ಮೆಸ್ಕಾಂ ಉಪವಿಭಾಗದಲ್ಲಿ ಟಿಸಿ ಬ್ಯಾಂಕ್‌


Team Udayavani, Sep 7, 2021, 1:11 AM IST

ಮೆಸ್ಕಾಂ ಉಪವಿಭಾಗದಲ್ಲಿ ಟಿಸಿ ಬ್ಯಾಂಕ್‌

ಮಂಗಳೂರು: ವಿದ್ಯುತ್‌ ಪರಿವರ್ತಕ (ಟ್ರಾನ್ಸ್‌ಫಾರ್ಮರ್‌) ಹಾಳಾದರೆ 24 ಗಂಟೆಯೊಳಗೆ ಅದನ್ನು ಬದಲಾಯಿಸಿ ಹೊಸ ಟಿಸಿ ಅಳವಡಿ ಸಬೇಕು. ಈ ಕಾರಣಕ್ಕಾಗಿ ಮೆಸ್ಕಾಂ ವ್ಯಾಪ್ತಿಯ ಎಲ್ಲ ಉಪವಿಭಾಗಗಳಲ್ಲಿ ಟಿಸಿ ಬ್ಯಾಂಕ್‌ ಸ್ಥಾಪಿಸಬೇಕು ಎಂದು ಇಂಧನ ಖಾತೆ ಸಚಿವ ವಿ. ಸುನಿಲ್‌ ಕುಮಾರ್‌ ಸೂಚಿಸಿದ್ದಾರೆ.

ಮಂಗಳೂರಿನ ಮೆಸ್ಕಾಂ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಮೆಸ್ಕಾಂನ ಪ್ರಗತಿ ಪರಿಶೀಲನ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಟಿಸಿ ಬ್ಯಾಂಕ್‌ ಪರಿಕಲ್ಪನೆ ಸದ್ಯ ರಾಜ್ಯದಲ್ಲಿ ಇಲ್ಲ. ತುರ್ತಾಗಿ ಟಿಸಿ ಎಲ್ಲಾದರೂ ಹಾಳಾದರೆ ಅದನ್ನು ರಿಪೇರಿ ಮಾಡುವುದನ್ನು ಬಿಟ್ಟರೆ ಸಂಗ್ರಹ ನಮ್ಮಲ್ಲಿಲ್ಲ. ಹೀಗಾಗಿ ಟಿಸಿ ಬ್ಯಾಂಕ್‌ನಲ್ಲಿ ಬೇರೆ ಬೇರೆ ಸಾಮರ್ಥ್ಯದ ತಲಾ ಐದು ಟಿಸಿಗಳನ್ನು ಸಂಗ್ರಹಿಸಿಡಬೇಕು ಎಂದವರು ತಿಳಿಸಿದರು.

ಪಡಿತರವಿದ್ದರೆ ವಿದ್ಯುತ್‌ :

ಪಡಿತರ ಚೀಟಿ ಇರುವಂತಹ ಗ್ರಾಮೀಣ ಪ್ರದೇಶದ ಎಲ್ಲ ಮನೆಗಳಿಗೂ ವಿದ್ಯುತ್‌ ನೀಡುವ ಬೆಳಕು ಯೋಜನೆಯನ್ನು ಪರಿಣಾಮ ಕಾರಿಯಾಗಿ ಜಾರಿಗೊಳಿಸಬೇಕು. ಅವರು ಸ್ಥಳೀಯ ಆಡಳಿತದಿಂದ ನಿರಾಕ್ಷೇಪಣ ಪತ್ರ ಪಡೆಯುವ ಅಗತ್ಯವಿಲ್ಲ ಎಂದರು.

