![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 10, 2021, 5:31 PM IST
ಮುಂಬೈ : ಸ್ಯಾಂಡಲ್ವುಡ್ ಹಾಗೂ ಬಾಲಿವುಡ್ ಸೆಲೆಬ್ರಿಟಿಗಳ ಮನೆಯಲ್ಲಿ ಗಣೇಶೋತ್ಸವದ ಸಂಭ್ರಮ ಮನೆ ಮಾಡಿದೆ. ಕೆಲ ನಟ-ನಟಿಯರು ತಮ್ಮ ಮನೆಗೆ ಗಣೇಶನ ಮೂರ್ತಿಯನ್ನು ಬರಮಾಡಿಕೊಂಡು ಭಕ್ತಿಯಿಂದ ಪೂಜೆ ಮಾಡಿದ್ದಾರೆ.
ಬಿಟೌನ್ ಬೆಡಗಿ ಕರೀನಾ ಕಪೂರ್ ಹಾಗೂ ಸೈಫ್ ಅಲಿಖಾನ್ ದಂಪತಿಗಳು ಕೂಡ ತಮ್ಮ ಮನೆಯಲ್ಲಿ ಪರಿಸರ ಸ್ನೇಹಿ (ಮಣ್ಣಿನ) ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಕುಟುಂಬ ಸಮೇತ ಪೂಜೆ ಸಲ್ಲಿಸಿದ್ದಾರೆ.
ತಮ್ಮ ಮನೆಯಲ್ಲಿ ನಡೆದ ಗಣಪತಿ ಪೂಜೆಯ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಬಾಲಿವುಡ್ ಬೇಬೊ ಕರೀನಾ, ಭಕ್ತಿ ಹಾಗೂ ಪ್ರೀತಿಯಿಂದ ನನ್ನ ಕುಟುಂಬದವರ ಜೊತೆ ಗಣೇಶ ಚತುರ್ಥಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು ಎಂದಿದ್ದಾರೆ.
ಮತ್ತೊಂದು ವಿಶೇಷ ಸಂಗತಿಯನ್ನು ಹಂಚಿಕೊಂಡಿರುವ ಕರೀನಾ, ತಮ್ಮ ಹಿರಿಯ ಮಗ ತೈಮೂರ್ ಅಲಿಖಾನ್ ಸ್ವತಃ ಮಣ್ಣಿನಲ್ಲಿ ಗಣಪತಿ ಮೂರ್ತಿ ತಯಾರಿಸಿದ್ದಾನೆ ಎಂದಿದ್ದಾರೆ.
ಸೈಫ್ ಅಲಿಖಾನ್ ಅವರನ್ನು ಮದುವೆಯಾದ ಕರೀನಾ ಕಪೂರ್ ಎರಡು ಗಂಡು ಮಕ್ಕಳಿಗೆ ತಾಯಿಯಾಗಿದ್ದಾರೆ. ಈ ವರ್ಷದ ಫೆಬ್ರುವರಿಯಲ್ಲಿ ಅವರು ಎರಡನೇ ಮಗುವಿಗೆ ಜನ್ಮ ನೀಡಿದರು. ತಮ್ಮ ಎರಡನೇ ಪುತ್ರನಿಗೆ ಜಹಾಂಗೀರ ಎಂದು ನಾಮಕರಣ ಮಾಡಿದರು. ಆದರೆ, ತೈಮೂರ ಹಾಗು ಜಹಾಂಗೀರ ಹೆಸರುಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾದವು. ಇವುಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾವು ಇಷ್ಟಪಟ್ಟು ಈ ಹೆಸರುಗಳನ್ನು ಇಟ್ಟಿದ್ದೇವೆ. ಆದರೆ, ಕೆಲವರು ಇವುಗಳಿಗೆ ಕೋಮು ಬಣ್ಣ ಬಳಯಲು ಪ್ರಯತ್ನಿಸಿದರು ಎಂದು ಬೇಸರ ವ್ಯಕ್ತಪಡಿಸಿದರು.
ಸಲ್ಮಾನ್ ಮನೆಯಲ್ಲೂ ಗಣೇಶನ ಸಂಭ್ರಮ :
ಇನ್ನು ಬಾಲಿವುಡ್ನ ಮತ್ತೋರ್ವ ಸ್ಟಾರ್ ನಟ ಸಲ್ಮಾನ್ ಖಾನ್ ಅವರ ಮನೆಯಲ್ಲಿಯೂ ಪ್ರತಿವರ್ಷ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಮಾಡುತ್ತಾರೆ. ಸ್ವತಃ ಸಲ್ಮಾನ್ ಖಾನ್ ಅವರೇ ಗಣೇಶನ ಮೂರ್ತಿಯನ್ನು ತೆಗೆದುಕೊಂಡು ಬರುತ್ತಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.