![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 2, 2021, 5:37 PM IST
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಿದ ಹಿನ್ನೆಲೆ ಇಂದು (ಸೆ.2) ಹೊಸ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ವಾರಾಂತ್ಯ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದೆ.
ಹೊಸ ಮಾರ್ಗಸೂಚಿ ಪ್ರಕಾರ ಜಿಲ್ಲೆಯಾದ್ಯಂತ ಪ್ರತಿ ಶುಕ್ರವಾರ ರಾತ್ರಿ 9.00 ರಿಂದ ಪ್ರತಿ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತವೆ . ಹಾಗೂ ಜಿಲ್ಲೆಯಾದ್ಯಂತ ಪ್ರತಿ ದಿನ ರಾತ್ರಿ 9.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹೊಸ ಮಾರ್ಗಸೂಚಿಯಲ್ಲಿ ಏನಿದೆ ?
6.ಅಂತ್ಯ ಸಂಸ್ಕಾರಕ್ಕೆ 20 ಜನಕ್ಕೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.
7.ಪೂಜಾ ಸ್ಥಳಗಳಾದ ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿಸಲಾಗಿದೆ. ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವುದರೊಂದಿಗೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾದ SOP ಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಗೊಳಪಟ್ಟು ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲು ಅನುಮತಿಸಿದೆ. ಆದರೆ, ಸದರಿ ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆಗಳು, ದೇವಾಲಯ ಉತ್ಸವಗಳು/ಹಬ್ಬಗಳು ,ಮೆರವಣಿಗೆಗಳು ಮತ್ತು ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದೆ.
8.ಕೋವಿಡ್-19 ಮಾರ್ಗ ಸೂಚಿಯಂತೆ ಶೇ. 100 ರಷ್ಟು ಆಸನ ಸಾಮರ್ಥ್ಯದವರೆಗೆ ಸಾರ್ವಜನಿಕ ಸಾರಿಗೆಗಳಿಗೆ ಅನುಮತಿಸಲಾಗಿದೆ.
9.ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್ ಗಳು, ಮಾಲ್ ಗಳು, ಖಾಸಗಿ ಕಚೇರಿಗಳು ಮತ್ತು ಮುಚ್ಚಿದ ಸ್ಥಳಗಳಲ್ಲಿ, ಕೋವಿಡ್-19 ಸೂಕ್ತ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರನ್ವಯ ಕ್ರಮ ಕೈಕೊಳ್ಳಲಾಗುವುದು.
2) ರೋಗಿಗಳು ಮತ್ತು ಅವರೊಂದಿಗಿರುವ ಪರಿಚಾರಕರು – ತುರ್ತು ಅಗತ್ಯತೆಗಾಗಿ ವ್ಯಕ್ತಿಗಳನ್ನು ಸ್ಥಳಾಂತರಿಸಲು ಅನುಮತಿಸಿದೆ.
3) ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳಿಗೆ, ರಾತ್ರಿ ಸಮಯದಲ್ಲಿ ಕಾರ್ಯಾಚರಿಸಲು ಅನುಮತಿಯನ್ನು ನೀಡಲಾಗಿದೆ. ಹಾಗೂ ಅಂತಹ ಸಂಸ್ದೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರ, ಸಂಸ್ಧೆಯಿಂದ ನೀಡಲಾದ ಸೂಕ್ತ ಗುರುತಿನ ಚೀಟಿ / ಅನುಮತಿಗೆ ಸಂಬಂಧಿಸಿದ ದಾಖಲೆಯನ್ನು ಸಲ್ಲಿಸುವ ಮೂಲಕ ಸಂಚರಿಸಬಹುದಾಗಿದೆ.
4) ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಒದಗಿಸುವ ನೌಕರರು ಹಾಗೂ ವಾಹನಗಳನ್ನು ತಮ್ಮ ಸಂಸ್ಧೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯನ್ನು ಸಲ್ಲಿಸಿ ಸಂಚರಿಸಬಹುದಾಗಿದೆ. ಮಾಹಿತಿ ತಂತ್ರಜ್ಜಾನ ಮತ್ತು ಮಾಹಿತಿ ತಂತ್ರಜ್ಜಾನ ಆಧಾರಿತ ಕಂಪನೆ / ಸಂಸ್ದೆ ( IT and ITeS companies /organization) ಗಳಲ್ಲಿ ಕಾರ್ಯ ನಿರ್ವಹಿಸುವ ಅಗತ್ಯ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಹೊರತುಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕಾರ್ಯನಿರ್ವಹಿಸುವುದು (work from home)
5) ವೈದ್ಯಕೀಯ, ತುರ್ತು ಹಾಗೂ ಔಷಧಾಲಯಗಳನ್ನು ಒಳಗೊಂಡ ಅವಶ್ಯಕ ಸೇವೆಗಳು ಯಥಾ ರೀತಿಯಲ್ಲಿ ಸರಕಾರದ ನಿಯಮಗಳೊಂದಿಗೆ ಕಾರ್ಯನಿರ್ವಹಿಸವುದು. ಹಾಗೂ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಿದೆ.
6) ಎಲ್ಲಾ ತರಹದ ಟ್ರಕ್ ಗಳಲ್ಲಿ ಸಾಗಿಸುವ ಸರಕಗಳು, ಸರಕು ವಾಹನ ಅಥವಾ ಇತರೆ ಸರಕು ಸಾಗಾಟ ವಾಹನಗಳು , ಖಾಲಿ ವಾಹನಗಳನ್ನು ಒಳಗೊಂಡು ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇ-ಕಾಮರ್ಸ್ ಕಂಪನಿಗಳು ಹಾಗೂ ಹೋಮ್ ಡೆಲಿವರಿ ಕೆಲಸವನ್ನು ಮುಂದುವರೆಸಲು ಅನುಮತಿಸಿದೆ.
7) ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ .ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ ,ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, ರೈಲ್ವೆ ನಿಲ್ದಾಣಗಳಿಂದ , ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ. ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು / ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.