![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 2, 2021, 6:55 AM IST
ನವದೆಹಲಿ: “”ಜಗತ್ತಿನಾದ್ಯಂತ ಇರುವ ಇಸ್ಕಾನ್ ದೇಗುಲಗಳು, ತಮ್ಮ ಮೂಲಕ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಹರಡುತ್ತಿವೆ. ಉತ್ಸಾಹ ಹಾಗೂ ಮಾನವೀಯತೆಯ ಪರಮೋತ್ಛ ಸ್ಥಿತಿಯೇ ನಂಬಿಕೆ ಎಂಬುದನ್ನು ಇಡೀ ವಿಶ್ವಕ್ಕೆ ಇಸ್ಕಾನ್ ಸಂಸ್ಥೆ ಮನವರಿಕೆ ಮಾಡಿಕೊಟ್ಟಿವೆ” ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಸ್ಥೆಯ (ಇಸ್ಕಾನ್) ಸಂಸ್ಥಾಪಕರಾದ ಶ್ರೀ ಶ್ರೀಮದ್ ಭಕ್ತಿವೇದಾಂತ ಪ್ರಭುಪಾದರ 125ನೇ ಜನ್ಮದಿನೋತ್ಸವದ ಸ್ಮರಣೆಗಾಗಿ ಕೇಂದ್ರ ಸರ್ಕಾರ ತಯಾರಿಸಿರುವ 125 ರೂ. ಮೌಲ್ಯದ ಬೆಳ್ಳಿ ನಾಣ್ಯಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, “”ಇಂದು ನಾವು ಶ್ರೀಮದ್ ಪ್ರಭುಪಾದರ 125ನೇ ಜನ್ಮ ದಿನೋತ್ಸವವನ್ನು ಆಚರಿಸುತ್ತಿದ್ದೇವೆ. ಇದು ಧ್ಯಾನ, ಭಕ್ತಿ ಮತ್ತು ನೆಮ್ಮದಿಯ ಸಮ್ಮಿಲನದಿಂದ ಆಗು ವಂಥ ಸಂತೋಷವನ್ನು ನೀಡುವಂಥ ಸುದಿನ ವಾಗಿದೆ. ವಿಶ್ವದೆಲ್ಲೆಡೆ ಹರಡಿರುವ ಶ್ರೀ ಪ್ರಭುಪಾದರ ಕೋಟ್ಯಂತರ ಅನುಯಾಯಿಗಳು ಈ ಸಂತೋಷವನ್ನು ಇಂದು ಅನುಭವಿಸುತ್ತಿದ್ದಾರೆ” ಎಂದು ತಿಳಿಸಿದರು.
ಇದೇ ವೇಳೆ, ಭಾರತೀಯ ಸಮಾಜಕ್ಕಾಗಿ ಇಸ್ಕಾನ್ ಸಂಸ್ಥೆ ನೀಡಿದ ಸೇವೆಯನ್ನು ಸ್ಮರಿಸಿದ ಅವರು, “”2001ರಲ್ಲಿ ಕಛ್ ನಲ್ಲಿ ಭೂಕಂಪವಾದಾಗ, ಉತ್ತರಾಖಾಂಡ, ಒಡಿಶಾ, ಪಶ್ಚಿಮ ಬಂಗಾಳಗಳಲ್ಲಿ ನೈಸರ್ಗಿಕ ವಿಕೋಪಗಳಾದಾಗ ಅಲ್ಲೆಲ್ಲಾ ಇಸ್ಕಾನ್ ನೀಡಿದ ಸೇವೆಯನ್ನು ಎಂದಿಗೂ ಮರೆಯುವಂತಿಲ್ಲ” ಎಂದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಕಿಶನ್ ರೆಡ್ಡಿ ಕೂಡ ಭಾಗವಹಿಸಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.