ಈ ಕುಟುಂಬದ 29ನೇ ಜಾನುವಾರೂ ನಿಗೂಢ ಸಾವು

ಕಳೆದ ಎರಡೂವರೆ ವರ್ಷದಿಂದ ಜಾನುವಾರುಗಳ ಸಾವು ; ಈವರೆಗೂ ತಿಳಿಯದ ನಿಖರ ಮಾಹಿತಿ

Team Udayavani, Sep 12, 2021, 4:37 PM IST

ಈ ಕುಟುಂಬದ 29ನೇ ಜಾನುವಾರೂ ನಿಗೂಢ ಸಾವು

ಮಂಡ್ಯ: ತಾಲೂಕಿನ ಕೀಲಾರ ಗ್ರಾಮದ ಲೇಟ್‌ ಮಂಚೇಗೌಡ ಅವರ ಕುಟುಂಬದಲ್ಲಿ ಜಾನುವಾರು ಗಳ ಸಾವಿನ ಸರಣಿ ಮುಂದುವರೆದಿದೆ.

ಗಣೇಶನ ಹಬ್ಬದ ದಿನವಾದ ಶುಕ್ರವಾರ ಮತ್ತೊಂದು ಎತ್ತು ಮೃತಪಟ್ಟಿದೆ. ಇದರೊಂದಿಗೆ ನಿಗೂಢಕ್ಕೆಬಲಿಯಾದಜಾನುವಾರುಗಳ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.ಕಳೆದ ಎರಡೂವರೆ ವರ್ಷದಿಂದ ಜಾನುವಾರು ಸರಣಿಯಾಗಿ ಸಾವನ್ನಪ್ಪುತ್ತಿವೆ. ಆದರೆ, ನಿಖರ ಕಾರಣ ಈವರೆಗೂ ತಿಳಿದು ಬಂದಿಲ್ಲ. ಮಂಚೇಗೌಡ ಅವರ ಮಕ್ಕಳಾದ ಶಂಕರೇಗೌಡ ಹಾಗೂ ಕೃಷ್ಣೇ ಗೌಡ ಮತ್ತು ಇವರ ಮಗಳು ಶ್ರುತಿ ಅವರ ಮನೆಯಲ್ಲಿ ಜಾನುವಾರು ಮೃತಪಡುತ್ತಿವೆ. ಇದು ಕುಟುಂಬದವರನ್ನು ಸೇರಿದಂತೆ ಸ್ಥಳೀಯರಿಗೂ ಆತಂಕ ಉಂಟು ಮಾಡಿದೆ.

ಆತಂಕ: ಶುಕ್ರವಾರ ಶ್ರುತಿ ಅವರಿಗೆ ಸೇರಿದ ಎತ್ತು ಅನುಮಾನಾಸ್ಪದವಾಗಿ ಮೃತಪಟ್ಟಿದೆ. ಸ್ಥಳಕ್ಕೆ ತಹಶೀಲ್ದಾರ್‌ ಚಂದ್ರಶೇಖರ್‌ ಶಂ.ಗಾಳಿ, ಪಶು ಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಮಂಜು ನಾಥ್‌, ಡಿವೈಎಸ್ಪಿ ಮಂಜುನಾಥ್‌ ಭೇಟಿ ನೀಡಿ ಪರಿಶೀಲಿಸಿದರು. ಅಂತೆಯೇ ಎತ್ತಿನ ಶವದಿಂದ ಕೆಲಭಾಗವನ್ನು ಸಂಗ್ರಹಿಸಲಾಗಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಆದರೂ ಸಾವಿನ ಪ್ರಕರಣ ಮರು ಕಳಿಸುತ್ತಿರುವ ಆತಂಕಕ್ಕೆಕಾರಣವಾಗಿದೆ. ತಿಳಿಯದ ಕಾರಣ: ಕಳೆದ ವರ್ಷ ಅಕ್ಟೋಬರ್‌ನಲ್ಲಿ ಶಂಕರೇಗೌಡ ಅವರಿಗೆ ಸೇರಿದ ಹಸು ಕೂಡ ಇದೇ ರೀತಿ ಮೃತಪಟ್ಟಿತ್ತು. ಆ ವೇಳೆ ಅಂದಿನ ಪಶು ಪಾಲನಾ ಇಲಾಖೆ ಅಧಿಕಾರಿಗಳು, ಕೆರ ಗೋಡು ಠಾಣೆ ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಇದಲ್ಲದೆ ಬೆಂಗಳೂರಿನ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ವಿಜ್ಞಾನಿಗಳೂ ಆಗಮಿಸಿ ಹಸುವಿನ ಶವ ಪರೀಕ್ಷೆ ನಡೆಸಿ ಕೆಲಭಾಗ ಸಂಗ್ರಹಿಸಿ ಕೊಂಡಿದ್ದರು. ಜತೆಗೆ ಕೆರಗೋಡು ಠಾಣೆಗೆ ದೂರು ಸಲ್ಲಿಸಲಾಗಿದೆ. ಆದರೆ ಈವರೆಗೂ ಜಾನುವಾರು ಸಾವಿಗೆ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ:ಮಹಾದಾಯಿ,ಮೇಕೆದಾಟು ಬಗ್ಗೆ ವಿಪಕ್ಷದಲ್ಲಿದ್ದಾಗ ಮಾತನಾಡಿದ ನಾಯಕರು ಈಗ ಮಾತಾಡುತ್ತಾರೋ.:ಡಿಕೆಶಿ

ಒಂದೇ ಕುಟುಂಬದಲ್ಲಿ ಜಾನುವಾರು ಸಾವನ್ನಪ್ಪಿರುವುದು ನಮಗೂ ನಿಗೂಢ ಮತ್ತು ಆಶ್ಚರ್ಯ ಎನಿಸುತ್ತಿದೆ. ಆದರೆ, ಇಲ್ಲಿಯವರೆಗೂ ಸತ್ತಿ
ರುವ ಜಾನುವಾರುಗಳ ವರದಿ ಒಂದೇ ರೀತಿಯಲ್ಲಿದೆ. ವರದಿಯಲ್ಲಿ ಟಾಕ್ಸಿನ್‌ ಅಂಶದ ಕುರಿತು ಉಲ್ಲೇಖ ಆಗಿದೆ. (ವಿಷ ಮಿಶ್ರಿತ ಆಹಾರ ಸೇವನೆ). ಶೀಘ್ರ ತನಿಖೆಗೆ ಡೀಸಿಗೆ ಮನವಿ ಕೊಡುತ್ತೇನೆ.
– ಡಾ.ಮಂಜುನಾಥ್‌,
ಉಪನಿರ್ದೇಶಕರು, ಪಶು
ಸಂಗೋಪನಾ ಇಲಾಖೆ, ಮಂಡ್ಯ.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.