ಶೇ.100 ಲಸಿಕೀಕರಣ: ಕೂಡಿ ಬರುತ್ತಿರುವ ಕಾಲ


Team Udayavani, Sep 13, 2021, 3:40 AM IST

ಶೇ.100 ಲಸಿಕೀಕರಣ:  ಕೂಡಿ ಬರುತ್ತಿರುವ ಕಾಲ

ಕೆಲವೊಂದು ಯೋಜನೆಗಳಲ್ಲಿ ಉಡುಪಿ ಜಿಲ್ಲೆಗೆ ವಿಶೇಷ ಛಾಪು ಇದೆ. ಅಂತೆಯೇ ಶೇ.100 ಕೊರೊನಾ ನಿರೋಧಕ ಲಸಿಕೆ ಪಡೆದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಕಾಲ ಸನ್ನಿಹಿತವಾಗುತ್ತಿದೆ. ಇದು ಕೊರೊನಾ ಸೋಂಕು ಮುಕ್ತ ಜಿಲ್ಲೆಯಾಗಲು ಅತ್ಯಗತ್ಯ ಕೂಡ. ಕೊರೊನಾದಿಂದಾಗಿ ಸ್ಥಾಗಿತ್ಯವನ್ನು ಅನುಭವಿಸುತ್ತಿರುವ ಆರ್ಥಿಕ, ಸಾಮಾಜಿಕ ಚಟುವಟಿಕೆಗಳ ಪುನಶ್ಚೇತನದ ದೃಷ್ಟಿಯಿಂದಲೂ ಇದು ಸಹಕಾರಿ.

ಜನವರಿಯಿಂದ ಆರಂಭಗೊಂಡ ಲಸಿಕೀಕರಣದ ಪ್ರಕ್ರಿಯೆ ಈಗ ನಿರ್ಣಾಯಕ ಕಾಲಘಟ್ಟಕ್ಕೆ ತಲುಪುತ್ತಿದೆ. ಈಗ ಉಡುಪಿ ಜಿಲ್ಲೆಯಲ್ಲಿ ಸುಮಾರು ಶೇ.84ರಷ್ಟು ಜನರಿಗೆ ಮೊದಲ ಡೋಸ್‌ ಲಸಿಕೆಯನ್ನು ನೀಡಲಾಗಿದೆ. 18 ವರ್ಷ ಮೇಲ್ಪಟ್ಟ 10 ಲಕ್ಷ ಜನರಲ್ಲಿ ಸುಮಾರು 8.4 ಲಕ್ಷ ಜನರು ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ. ಸುಮಾರು ಶೇ.33ರಷ್ಟು ಜನರು 2ನೇ ಡೋಸ್‌ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಅಂದರೆ ಮೂರನೆಯ ಒಂದು ಭಾಗದಷ್ಟು ಜನರು ಕೊರೊನಾ ರೋಗನಿರೋಧಕ ಶಕ್ತಿಯನ್ನು ಹೊಂದಿದ್ದಾರೆ. ಇನ್ನು ಶೇ.14ರಷ್ಟು ಜನರಿಗೆ ಮೊದಲ ಡೋಸ್‌, 3ನೇ ಎರಡು ಪಾಲು ಜನರಿಗೆ ಎರಡನೆಯ ಡೋಸ್‌ ಲಸಿಕೆ ಸಿಗಬೇಕಾಗಿದೆ. ಜನಸಂಖ್ಯಾವಾರು ಲಸಿಕೀಕರಣದ ದೃಷ್ಟಿಯಲ್ಲಿ ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲೆ 2ನೇ ಜಿಲ್ಲೆಯಾಗಿದೆ.

