ವನ್ಯಜೀವಿ ಸಂಪತ್ತನ್ನು ರಕ್ಷಿಸುವ ಕೆಲಸ ಕೇವಲ ಇಲಾಖೆಯದ್ದಲ್ಲ: ಎಚ್.ಪಾಟೀಲ್‌


Team Udayavani, Sep 12, 2021, 4:48 PM IST

hunasuru news

ಹುಣಸೂರು: ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ರಕ್ಷಿಸುವ ಕೆಲಸ ಕೇವಲ ಅರಣ್ಯ ಇಲಾಖೆ ಮಾತ್ರವಲ್ಲ ದೇಶದ ಎಲ್ಲಾ ಪ್ರಜೆಗಳದ್ದಾಗಿದ್ದರೂ ಅದೇಕೋ ಅರಣ್ಯವೆಂದರೆ ಇಲಾಖೆಯದ್ದೆಂದು ಎಲ್ಲರೂ ಉಡಾಫೆ ಮಾಡಿದ್ದರಿಂದ ಇಂದು ಬಾರೀ ಬೆಲೆ ತೆರುವಂತಾಗಿದೆ ಎಂದು ಎಂಟನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮೋಹನ್‌ಕುಮಾರ್.ಎಚ್.ಪಾಟೀಲ್‌ರವರು ಬೇಸರಿಸಿದರು.

ಅರಣ್ಯ ಇಲಾಖೆವತಿಯಿಂದ ನಾಗರಹೊಳೆ  ರಾಷ್ಟ್ರೀಯ ಉದ್ಯಾನವನದ ಹುಣಸೂರು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹುತಾತ್ಮರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಭೂಮಿಯ ಒಟ್ಟು ವಿಸ್ತೀರ್ಣದಲ್ಲಿ ಶೇ.33 ಭಾಗ ಅರಣ್ಯವಿರಬೇಕಿದ್ದು, ಪ್ರಸ್ತುತ ಕೇವಲ ಶೆ.21ರ ಪ್ರಮಾಣದಲ್ಲಿ ಅರಣ್ಯವಿದೆ. ವನ್ಯ ಸಂಪತ್ತು ರಕ್ಷಣೆಯಲ್ಲಿ ಅರಣ್ಯ ಇಲಾಖೆ ಅತ್ಯುತ್ತಮವಾಗಿ ನಿರ್ವಹಿಸುತ್ತಿದೆ. ಇವರಿಗೆ ನಾಡಿನ ಮಂದಿ ಅರಣ್ಯ ಇಲಾಖೆಯ ವಿವಿಧ ಯೋಜನೆಗಳನ್ನು ಬಳಸಿಕೊಂಡು ಅರಣ್ಯವೃದ್ದಿಗೆ ಕೈಗೂಡಿಸಬೇಕಿದೆ, ಆದರೆ ಎಲ್ಲರೂ ಅರಣ್ಯ ಉಳಿಸುವ, ಬೆಳೆಸುವ ಕಾರ್ಯ ಇಲಾಖೆಯದ್ದೆಂದು ಕೈಚೆಲ್ಲಿದ್ದರಿಂದ ಅವಘಡಗಳು ಸಂಭವಿಸುತ್ತಿರುವುದು ನಮ್ಮ ಮುಂದಿದೆ. ಇನ್ನಾದರೂ ವನ್ಯಸಂಪತ್ತನ್ನು ಸಂರಕ್ಷಿಸಲು ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.

