ದಕ್ಷಿಣ ಕನ್ನಡ ಜಿಲ್ಲೆ: ಶಾಲೆಗಳ ತರಗತಿ ಆರಂಭ ಸದ್ಯಕ್ಕಿಲ್ಲ
Team Udayavani, Sep 6, 2021, 6:30 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಯಶಸ್ವಿಯಾಗಿ ದ್ವಿತೀಯ ಪಿಯುಸಿ ಭೌತಿಕ ತರಗತಿ ಆರಂಭವಾಗಿದ್ದರೂ ಉಳಿದ ತರಗತಿ ಆರಂಭದ ಬಗ್ಗೆ ಜಿಲ್ಲಾಡಳಿತ ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ. ಹೀಗಾಗಿ ಸೆ. 6ರಿಂದ 6ರಿಂದ 8ನೇ ತರಗತಿ ಆರಂಭಿಸಲು ರಾಜ್ಯ ಸರಕಾರ ಅನುಮತಿ ನೀಡಿದ್ದರೂ ಇದು ದ.ಕ. ಜಿಲ್ಲೆಗೆ ಅನ್ವಯಿಸುವುದಿಲ್ಲ.
“ಉದಯವಾಣಿ’ ಜತೆಗೆ ಮಾತನಾಡಿದ ಜಿ.ಪಂ. ಸಿಇಒ ಡಾ| ಕುಮಾರ್, “ಜಿಲ್ಲೆಯಲ್ಲಿ 6ರಿಂದ 8ನೇ ತರಗತಿ ತನಕದ ತರಗತಿಗಳನ್ನು ಆರಂಭಿಸುವ ಕುರಿತು ಈವರೆಗೆ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ. 9 ಮತ್ತು 10ನೇ ತರಗತಿ ಕೂಡ ಸದ್ಯ ಆರಂಭವಾಗುತ್ತಿಲ್ಲ. ಕೊರೊನಾ ಪಾಸಿಟಿವಿಟಿ ದರ ಕಡಿಮೆ ಆಗುತ್ತಿದ್ದರೆ ಅದರ ಆಧಾರದಲ್ಲಿ ಕೆಲವೇ ದಿನದಲ್ಲಿ ಸಭೆ ನಡೆಸಿ ಶಾಲಾರಂಭದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.
ಉಡುಪಿಯಲ್ಲಿ ಇಂದಿನಿಂದ :
ಉಡುಪಿ ಜಿಲ್ಲೆಯಾದ್ಯಂತ 6ರಿಂದ 8ನೇ ತರಗತಿ ಗಳು ಸೋಮವಾರದಿಂದ (ಸೆ. 6) ಆರಂಭಗೊಳ್ಳಲಿವೆ. ಇದಕ್ಕಾಗಿ ತರಗತಿಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ ಸಿದ್ಧಪಡಿಸಿಡಲಾಗಿದೆ.
ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಶಾಲೆಗಳಿಗೆ ತೆರಳಿ ಕೊರೊನಾ ಮಾರ್ಗಸೂಚಿಗಳ ಪಾಲನೆ ಆಗುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಡಿಡಿಪಿಐ ಎನ್.ಎಚ್. ನಾಗೂರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.