್‌ ಚಾಲಿತ ಸಿಸಿ ಕೆಮರಾಗಳನ್ನು ಅಳವಡಿಸಲು ಮಹಾನಗರ ಪಾಲಿಕೆ ಮುಂದಾಗಿದೆ.

ಮೊದಲ ಹಂತದಲ್ಲಿ ನಗರದ ಸುರತ್ಕಲ್‌, ನಂದಿಗುಡ್ಡೆ ಎರಡು ಕಡೆ, ಪಳ್ನೀರು, ಆಕಾಶಭವನ, ರಥಬೀದಿಯಲ್ಲಿ ಸೋಲಾರ್‌ ಕೆಮರಾವನ್ನು ಅಳವಡಿಸಿದೆ. ಈ ಸಿಸಿ ಕೆಮರಾಕ್ಕೆ ಸೋಲಾರ್‌ ವ್ಯವಸ್ಥೆ ಅಳವಡಿಸಿರುವ ಕಾರಣ ಯಾವುದೇ ರೀತಿಯ ಕೇಬಲ್‌ ಸಂಪರ್ಕ ಅಳವಡಿಸುವ ಆವಶ್ಯಕತೆ ಇರುವುದಿಲ್ಲ. ಇದೇ ಕಾರಣಕ್ಕೆ ಈ ಕೆಮರಾ ಕಂಬವನ್ನು ಒಂದು ಕಡೆಯಿಂದ ಮತ್ತೂಂದು ಕಡೆಗೆ ಸ್ಥಳಾಂತರ ಮಾಡಲೂ ಸಾಧ್ಯವಿದೆ. ಇದೇ ಕಾರಣಕ್ಕೆ ನಗರದಲ್ಲಿ ಯಾವ ಪ್ರದೇಶಕ್ಕೆ ಸಿಸಿ ಕೆಮರಾ ಅಗತ್ಯವಿದೆ ಎಂಬುವುದನ್ನು ತಿಳಿದು ಸ್ಥಳಾಂತರಿಸುವ ಕೆಲಸವೂ ನಡೆಯುತ್ತಿದೆ. ಇನ್ನು, ಅಪರಾಧ ಚಟುವಟಿಗೆ ನಿಯಂತ್ರಣಕ್ಕೂ ಈ ಕೆಮರಾ ಸಹಕಾರಿಯಾಗಲಿದೆ.

ಈಗಾಗಲೇ ಅಳವಡಿಸಿದ ಸೋಲಾರ್‌ ಸಿಸಿ ಕೆಮರಾದಲ್ಲಿ ಸೆರೆಯಾದ ವೀಡಿಯೋ ಫೂಟೇಜ್‌ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಕಮಾಂಡ್‌ ಕಂಟ್ರೋಲ್‌ ಸೆಂಟರ್‌ನಲ್ಲೂ ಸಂಗ್ರಹವಾಗುತ್ತದೆ. ಅಲ್ಲದೆ, ಆರೋಗ್ಯ ನಿರೀಕ್ಷಕರ ಮೊಬೈಲ್‌ಗ‌ಳಿಗೂ ಸಂಪರ್ಕ ಕಲ್ಪಿಸಲಾಗಿದ್ದು, ಮೊಬೈಲ್‌, ಕಂಪ್ಯೂಟರ್‌ ಮುಖೇನವೂ ವೀಕ್ಷಣೆಗೂ ಸಾಧ್ಯವಿದೆ.

ಪಾಲಿಕೆ ಅಧಿಕಾರಿ ಶಬರಿನಾಥ್‌ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, “ಸೋಲಾರ್‌ ಸಿಸಿ ಕೆಮರಾವನ್ನು ಸಾರ್ವಜನಿಕರು ಕಸ ಎಸೆದು ಉಂಟಾಗುವ ಬ್ಲ್ಯಾಕ್‌ ಸ್ಪಾಟ್‌ಗಳಲ್ಲಿ ಅಳವಡಿಸಲಾಗಿದೆ. ಕೆಮರಾ ಅಳವಡಿಸಿದ ಬಳಿಕ ಈಗಾಗಲೇ ನಗರದ ಆಕಾಶಭವನ ಸಹಿತ ವಿವಿಧ ಕಡೆಗಳಲ್ಲಿ ರಸ್ತೆ ಬದಿ ಎಸೆಯುವುದು ಕಡಿಮೆಯಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು ಕಂಡುಬಂದರೆ ಅವರ ಮುಖ ಚಹರೆ ಮತ್ತು ವಾಹನಗಳಲ್ಲಿನ ನಂಬರ್‌ ಪ್ಲೇಟ್‌ ಕೂಡ ಕೆಮರಾದಲ್ಲಿ ಸೆರೆಯಾಗುತ್ತದೆ. ಅಂತಹವರ ವಿರುದ್ಧ ದೂರು ದಾಖಲಿಸಲು ಇದು ನೆರವಾಗುತ್ತದೆ’ ಎನ್ನುತ್ತಾರೆ.

