ಸರಕು, ಸೇವಾ ತೆರಿಗೆ ಸಂಗ್ರಹದಲ್ಲಿ ಶೇಕಡಾ 35 ಹೆಚ್ಚಳ

ಲಾಕ್‌ಡೌನ್‌ ತೆರವು ನಂತರ ಆರ್ಥಿಕ ಚಟುವಟಿಕೆ ಚೇತರಿಕೆ ; ಆಗಸ್ಟ್‌ನಲ್ಲಿ 3,884.37 ಕೋಟಿ ರೂ. ಜಿಎಸ್‌ಟಿ ಸಂಗ್ರಹ

Team Udayavani, Sep 3, 2021, 3:42 PM IST

ಸರಕು, ಸೇವಾ ತೆರಿಗೆ ಸಂಗ್ರಹದಲ್ಲಿ ಶೇಕಡಾ 35 ಹೆಚ್ಚಳ

ಬೆಂಗಳೂರು: ಕೋವಿಡ್‌ ಲಾಕ್‌ಡೌನ್‌ ತೆರವುನಂತರ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಚೇತರಿಕೆಯಾಗಿದ್ದು, ಸರಕು ಮತ್ತು ಸೇವಾ ತೆರಿಗೆ
ಸಂಗ್ರಹದಲ್ಲಿ ಶೇ.35 ಹೆಚ್ಚಳವಾಗಿದೆ. ಮುದ್ರಾಂಕ ಮತ್ತು ನೋಂದಣಿ ಹಾಗೂ ಮೋಟಾರು ವಾಹನ ತೆರಿಗೆಯಲ್ಲಿ ಏರಿಕೆ ಕಾಣದೆ ಚಿಂತೆಗೊಳ ಗಾಗಿದ್ದ ಹಣಕಾಸು ಇಲಾಖೆಗೆ ವಾಣಿಜ್ಯ ತೆರಿಗೆ ಆಗಸ್ಟ್‌ ತಿಂಗಳಲ್ಲಿ ಒಟ್ಟಾರೆ 3,884.37 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿರುವುದ ರಿಂದ ಆಶಾದಾಯಕ ಬೆಳವಣಿಗೆಯಾಗಿದೆ.

ಜುಲೈ ಮಾಹೆಗೆ ಆಗಸ್ಟ್‌ನಲ್ಲಿ ಸಂಗ್ರಹವಾಗಿರುವ ಜಿಎಸ್‌ಟಿಯಲ್ಲಿ ಗಣನೀಯ ಏರಿಕೆ ಕಂಡು ಬಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.35 ಹೆಚ್ಚಳಗೊಂಡಿದ್ದು ಇದು ಉದ್ಯಮ ಹಾಗೂ ಕೈಗಾರಿಕೆ ವಲಯ ಯಥಾಸ್ಥಿತಿಗೆ ಬರುತ್ತಿರುವ ಲಕ್ಷಣ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಏಪ್ರಿಲ್‌ ತಿಂಗಳಿನಲ್ಲಿ 1544,73 ಕೋಟಿ ರೂ. ಸಂಗ್ರಹವಾಗಿದ್ದ ಜಿಎಸ್‌ಟಿ ಜುಲೈ ತಿಂಗಳ ವೇಳೆಗೆ 3,884.37 ಕೋಟಿ ರೂ. ತಲುಪಿದ್ದು, ಮೂರನೇ ಅಲೆ
ಎದುರಾಗದಿದ್ದರೆವಾಣಿಜ್ಯ ತೆರಿಗೆವಲಯದಿಂದ ಬಜೆಟ್‌ನ ನಿರೀಕ್ಷಿತ ಪ್ರಮಾಣದ ಸಂಪನ್ಮೂಲ ಕ್ರೋಢೀಕರಣವಾಗಲಿದೆ ಎಂದು ಹೇಳಲಾಗಿದೆ.

ವಾಣಿಜ್ಯ ತೆರಿಗೆನಿಂದ ಒಟ್ಟಾರೆ ಕರ್ನಾಟಕಕ್ಕೆ ಆಗಸ್ಟ್‌ ತಿಂಗಳಲ್ಲಿ 5,614.16 ರೂ. ಸಂಗ್ರಹವಾಗಿದೆ. ಕೋವಿಡ್‌ ಲಾಕ್‌ಡೌನ್‌ ತೆರವು, ಲಸಿಕೆ ಅಭಿಯಾನದ ನಂತರ ವಾಣಿಜ್ಯ ವಲಯದಲ್ಲಿ ಚಟುವಟಿಕೆಗಳು ಪುನಾರಂಭಗೊಂಡು ಗ್ರಾಹಕರ ಖರೀದಿ ಸಾಮರ್ಥ್ಯವೂ ಹೆಚ್ಚಳಗೊಂಡಿರುವುದು, ತೆರಿಗೆ ಸೋರಿಕೆ ಹಾಗೂ ನಕಲಿಬಿಲ್‌ಗ‌ಳಿಗೆ ಕಡಿವಾಣ ಬಿದ್ದಿರುವ ಪರಿಣಾಮ ತೆರಿಗೆ ಸಂಗ್ರಹದಲ್ಲಿ ಏರಿಕೆಯಾಗಿದೆ ಎಂದು ಹಣಕಾಸು ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಇದನ್ನೂ ಓದಿ:ತಮಿಳು ನಿರ್ದೇಶಕ ಮಣಿ ರತ್ನಂ ವಿರುದ್ಧ ಎಫ್‍ಐಆರ್ ದಾಖಲು  

