ಗುಜರಾತ್‌ ಬಿಲ್ಲವ ಸಂಘ: ನಾರಾಯಣಗುರುಗಳ ಜಯಂತ್ಯುತ್ಸವ


Team Udayavani, Sep 11, 2021, 1:30 PM IST

ಗುಜರಾತ್‌ ಬಿಲ್ಲವ ಸಂಘ: ನಾರಾಯಣಗುರುಗಳ ಜಯಂತ್ಯುತ್ಸವ

ಬರೋಡಾ: ಗುಜರಾತ್‌ ಬಿಲ್ಲವ ಸಂಘದ ವತಿಯಿಂದ ಬರೋಡಾದ ಅಲ್ಕಾಪು ರಾದ ಸಂಘದ ಶ್ರೀ ಬೈದ್ಯಶ್ರೀ ಸಾಂಸ್ಕೃತಿಕ ಸಭಾಭವನದಲ್ಲಿ ಬ್ರಹ್ಮಶ್ರೀ ನಾರಾಯಣಗು ರುಗಳ 167ನೇ ಜಯಂತಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಭಜನೆ, ಸಂಕೀರ್ತನೆ, ಮಾತೃ ವಂದನೆ ಮತ್ತು ಧಾರ್ಮಿಕ ಕಾರ್ಯಕ್ರಮ ನೆರವೇರಿತು. ಗಾಯತ್ರಿ ಪರಿವಾರ ಬರೋಡದ ಸದಸ್ಯರ ಪಾಲ್ಗೊಳ್ಳುವಿಕೆಯಲ್ಲಿ ಬೆಳಗ್ಗೆ ಗುರು ಪಾದುಕಾ ಪೂಜೆಯಿಂದ ಕಾರ್ಯಕ್ರಮ ಪ್ರಾರಂಭಗೊಂಡಿತು. ಇದೇ ಸಂದರ್ಭದಲ್ಲಿ ನಡೆದ ಮಾತೃ ವಂದನೆ ಕಾರ್ಯಕ್ರಮದಲ್ಲಿ ಕಿರಿಯರೆಲ್ಲರು ತಮ್ಮ ಮಾತಾಪಿತರ ಪಾದಪೂಜೆ ನಡೆಸಿ ಆಶೀರ್ವಾದ ಪಡೆದುಕೊಂಡರು. ಸಂಘದ ಗೌರವಾಧ್ಯಕ್ಷ ದಯಾನಂದ ಬೊಂಟ್ರ ಬೆಳ್ಮಣ್ಣು ಬರೋಡ ಇವರ ಮುಂದಾಳತ್ವ ಹಾಗೂ ಮಾರ್ಗದರ್ಶನದೊಂದಿಗೆ ಜಿಬಿಎಸ್‌ ಅಧ್ಯಕ್ಷ ವಿಶ್ವನಾಥ್‌ ಜಿ. ಪೂಜಾರಿ ಬಾಡೋìಲಿ ಸೂರತ್‌ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಮಾಜಿ ಅಧ್ಯಕ್ಷ ಮೋಹನ್‌ ಸಿ. ಪೂಜಾರಿ ಅಹ್ಮದಾಬಾದ್‌, ನಿಕಟಪೂರ್ವ ಅಧ್ಯಕ್ಷ ಮನೋಜ್‌ ಸಿ. ಪೂಜಾರಿ ಸೂರತ್‌, ಉಪಾಧ್ಯಕ್ಷ ವಾಸು ಪೂಜಾರಿ ಬರೋಡ, ಹರೀಶ್‌ ಪೂಜಾರಿ, ವಾಸು ಪೂಜಾರಿ, ವಿ. ಡಿ. ಅಮೀನ್‌, ಸದಾಶಿವ ಪೂಜಾರಿ ವಾಪಿ, ಶಿಕ್ಷಣ ಸಮಿತಿಯ ಮುಖ್ಯಸ್ಥ ಲಕ್ಷ್ಮಣ್‌ ಪೂಜಾರಿ ಬರೋಡ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ರೈಲ್ವೇ ನಿಲ್ದಾಣದಲ್ಲಿ ಮೀನುಗಳ ಮಸಾಜ್‌ : ಪ್ರಯಾಣಿಕರ ಪಾದಗಳಿಗೆ ಕಚಗುಳಿ!

ದಯಾನಂದ ಬೋಂಟ್ರಾ ಮಾತನಾಡಿ, ನಾವೆಲ್ಲರು ಸ್ವಾಭಿಮಾನದ ಬದುಕಿನೊಂದಿಗೆ ಸ್ವಾವಲಂಬಿಗಳು ಆಗಬೇಕು. ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಆಧ್ಯಾತ್ಮಿಕ ಚಿಂತನೆ ಅಳವಡಿಸಿಕೊಳ್ಳುವುದು ಅಗತ್ಯ ಎಂದರು. ಮೋಹನ್‌ ಸಿ. ಪೂಜಾರಿ ಅಹ್ಮದಾಬಾದ್‌ ಅವರು, ಮಾತೃ ವಂದನೆ ಬಗ್ಗೆ ಪ್ರಶಂಸಿಸಿ, ಗುರುಗಳ ಆದರ್ಶಗಳನ್ನು ಪಾಲಿಸಿಕೊಂಡು ಬರುವಂತೆ ಕರೆ ನೀಡಿದರು.

2020-2021ನೇ ಶೈಕ್ಷಣಿಕ ಸಾಲಿನ ವಿವಿಧ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಅಭಿನಂದಿಸಲಾಯಿತು. ವಿಶ್ವನಾಥ್‌ ಜಿ. ಪೂಜಾರಿ ಸ್ವಾಗತಿಸಿದರು. ವಿದ್ಯಾರ್ಥಿವೇತನದ ಬಗ್ಗೆ ಲಕ್ಷ್ಮಣ್‌ ಪೂಜಾರಿ ವಿವರ ನೀಡಿದರು. ರೇವತಿ ಪೂಜಾರಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಕಾರ್ಯಕ್ರಮಕ್ಕೆ ನೆರವು ನೀಡಿದ ಸರ್ವರನ್ನು ಜತೆ ಕೋಶಾಧಿಕಾರಿ ರವಿ ಸಾಲ್ಯಾನ್‌ ಅಭಿನಂದಿಸಿದರು. ಪ್ರಧಾನ ಕಾರ್ಯದರ್ಶಿ ವಾಸು ವಿ. ಸುವರ್ಣ ವಂದಿಸಿದರು. ಕಾರ್ಯಕ್ರಮದಲ್ಲಿ ಗುಜರಾತ್‌ ಬಿಲ್ಲವ ಸಂಘದ ವಾಪಿ, ಅಂಕಲೇಶ್ವರ್‌, ಸೂರತ್‌, ಬರೋಡ ಹಾಗೂ ಅಹ್ಮದಾಬಾದ್‌ ಶಾಖೆಗಳ ಬಹುತೇಕ ಸದಸ್ಯರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಮಹಾ ಪ್ರಸಾದ ಅನ್ನಸಂತರ್ಪಣೆ ಜರಗಿತು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.