ಇಲಾಖೆಯಲ್ಲಿ ಮುಂದಿನ 100 ದಿನದಲ್ಲಿ ಏನಾಗಬೇಕು ಎಂಬುದಕ್ಕೆ ಆದ್ಯತೆ ನೀಡಿ ಗ್ರಾಹಕಸ್ನೇಹಿ ಇಲಾಖೆ ರೂಪಿಸಲು ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ವಿದ್ಯುತ್‌ ಸರಬರಾಜು ಸೋರಿಕೆಯನ್ನು ಶೇ. 50ರಷ್ಟು ಕಡಿಮೆ ಮಾಡಬೇಕು. ರೂಫ್‌ ಟಾಪ್‌ ಸೋಲಾರ್‌ ಯೋಜನೆಗೆ ವಿಶೇಷ ಆದ್ಯತೆ ನೀಡಬೇಕು. 1912 ಕಾಲ್‌ ಸೆಂಟರ್‌ ಅನ್ನು ಮತ್ತಷ್ಟು ಸಕ್ರಿಯ ಗೊಳಿಸಿ ಅದನ್ನು ಮೇಲಧಿಕಾರಿ ಹಂತದವರು ಗಮನಿಸಬೇಕು ಎಂದರು.

ಮೆಸ್ಕಾಂ ನಿರ್ದೇಶಕ ಕಿಶೋರ್‌ ಕುಮಾರ್‌, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್‌ ಕುಮಾರ್‌ ಮಿಶ್ರಾ, ನಿರ್ದೇಶಕ (ತಾಂತ್ರಿಕ) ಪದ್ಮಾವತಿ ಉಪಸ್ಥಿತರಿದ್ದರು.

ಎಲೆಕ್ಟ್ರಿಕ್‌ ರೀಚಾರ್ಜ್‌  ಸೆಂಟರ್‌ :

ಎಲೆಕ್ಟ್ರಿಕ್‌ ವಾಹನಗಳ ಸಂಖ್ಯೆ ಸದ್ಯ ಏರಿಕೆಯಾಗುತ್ತಿರುವ ಕಾರಣದಿಂದ ವಿವಿಧ ಭಾಗಗಳಲ್ಲಿ ಮೆಸ್ಕಾಂ ವತಿಯಿಂದ ಎಲೆಕ್ಟ್ರಿಕ್‌ ರೀಚಾರ್ಜ್‌ ಸೆಂಟರ್‌ ಆರಂಭಿಸ ಬೇಕು. ಮೊದಲಿಗೆ ಮಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರದಲ್ಲಿ ರೀಚಾರ್ಜ್‌ ಸೆಂಟರ್‌ ಆರಂಭಿಸಬೇಕು ಎಂದು ಸಚಿವ ಸುನೀಲ್‌ ಕುಮಾರ್‌ ಸೂಚಿಸಿದರು.

ಗಂಗಾಕಲ್ಯಾಣ; 30 ದಿನದೊಳಗೆ ವಿದ್ಯುತ್‌ :

ವಿವಿಧ ನಿಗಮಗಳ ವತಿಯಿಂದ ಗಂಗಾಕಲ್ಯಾಣ ಬೋರ್‌ವೆಲ್‌ ಯೋಜನೆಗೆ ಸಂಬಂಧಿಸಿ ನಿಗಮದವರು ಮೆಸ್ಕಾಂಗೆ ಹಣ ಪಾವತಿ ಮಾಡಿದ 30 ದಿನದೊಳಗೆ ವಿದ್ಯುತ್‌ ಸಂಪರ್ಕ ಒದಗಿಸಬೇಕು. ನೀಡದಿದ್ದರೆ ಅದಕ್ಕೆ ಇಎ ಜವಾಬ್ದಾರಿಯಾಗಿರುತ್ತಾರೆ. ನಿಗಮ ಹಾಗೂ ಮೆಸ್ಕಾಂ ಜತೆಯಾಗಿ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ರೈತರು ಅಲೆದಾಟ ಮಾಡಲು ಅವಕಾಶ ನೀಡಬಾರದು ಎಂದು ಸುನೀಲ್‌ ಕುಮಾರ್‌ ಸೂಚಿಸಿದರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.