ಮಾರಾಟ ತೆರಿಗೆಯೂ ಹೆಚ್ಚಳ: ಇದೇ ಸಂದರ್ಭದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಸೇರಿದಂತೆ ತೈಲಗಳ ಮೇಲೆ ಕರ್ನಾಟಕ ಮಾರಾಟ ತೆರಿಗೆ ಸಂಗ್ರಹ ಹಾಗೂ ವೃತ್ತಿ ತೆರಿಗೆಯೂ ಕಳೆದ ಎರಡು ತಿಂಗಳಿನಿಂದ ಏರಿಕೆ ಕಂಡಿದೆ. ಏಪ್ರಿಲ್‌ನಲ್ಲಿ ಮಾರಾಟ ತೆರಿಗೆ 1620.63 ಕೋಟಿ ರೂ., ಮೇ ನಲ್ಲಿ 1236.39 ರೂ. ಸಂಗ್ರಹವಾಗಿ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತಾದರೂ ಜೂನ್‌ನಲ್ಲಿ 1468 ಕೋಟಿ ರೂ. ಸಂಗ್ರಹವಾಗಿ ಚೇತರಿಕೆ ಕಂಡಿತ್ತು. ಜುಲೈನಲ್ಲೂ 1729.79ಕೋಟಿ ರೂ. ಸಂಗ್ರಹವಾಗಿದೆ. ಅದೇ ರೀತಿ ವೃತ್ತಿ ತೆರಿಗೆ ಏಪ್ರಿಲ್‌ನಲ್ಲಿ 82.75 ಕೋಟಿ ರೂ.. ಮೇನಲ್ಲಿ 84.28 ಕೋಟಿ ರೂ., ಜೂನ್‌ನಲ್ಲಿ 86.08 ಕೋಟಿ ರೂ. ಸಂಗ್ರಹವಾಗಿತ್ತು. ಜುಲೈನಲ್ಲಿ 86.63ಕೋಟಿ ರೂ. ಸಂಗ್ರಹವಾಗಿದೆ.

ಈ ಮಧ್ಯೆ, ಆಗಸ್ಟ್‌ ತಿಂಗಳಲ್ಲಿ ಅಬಕಾರಿ ವಲಯದಿಂದ 2067.15 ಕೋಟಿ ರೂ. ಸಂಗ್ರಹವಾಗಿದ್ದು ಕಳೆದ ವರ್ಷದ ಆಗಸ್ಟ್‌ಗೆ ಹೋಲಿಸಿದರೆ 235.76 ಲಕ್ಷ ರೂ. ತೆರಿಗೆ ಸಂಗ್ರಹ ಹೆಚ್ಚಳಗೊಂಡಿದೆ. ಇದರಿಂದಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಐದು ತಿಂಗಳಲ್ಲಿ ಅಬಕಾರಿ ನಿಂದ 10,197.62 ಕೋಟಿ ರೂ. ಆದಾಯ ಬಂದಂತಾಗಿದೆ. 2021-22 ನೇ ಸಾಲಿನ ಬಜೆಟ್‌ನಲ್ಲಿ 24,580 ಕೋಟಿ ರೂ. ಗುರಿ ನಿಗದಿಪಡಿಸಲಾಗಿತ್ತು.

ಲಾಕ್‌ಡೌನ್‌ ನಂತರ ವ್ಯಾಪಾರ-ವಹಿವಾಟು ಯಥಾಸ್ಥಿತಿಯಂತಾಗಲು ಎಷ್ಟು ದಿನ ಬೇಕಾಗ ಬಹುದೋ ಎಂಬ ಆತಂಕ ಇತ್ತಾದರೂ ಆಗಸ್ಟ್‌ನಲ್ಲಿ
ಸಂಗ್ರಹವಾಗಿರುವ ಸರಕು ಮತ್ತು ಸೇವಾ ತೆರಿಗೆ ಹೊಸ ಭರವಸೆ ಮೂಡಿಸಿದೆ. ಮಾರುಕಟ್ಟೆ ಚೇತರಿಕೆ ಕಾಣುತ್ತಿದೆ ಎಂಬುದರ ಸಂಕೇತವಿದು.
– ಬಿ.ಟಿ.ಮನೋಹರ್‌, ಜಿಎಸ್‌ಟಿಸಲಹಾ ಮಂಡಳಿ ಸದಸ್ಯರು

– ಎಸ್‌. ಲಕ್ಷ್ಮಿ ನಾರಾಯಣ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.