ಗ್ರಾಮೀಣ ಆರ್ಥಿಕತೆಗೆ ಹೊಡೆತ


Team Udayavani, Sep 6, 2021, 3:20 AM IST

ಗ್ರಾಮೀಣ ಆರ್ಥಿಕತೆಗೆ ಹೊಡೆತ

ಕೋವಿಡ್ ಲಾಕ್‌ಡೌನ್‌ ಬಳಿಕ ಬಹುತೇಕ ವಾಣಿಜ್ಯ ಚಟುವಟಿಕೆಗಳು ಹಳಿ ತಪ್ಪಿವೆ. ಕಾಯಿಲೆ ವಕ್ಕರಿಸಿದಾಗ ಅದರ ನಿರ್ವಹಣೆ ಕುರಿತು ಸರಿಯಾಗಿ ಮಾಹಿತಿ ಇಲ್ಲದೆ ಲಾಕ್‌ಡೌನ್‌ ಅನಿವಾರ್ಯವಾಗಿತ್ತು. ಆದರೆ ಈಗ ಪರಿಸ್ಥಿತಿ ಸುಧಾರಿಸಿದ ಬಳಿಕವೂ ವೀಕೆಂಡ್‌ ಕರ್ಫ್ಯೂ ಹೇರಿರುವುದರಿಂದ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದ ಗ್ರಾಮೀಣ ಆರ್ಥಿಕತೆಗೆ ಮೇಲಕ್ಕೆ ಏಳಲಾಗದ ರೀತಿಯ ಹೊಡೆತ ಬೀಳುತ್ತಿದೆ.

ಉಡುಪಿ ಜಿಲ್ಲೆಯಲ್ಲಿ ಕಡಿಮೆ ಪ್ರಮಾಣದ ಹರಡುವಿಕೆ ಇದ್ದರೂ ಸರಕಾರ ಹೆಚ್ಚುವರಿಯಾಗಿ ವಾರಾಂತ್ಯ ಕರ್ಫ್ಯೂ ಹೇರಿದೆ. ಈ ಮೂಲಕ ಹಳಿಗೆ ಬರುತ್ತಿದ್ದ ವಾಣಿಜ್ಯ ಚಟುವಟಿಕೆಗಳು ಮತ್ತೆ ಹಳಿ ತಪ್ಪಲಾರಂಭಿಸಿವೆ.

ಕುಂದಾಪುರದ ಶನಿವಾರದ ಸಂತೆಗೆ ಬೇರೆ ಬೇರೆ ಊರುಗಳಿಂದ ತರಕಾರಿ, ಹಣ್ಣು ಹಂಪಲು ತಂದವರು ಮಾರಾಟ ಮಾಡಲಾಗದೇ ತಲೆ ಮೇಲೆ ಕೈ  ಹೊತ್ತು ಹೋಗುವಂತಹ ಸ್ಥಿತಿ ಬಂದಿದೆ. ಸಂಬಂಧಪಟ್ಟ ಆಡಳಿತ ಪೂರ್ವ ಸೂಚನೆ ನೀಡದ ಫ‌ಲ ಇದು. ಅಷ್ಟಾಗಿಯೂ ಕಡಿಮೆ ಸಂಖ್ಯೆಯಲ್ಲಿ

ಬಂದ ವ್ಯಾಪಾರಿಗಳ ಜತೆ ಕೆಲವು ಪೊಲೀಸರು ನಿಷ್ಕರುಣೆಯಿಂದ ವರ್ತಿಸಿದ್ದು ವ್ಯಾಪಾರಿ ವರ್ಗದಿಂದ ಆಕ್ಷೇಪಣೆಗೆ ಕಾರಣವಾಗಿದೆ. ಶನಿವಾರ, ರವಿವಾರ

ಮಾತ್ರ ವ್ಯಾಪಾರ ಮಾಡುವಂತಿಲ್ಲ; ಸೋಮವಾರದಿಂದ ಶುಕ್ರವಾರವರೆಗೆ ಯಾವುದೇ ಅಡೆತಡೆ ಇಲ್ಲ ಎನ್ನುವುದೇ ಹಾಸ್ಯಾಸ್ಪದವಾಗಿದೆ.

