ನದಿಗಳಿಗೆ ಕಲುಷಿತ ನೀರು ಸೇರ್ಪಡೆಯಾಗದಂತೆ ನಿಗಾ ಅಗತ್ಯ
Team Udayavani, Sep 6, 2021, 3:30 AM IST
ಮಂಗಳೂರು ಹೊರವಲಯದ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮೂಲವಾಗಿರುವ ಫಲ್ಗುಣಿ ನದಿ ಹಾಗೂ ಮರವೂರು ಡ್ಯಾಂಗೆ ಪಚ್ಚನಾಡಿ ಘನತ್ಯಾಜ್ಯ ಯಾರ್ಡ್ನ ಭೂಭರ್ತಿ (ಲ್ಯಾಂಡ್ಫಿಲ್ಲಿಂಗ್) ಪ್ರದೇಶದಿಂದ ಹೊರಹರಿಯುವ ಕಲುಷಿತ ನೀರು ಸೇರ್ಪಡೆಯಾಗಿ ಮಲಿನಗೊಂಡಿದ್ದು ಆರೋಗ್ಯಕ್ಕೆ ಹಾನಿಕಾರಿ ಅಂಶ ಗಳನ್ನು ಒಳಗೊಂಡಿದೆ ಎಂದು ಎಂಬುದಾಗಿ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಮಾಹಿತಿಯಲ್ಲಿ ಹೊರಗೆಡವಿರುವ ಅಂಶಗಳು ನಿಜಕ್ಕೂ ಆಘಾತಕಾರಿಯಾಗಿದ್ದು ಇದನ್ನು ಗಂಭೀರ ವಾಗಿ ಪರಿಗಣಿಸಿ ಸೂಕ್ತ ಕ್ರಮಗಳಿಗೆ ಮುಂದಾಗಬೇಕಾದ ತುರ್ತು ಅವಶ್ಯಕತೆ ಇದೆ.
ಕಲುಷಿತ ನೀರು, ತ್ಯಾಜ್ಯಗಳು ಸೇರಿ ಕುಡಿಯುವ ನೀರು ಮಲಿನಗೊಳ್ಳುತ್ತಿರುವುದು ಕೇವಲ ಫಲ್ಗುಣಿ, ಮರವೂರು ಡ್ಯಾಂನ ಸಮಸ್ಯೆ ಮಾತ್ರ ಅಲ್ಲ. ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನೇತ್ರಾವತಿ ನದಿ ಕೂಡ ಇದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದೆ.
ಮರವೂರು ಡ್ಯಾಂನಿಂದ ಸುತ್ತಮುತ್ತಲಿನ ಸುಮಾರು 20 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಇದೀಗ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಬಹಿರಂಗ ಪಡಿಸಿರುವ ಮಾಹಿತಿ ಡ್ಯಾಂನ ಕುಡಿಯುವ ನೀರಿನ ಶುದ್ಧತೆಯ ವಾಸ್ತವಿಕತೆಯನ್ನು ಬಹಿರಂಗ ಪಡಿಸಿದೆ ಮಾತ್ರವಲ್ಲದೆ ಜನರ ಆರೋಗ್ಯದ ಕುರಿತಂತೆಯೂ ಗಂಭೀರವಾಗಿ ಪರಿಗಣಿಸಬೇಕಾದ ವಿಚಾರವಾಗಿದೆ.
ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ದಿನಕ್ಕೆ ಸುಮಾರು 300 ಟನ್ಗಳಷ್ಟು ಘನ ತ್ಯಾಜ್ಯ ಸಂಗ್ರಹವಾಗಿ ಪಚ್ಚನಾಡಿಯ ಡಂಪಿಂಗ್ಯಾರ್ಡ್ಗೆ ಬರುತ್ತಿದೆ. ಇದರಲ್ಲಿ ಬಹುಪಾಲು ಘನತ್ಯಾಜ್ಯವನ್ನು ಈಗಲೂ ಲ್ಯಾಂಡ್ಫಿಲ್ಲಿಂಗ್ ಮೂಲಕ ನಿರ್ವಹಿಸಲಾಗುತ್ತದೆ. ಘನ ತ್ಯಾಜ್ಯ ಶೇಖರಣಾ ಪ್ರದೇಶದಿಂದ ಹರಿಯುವ ಕೊಳಚೆ ನೀರು ಫಲ್ಗುಣಿ ನದಿಗೆ ಸೇರುತ್ತಿದೆ ಎಂಬ ವಿಚಾರ ಈ
ಹಿಂದೆಯೇ ಹಲವಾರು ಬಾರಿ ಕೇಳಿಬಂದಿತ್ತು. ಈ ಬಗ್ಗೆ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಲ್ಲಿ ಪರಿಸರ ನಿಯಂತ್ರಣ ಮಂಡಳಿ ನ್ಯಾಯಾಲಯಕ್ಕೆ ಸಲ್ಲಿಸಿರುವ 22 ಪುಟಗಳ ಮಾಹಿತಿ ಇದನ್ನು ಧೃಡಪಡಿಸಿದೆ.
ಈ ಒಂದು ಸಮಸ್ಯೆಯನ್ನು ಸರಕಾರ, ಮಹಾನಗರ ಪಾಲಿಕೆ ಗಂಭೀರವಾಗಿ ಪರಿಗಣಿಸಿ, ಲ್ಯಾಂಡ್ಫಿಲ್ಲಿಂಗ್ ಯಾರ್ಡ್ನಿಂದ ಕಲುಷಿತ ನೀರು ಕುಡಿಯುವ ನೀರು ಮೂಲಗಳಿಗೆ ಸೇರದಂತೆ ಕ್ರಮಗಳಿಗೆ ಮುಂದಾಗಬೇಕಾಗಿದೆ. ಈ
ನಿಟ್ಟಿನಲ್ಲಿ ತ್ಯಾಜ್ಯ ನಿರ್ವಹಣೆಗೆ ಲ್ಯಾಂಡ್ಫಿಲ್ಲಿಂಗ್ನಂತಹ ಹಳೆಯ ಮಾದರಿಗಳ ಬದಲಿಗೆ ವೈಜ್ಞಾನಿಕ ಮಾದರಿಗಳನ್ನು ಅಳವಡಿಸುವ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳಬೇಕಾಗಿದೆ.
ಪರಿಸರ ನಿಯಂತ್ರಣ ಮಂಡಳಿಯ ಮಾಹಿತಿ ತುಂಬೆ ವೆಂಟೆಡ್ಡ್ಯಾಂನ ನೀರಿನ ಶುದ್ದತೆಯ ಬಗ್ಗೆಯೂ ಗಮನಹರಿಸುವಂತೆ ಮಾಡಿದೆ. ಇಲ್ಲಿಯೂ ಕಲುಷಿತ ನೀರು ಸೇರ್ಪಡೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವ ಎಚ್ಚರಿಕೆಯನ್ನು ರವಾನಿಸಿದೆ.
–ಸಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
Mangaluru City Corporation: ಸೆ.19ರಂದು ಮೇಯರ್, ಉಪ ಮೇಯರ್ ಚುನಾವಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.