ನಾಗರಹೊಳೆ ಮುಖ್ಯಸ್ಥ ಡಿ.ಮಹೇಶ್‌ಕುಮಾರ್ ಮಾತನಾಡಿ, ಅಭಿವೃದ್ಧಿಯ ಹೆಸರಿನಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಅರಣ್ಯನಾಶ, ಹವಾಮಾನ ಬದಲಾವಣೆಯಿಂದಾಗಿ ಜೀವರಾಶಿ ಕಣ್ಮರೆಯಾಗುತ್ತಿದೆ. ಕೋವಿಡ್19ರ ನಡುವೆಯೇ ಇಲಾಖೆ ಸಿಬ್ಬಂದಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ದೇಶದ ಅರಣ್ಯ ಸಂಪತ್ತನ್ನು ಉಳಿಸುವ ನಿಟ್ಟಿನಲ್ಲಿ ನಾಗರಹೊಳೆಯಲ್ಲಿ ಆನೆದಾಳಿಗೆ ಸಿಲುಕಿ ಹುತಾತ್ಮರಾದ ಮಣಿಕಂಠನ್ ನಮಗೆಲ್ಲರಿಗೆ ಸದಾಕಾಲ ಸೂರ್ತಿದಾಯಕರಾಗಿದ್ದಾರೆ. ಅವರಂತೆ ಅರಣ್ಯ ರಕ್ಷಣೆಯಲ್ಲಿ ಅನೇಕ ಅರಣ್ಯ ಸಿಬ್ಬಂದಿಗಳು ತಮ್ಮ ಪ್ರಾಣ ಕಳೆದುಕೊಂಡು ಹುತಾತ್ಮರಾಗಿದ್ದಾರೆ. ಅವರ ಸೇವೆಯನ್ನು ಸ್ಮರಿಸೋಣವೆಂದರು.

ಇದನ್ನೂ ಓದಿ:ಪಿರಿಯಾಪಟ್ಟಣಕ್ಕೆ ಸಂಸದ ಪ್ರತಾಪ್ ಸಿಂಹ ಕೊಡುಗೆ ಏನು…? ಕಾಂಗ್ರೆಸ್ ಪ್ರಶ್ನೆ

ಎ.ಸಿ.ಎಫ್.ಸತೀಶ್ ಮಾತನಾಡಿ ಕಾಡುಗಳ್ಳ ವೀರಪ್ಪನ್‌ನಿಂದ 1991ರ ನ.10ರಂದು ಡಿ.ಸಿ.ಎಫ್.ಶ್ರೀನಿವಾಸನ್ ಹತ್ಯೆಯಾದ ದಿನವನ್ನು ರಾಜ್ಯದಲ್ಲಿ ಅರಣ್ಯ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತಿತ್ತು, ಆದರೆ 1730, ಸೆ.11 ರಂದು ರಾಜಸ್ಥಾನದ ಜೋಧ್‌ಪುರದ ಮಹಾರಾಜ ಅಭಯಸಿಂಗ್ ತನ್ನ ಹೊಸ ಅರಮನೆ ನಿರ್ಮಾಣಕ್ಕಾಗಿ ಸೈನಿಕರು ಕೆಜರಾಲಿ ಎಂಬ ಗ್ರಾಮದಲ್ಲಿ ಬನ್ನಿ(ಕೆಜರಿ) ಮರಗಳನ್ನು ಕಡಿಯಲು ಹೊರತಾಗ ಅದನ್ನು ವಿರೋಧಿಸಿದ 360 ಬುಡಕಟ್ಟು ಮಂದಿ ಅರಣ್ಯರಕ್ಷಣೆಗಾಗಿ ಪ್ರಾಣ ತ್ಯಾಗಮಾಡಿ ರಕ್ಷಣೆ ಮಾಡಿದ ಧ್ಯೋತಕವಾಗಿ ಕೇಂದ್ರ ಸರಕಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನಾಗಿ ಆಚರಿಸಲು ಆದೇಶಿಸಿದ್ದು, ಆ ದಿನವನ್ನು ವನ್ಯಜೀವಿ ಮತ್ತು ಅರಣ್ಯ ಸಂರಕ್ಷಣೆಗೆ ಪ್ರಾಣಕೊಟ್ಟ ವೀರ ಅರಣ್ಯ ಅಕಾರಿಗಳು,ಸಿಬ್ಬಂದಿಗಳ ಸ್ಮರಿಸುವ ದಿನವನ್ನಾಗಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ವರ್ಣಿತ್‌ನೇಗಿ, ಹುಣಸೂರು ಪ್ರಾದೇಶಿಕ ವಿಭಾಗದ ಡಿಸಿಎಫ್ ಡಾ.ಪ್ರಶಾಂತ್ ಕುಮಾರ್, ಪೊಲೀಸ್ ಉಪಾಧೀಕ್ಷಕ ಪಿ,ರವಿಪ್ರಸಾದ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ವಿ.ಸತೀಶ್, ಆರ್‌ಎಫ್‌ಓ. ಕಿರಣ್‌ಕುಮಾರ್ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.