ಕುಂದಾಪುರ ಸಂತೆಗೆ ನೂರಾರು ವರ್ಷಗಳ ಇತಿಹಾಸವಿದೆ. ಗ್ರಾಮೀಣ ಪ್ರದೇಶದಿಂದ ವಿವಿಧ ವಸ್ತುಗಳ ಖರೀದಿಗಾಗಿ ನಗರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನ ಬರುವ ದಿನ ಎಂದರೆ ಸಂತೆಯ ದಿನ. ಗ್ರಾಮಾಂತರದಿಂದ ಬರುವ ಮಂದಿ ಸಂತೆ ವ್ಯವಹಾರ ಮುಗಿಸಿ ನಗರದಲ್ಲಿ ಸುತ್ತಾಡಿ ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಿ ಹೋಗುತ್ತಾರೆ. ಇದು ಹಿಂದಿನಿಂದಲೂ ಬಂದ ಪರಿಪಾಠ. ಆದರೆ ವಾರಾಂತ್ಯ ಕರ್ಫ್ಯೂ ಹೇರಿಕೆಯಿಂದ ಇದೆಲ್ಲ ಅಯೋಮಯವಾಗಿದೆ. ಜನರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಪೇಟೆಗೆ ಬರುವಂತಿಲ್ಲ. ವರ್ತಕರು ತಾವು ತಂದಿರುವ ಸಾಮಗ್ರಿಗಳನ್ನು ಮಾರುವಂತಿಲ್ಲ. ಒಟ್ಟಾರೆಯಾಗಿ ಜನರಿಗೂ, ವ್ಯಾಪಾರಿಗಳಿಗೂ ಇದರಿಂದ ಸಮಸ್ಯೆಯಾಗಿದೆ. ಮಾತ್ರವಲ್ಲದೆ ಮತ್ತೆ ಹಳಿ ಏರುತ್ತಿದ್ದ ಗ್ರಾಮೀಣ ಆರ್ಥಿಕತೆಗೂ ಹೊಡೆತ ನೀಡಿದೆ.

ಸೆಲೂನ್‌ಗಳಿಗೆ ಕೂಡ ಈ ವಾರಾಂತ್ಯ  ಹೊಸ ಸಂಕಟ ಉಂಟು ಮಾಡಿದೆ. ಮಂಗಳವಾರ ವಾರದ ರಜೆ, ಶನಿವಾರ, ರವಿವಾರ ಕರ್ಫ್ಯೂ. ವಾರದಲ್ಲಿ ನಾಲ್ಕೇ ದಿನ ಕಾರ್ಯನಿರ್ವಹಿಸುವಂತಾಗಿದೆ. ಬೇರೆಡೆಯಿಂದ ಬಂದು ಉದ್ಯೋಗದಲ್ಲಿರುವವರಿಗೆ ವೇತನ ಕೊಡುವುದು ಹೇಗೆಂಬ ಚಿಂತೆ ಉಂಟಾಗಿದೆ. ಬಸ್‌ಗಳಲ್ಲೂ ರಜಾದಿನ ಹೆಚ್ಚಿನ ಜನರ ಓಡಾಟ ಇಲ್ಲದ ಕಾರಣ ಆದಾಯಕ್ಕೆ ಖೋತಾ ಆಗಿ ಕೆಲವು ಬಸ್‌ಗಳು ವಾರಾಂತ್ಯ ಕರ್ಫ್ಯೂ ಸಂದರ್ಭ ಓಡಾಟವನ್ನೇ ಸ್ಥಗಿತಗೊಳಿಸಿವೆ. ಶಾಲೆ, ಕಾಲೇಜು ಆರಂಭಿಸಿ, ಮದುವೆಗೆ 400 ಜನ

ಸೇರಬಹುದೆನ್ನುವ ಸರಕಾರ ಏಕಾಏಕಿ ವಾರಾಂತ್ಯ ಕರ್ಫ್ಯೂ ಹೇರಿ ಜನಜೀವನದ  ಜತೆ ಆಟವಾಡುತ್ತಿರುವುದು ಸರಿಯಲ್ಲ. ಸರಕಾರವು ಆಯಾ ಪ್ರದೇಶದ ಪರಿಸ್ಥಿತಿಯನ್ನು ಅರಿತುಕೊಂಡು ಸೂಕ್ತ ರೀತಿಯ ಕಟ್ಟುನಿಟ್ಟಿನ ಕ್ರಮದ  ಮೂಲಕ ಕೊರೊನಾ ಹರಡುವಿಕೆ ನಿಯಂತ್ರಿಸಲಿ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ.

–   ಸಂ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

5

Koteshwara: ಎಂಬಿಬಿಎಸ್‌ ಮುಗಿಸಿದ್ದ ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.