ಕೇರಳದಿಂದ ಬರುವವರಿಗೆ ನೆಗೆಟಿವ್‌ ವರದಿ ಕಡ್ಡಾಯ

ಗಣೇಶ ಹಬ್ಬಕ್ಕೂ ನಿಯಮ ಪಾಲನೆ ಕಡ್ಡಾಯ ಸ್ಥಳದಲ್ಲೇ ಕೋವಿಡ್‌ ಟೆಸ್ಟ್‌ ನಡೆಸಿ ಸುರಕ್ಷತೆ ಕ್ರಮ

Team Udayavani, Sep 9, 2021, 4:00 PM IST

ಕೇರಳದಿಂದ ಬರುವವರಿಗೆ ನೆಗೆಟಿವ್‌ ವರದಿ ಕಡ್ಡಾಯ

ಆನೇಕಲ್‌: ಕೇರಳದಿಂದ ಅತ್ತಿಬೆಲೆ ಮೂಲಕ ಬೆಂಗಳೂರಿಗೆ ಬರುವ ವಾಹನಗಳಲ್ಲಿ ಕಡ್ಡಾಯವಾಗಿ ಕೋವಿಡ್‌ ರಿಪೋರ್ಟ್‌ ಹೊಂದಿರಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹೇಳಿದರು.

ಹೊರ ರಾಜ್ಯದ ವಾಹನಗಳ ಪರಿಶೀಲನೆ: ತಾಲೂಕಿನ ಅತ್ತಿಬೆಲೆ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಖುದ್ದು ಕೇರಳ ಹಾಗೂ ಮಹಾರಾಷ್ಟ್ರ ವಾಹನಗಳ ಪರಿಶೀಲಿಸಿದರು. ಇದೇ ವೇಳೆ ಮಾತನಾಡಿ, ಕೇರಳ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳ ನೋಂದಣಿಯಾಗಿರುವ ವಾಹನಗಳಲ್ಲಿ ಬರುವಂಥವರಿಗೆ ಆರ್‌.ಟಿ. ಪಿ.ಸಿ.ಆರ್‌ ಟೆಸ್ಟ್‌ ಕಡ್ಡಾಯವಾಗಿ ಇರಬೇಕು. ಅತ್ತಿಬೆಲೆ ಗಡಿಯಲ್ಲಿ ಕೇರಳ ಭಾಗದಿಂದ ಹೆಚ್ಚು ವಾಹನಗಳು
ಆಗಮಿಸುವ ಹಿನ್ನೆಲೆ ಕಟ್ಟುನಿಟ್ಟಿನ ತಪಾಸಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕೇರಳದಿಂದ ಬಂದ 85 ಮಂದಿಗೆ ಆರ್‌.ಟಿ.ಪಿ.ಸಿ.ಆರ್‌ ಟೆಸ್ಟ್‌
ಮಾಡಿಸಿದ್ದು ಅಗತ್ಯ ಕ್ರಮಕೈಗೊಂಡಿದ್ದೇವೆ.

ರಾಜ್ಯದ ಗಡಿ ಅತ್ತಿಬೆಲೆಗೆ ಆಗಮಿಸಿದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅವರನ್ನು ಇದೇ ಸಂದರ್ಭದಲ್ಲಿ ಆನೇಕಲ್‌ ಬಿಜೆಪಿ ರೈತಮೋರ್ಚಾ ಅಧ್ಯಕ್ಷ ತಿಮ್ಮರಾಜು ಹಾಗೂ ಸಂಗಡಿಗರು ಪುಸ್ತಕ ನೀಡುವ ಮೂಲಕ ಅಭಿನಂದಿಸಿದರು.

ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್‌, ಅತ್ತಿಬೆಲೆ ವೃತ್ತನಿರೀಕ್ಷಕ ಕೆ.ವಿಶ್ವನಾಥ್‌, ತಾಲೂಕು ಆರೋಗ್ಯಧಿಕಾರಿ ಡಾ.ವಿನಯ್‌ ಕುಮಾರ್‌, ವೈದ್ಯ ಲೋಕೇಶ್‌, ಬಿಜೆಪಿ ಮುಖಂಡ ಜಯಪ್ರಕಾಶ್‌ ರೆಡ್ಡಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ಇದನ್ನೂ ಓದಿ:ಟಿ20 ವಿಶ್ವಕಪ್ ಗೆ ಇಂಗ್ಲೆಂಡ್ ತಂಡ ಪ್ರಕಟ: ಮೂರು ವರ್ಷಗಳ ಬಳಿಕ ಮರಳಿದ ಮಾಜಿ ಆರ್ ಸಿಬಿ ವೇಗಿ

ಗಣೇಶ ಹಬ್ಬಕ್ಕೂ ನಿಯಮ
ಸಾರ್ವಜನಿಕವಾಗಿ ವಾರ್ಡ್‌ಗೊಂದರಂತೆ ಗಣಪತಿ ಪ್ರತಿಷ್ಠಾಪಿಸಬಹುದು. ಅದ್ಧೂರಿ ಆಚರಣೆಗೆ ಅವಕಾಶವಿಲ್ಲ. ಪರಿಸರ ಸ್ನೇಹಿ ಗಣೇಶ ಕೂರಿಸಲು ಅವಕಾಶವಿದೆ. ಕೆಮಿಕಲ್‌ ಗಣಪ ಮಾರಾಟ ಮಾಡಿದ್ರೆ ಸಾರ್ವಜನಿಕರು ದೂರು ನೀಡಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ಮನವಿ ಮಾಡಿದರು.

ಕೋವಿಡ್‌ ಸೋಂಕು ತಡೆಗೆ
ಅಗತ್ಯಕ್ರಮ: ಮಂಜುನಾಥ್‌
ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣ ಹೆಚ್ಚಿದ್ದರೂ ಸಹ ಬೆಂಗಳೂರು ನಗರದಲ್ಲಿ ಕೋವಿಡ್‌ ಸಂಖ್ಯೆಕಡಿಮೆಯಿದೆ.ಕೋವಿಡ್‌ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಕೋವಿಡ್‌ ನಿಯಮ ಪಾಲಿಸಿ ಸಹಕರಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ಮನವಿ ಮಾಡಿದರು.

ಸ್ಥಳದಲ್ಲೇ ಪರೀಕ್ಷೆ
ಕೇರಳದಿಂದ ಬರುವವರಿಗೆಕೋವಿಡ್‌ ರಿಪೋರ್ಟ್‌ ಕಡ್ಡಾಯವಾಗಿ ಇರಬೇಕು. ಒಂದು ವೇಳೆ ಇಲ್ಲದೆ ಹೋದರೆ ಸ್ಥಳದಲ್ಲೇ ಅವರಿಗೆ ಟೆಸ್ಟ್‌
ಮಾಡಿಸುತ್ತೇವೆ. ರಾಜ್ಯಕ್ಕೆ ಬರುವವರು ಸೂಕ್ತ ದಾಖಲೆ ತರಬೇಕು ಎಂದು ಆನೇಕಲ್‌ ತಹಶೀಲ್ದಾರ್‌ ದಿನೇಶ್‌ ಹೇಳಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.