ಏನಿದು ಸೋಲಾರ್‌  ಸಿ.ಸಿ. ಕೆಮರಾ? :

ಸೌರ ವಿದ್ಯುತ್‌ ಸಹಾಯದಿಂದ ಈ ಸಿಸಿ ಕೆಮರಾ ಕಾರ್ಯನಿರ್ವಹಿಸುತ್ತದೆ. ಸುಮಾರು 15 ಅಡಿ ಎತ್ತರದ ಕಂಬದಲ್ಲಿ ಸಿಸಿ ಕೆಮರಾ ಅಳವಡಿಸ ಲಾಗುತ್ತದೆ. ಸೋಲಾರ್‌ ಪ್ಯಾನಲ್‌ ಮುಖೇನ ಇದರಲ್ಲಿ ವಿದ್ಯುತ್‌ ಉತ್ಪಾದನೆಯಾಗುತ್ತದೆ. 4 ಜಿ ವೈಫೈ ರೂಟರ್‌ ಅಳವಡಿಸಲಾಗಿದ್ದು, ಅದಕ್ಕೆ ಮೊಬೈಲ್‌ ಸಿಮ್‌ ಜೋಡಿಸಲಾಗಿದೆ. ನಾಲ್ಕು ಮೆಗಾಫಿಕ್ಸೆಲ್‌ ಕೆಮರಾ, ನಾಲ್ಕು ಎಂ.ಎಂ. ಲೆನ್ಸ್‌ ಅಳವಡಿಸಲಾಗಿದೆ. 40 ವ್ಯಾಟ್‌ ಸೋಲಾರ್‌ ಪ್ಯಾನಲ್‌ಗೆ 40 ಎಎಚ್‌ ಬ್ಯಾಟರಿಯನ್ನು ಅಳವಡಿಸಲಾಗಿದೆ. 128 ಜಿ.ಬಿ. ಡಾಟಾ ಸಾಮರ್ಥ್ಯ ಹೊಂದಿದೆ. ಈ ಇಲ್ಲಿ ಸಂಗ್ರಹವಾಗುವ ವೀಡಿಯೋ ಫೂಟೇಜ್‌ಗಳನ್ನು ನೆಟ್‌ವರ್ಕ್‌ ಮುಖೇನ ಮೊಬೈಲ್‌, ಕಂಪ್ಯೂಟರ್‌ಗಳಲ್ಲಿ ವೀಕ್ಷಿಸಲು ಸಾಧ್ಯವಾಗುತ್ತದೆ.

ಮಂಗಳೂರು ನಗರದ ಆರು ಕಡೆಗಳಲ್ಲಿ ಸೋಲಾರ್‌ ಸಿಸಿ ಕೆಮರಾವನ್ನು ಅಳವಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದು ಉಂಟಾಗುವ ಬ್ಲ್ಯಾಕ್‌ಸ್ಪಾಟ್‌ ಕಡಿಮೆ ಮಾಡುವುದು ಮುಖ್ಯ ಉದ್ದೇಶ. ಈ ಸಿಸಿ ಕೆಮರಾವನ್ನು ಒಂದು ಕಡೆಯಿಂದ ಮತ್ತೂಂದು ಕಡೆಗೆ ಸ್ಥಳಾಂತರ ಮಾಡಬಹುದಾಗಿದೆ. ವೈಫೈ ತಂತ್ರಜ್ಞಾನ ಇರುವದರಿಂದ ಆರೋಗ್ಯ ನಿರೀಕ್ಷಕರು ಅವರ ಮೊಬೈಲ್‌ನಲ್ಲಿ ವೀಡಿಯೋ ಫೂಟೇಜ್‌ ವೀಕ್ಷಿಸಬಹುದು. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ದೂರು ದಾಖಲಿಸಲು ಇದು ನೆರವಾಗುತ್ತದೆ. -ಪ್ರೇಮಾನಂದ ಶೆಟ್ಟಿ,ಮನಪಾ ಮೇಯರ್‌

 

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

0023

Kasargod: ಅಪಹರಿಸಿ ಹಲ್ಲೆ ಪ್ರಕರಣ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.