ಇದೇ ಸೆ. 17ರಂದು ಎಲ್ಲೆಡೆ ಮೆಗಾಮೇಳವನ್ನು ಆಯೋಜಿಸಲಾಗುತ್ತಿದ್ದು ದೊಡ್ಡ ಪ್ರಮಾಣದಲ್ಲಿ ಲಸಿಕೆಗಳು ಜಿಲ್ಲೆಗೆ ಬರಲಿವೆ. ಸೆ. 17ರಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಹಿಡಿದು ಜಿಲ್ಲಾಸ್ಪತ್ರೆವರೆಗಿನ ಎಲ್ಲ ಸ್ತರಗಳಲ್ಲಿ ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿ ಹೀಗೆ ಜಿಲ್ಲೆಯ ಸುಮಾರು 150 ಕಡೆಗಳಲ್ಲಿ ಲಸಿಕೆ ಶಿಬಿರಗಳು ನಡೆಯಲಿವೆ. ಅಂದು ಆರೋಗ್ಯ ಇಲಾಖೆ ಜತೆ ವಿವಿಧ ನರ್ಸಿಂಗ್‌ ಸಂಸ್ಥೆಗಳು, ಆಸ್ಪತ್ರೆಗಳ ವೈದ್ಯರು, ಶಿಕ್ಷಣ ಇಲಾಖೆ, ಸ್ವಯಂಸೇವಾ ಸಂಘಟನೆಗಳು ಸಹಕರಿಸಲಿದ್ದು ಲಸಿಕೆ ಅಭಿಯಾನದ ಯಶಸ್ಸಿಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಲಿವೆ. ಈ ವರೆಗೆ ಲಸಿಕೆ ಪಡೆಯದೆ ಇರುವ ಜನರು  ಪ್ರಥಮ ಡೋಸನ್ನು ಮತ್ತು 2ನೇ ಡೋಸ್‌ ಪಡೆದುಕೊಳ್ಳಲು ಬಾಕಿ ಇರುವ ಸುಮಾರು 12,000 ಜನರು ಅಂದು ಸಮೀಪದ ಲಸಿಕೆ ಶಿಬಿರಗಳಿಗೆ ತೆರಳಿ ಲಸಿಕೆ ಪಡೆಯಬೇಕಾಗಿದೆ. ಅಲ್ಲಿಯವರೆಗೆ ಜಿಲ್ಲೆಗೆ ಪೂರೈಕೆಯಾಗಿರುವ ಲಸಿಕೆಗಳನ್ನು ನೀಡುವ ಪ್ರಕ್ರಿಯೆ ಮುಂದುವರಿಯಲಿದ್ದು ಜನರು ಇದರ ಪ್ರಯೋಜನವನ್ನೂ ಪಡೆದುಕೊಳ್ಳಬಹುದು.

ಪ್ರಾರಂಭಿಕ ಹಂತದಲ್ಲಿ ಲಸಿಕೆ ಪಡೆಯಲು ಮುಂದಾಗದ ಜನರು, ಅನಂತರ ಸೋಂಕು ವ್ಯಾಪಿಸಿದಾಗ ಒಮ್ಮೆಲೆ ಲಸಿಕೆಗಾಗಿ ಪರದಾಡಿದ್ದು, ಸರಕಾರ, ವ್ಯವಸ್ಥೆಯನ್ನು ದೂಷಿಸಿದ್ದು, ಲಸಿಕೆ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವಾಗ ಮತ್ತೆ ಉದಾಸೀನ ಪಡುತ್ತಿರುವುದು ಹೀಗೆ ಕಳೆದ ಆರೆಂಟು ತಿಂಗಳ ಅವಧಿಯಲ್ಲಿ ಈ ಎಲ್ಲ ಅನುಭವ

ಗಳು ನಮ್ಮ ಕಣ್ಣ ಮುಂದೆ ಇದೆ. ಆರೋಗ್ಯದ ವಿಷಯದಲ್ಲಿ ಇನ್ನೂ ಟ್ರಯಲ್‌ ಆ್ಯಂಡ್‌ ಎರರ್‌ ಥಿಯರಿಯನ್ನು ಅನ್ವಯಿಸಿಕೊಳ್ಳುವುದು ತರವಲ್ಲ. ಸದ್ಯ ಜಿಲ್ಲಾಡಳಿತ ಜಿಲ್ಲೆಯ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ನಿರೋಧಕ ಲಸಿಕೆ ನೀಡಲು ಕಟಿ ಬದ್ಧವಾಗಿ ಈ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಇನ್ನೇನಿದ್ದರೂ ಸಾರ್ವಜನಿಕರದೇ ಪ್ರಮುಖ ಪಾತ್ರ. ಲಸಿಕೆ ಇರುವಾಗ ಪಡೆದುಕೊಳ್ಳುವ ಜಾಣತನವನ್ನು ಜನರು ಈಗಿಂದೀಗಲೇ ಮೆರೆಯಬೇಕು. ಇದು ವೈಯಕ್ತಿಕವೂ ಹೌದು, ನೆರೆಕರೆ-ಸಾಮುದಾಯಿಕ ಹಿತಚಿಂತನೆಯೂ ಹೌದು.

-ಸಂ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.