ಸಾಂಪ್ರದಾಯಿಕ ಮಾದರಿ ಬಳಸಿ ಲಸಿಕೆ ವಿತರಿಸಿ
Team Udayavani, Sep 7, 2021, 7:00 AM IST
ಶಿಮ್ಲಾ: ದೇಶದ ಜನರು ಲಸಿಕೆ ಪಡೆಯುವಂತೆ ಉತ್ತೇಜಿಸಲು ಸಾಂಪ್ರದಾಯಿಕ ಮಾದರಿಗಳನ್ನು ಅನುಸರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ವೈದ್ಯಕೀಯ ಸಿಬಂದಿಗೆ ಕರೆ ನೀಡಿದ್ದಾರೆ.
ಸೋಮವಾರ ಹಿಮಾಚಲ ಪ್ರದೇಶದ ವೈದ್ಯಕೀಯ ಸಿಬಂದಿ ಹಾಗೂ ಲಸಿಕೆಯ ಫಲಾನುಭವಿಗಳೊಂದಿಗೆ ವರ್ಚುವಲ್ ವೇದಿಕೆಯಲ್ಲಿ ಮಾತನಾಡಿದ ಅವರು ಈ ಮಾತನ್ನು ಹೇಳಿದ್ದಾರೆ.
ಹಿ.ಪ್ರದೇಶ ರಾಜ್ಯ ಅರ್ಹರಿಗೆ ಮೊದಲ ಡೋಸ್ ಲಸಿಕೆ ನೀಡಿದ ಮೊದಲ ರಾಜ್ಯವಾಗಿ ಹೊರಹೊಮ್ಮಿದೆ. ಆ ಹಿನ್ನೆಲೆಯಲ್ಲಿ ವೈದ್ಯಕೀಯ ಸಿಬಂದಿಯನ್ನು ಮೋದಿ ಅಭಿನಂದಿಸಿದ್ದಾರೆ. ಹಿಮಾಚಲ ಇದೀಗ ಚಾಂಪಿಯನ್. ನಮ್ಮ ದೇಶದಲ್ಲಿ ಪ್ರತಿನಿತ್ಯ 1.25 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಇದು ಹಲವು ದೇಶಗಳ ಜನಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯಾಗಿದೆ ಎಂದು ಹೇಳಿದರು.
ಹಿ.ಪ್ರದೇಶದ ಕೆಲವು ಸ್ಥಳಗಳಲ್ಲಿ ಸಾಂಪ್ರದಾಯಿಕ ವಿಚಾರಗಳ ಅನುಸಾರ ಲಸಿಕೆ ಅಭಿಯಾನ ನಡೆಸಲಾಗಿದೆ. ಅಂಥ ಕ್ರಮಗಳಿಂದ ಹೆಚ್ಚು ಜನರು ಲಸಿಕೆ ಹಾಕಿಸಿಕೊಳ್ಳಲು ಮುಂದಾಗುತ್ತಾರೆ. ನಾವು ಲಸಿಕೆ ಜತೆ ಸೂಕ್ತ ಮುನ್ನೆಚ್ಚರಿಕೆ ಪಾಲಿಸುವುದನ್ನು ಮರೆಯಬಾರದು ಎಂದೂ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್
Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ
VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ
Bulldozer Action:ಬುಲ್ಡೋಜರ್ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್
Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್
Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್ ವಿದ್ಯಾರ್ಥಿಗಳು
Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ
Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ
VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.