ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಆಗಲಿ


Team Udayavani, Sep 13, 2021, 6:00 AM IST

ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಆಗಲಿ

ರಾಜ್ಯ ವಿಧಾನಮಂಡಲದ ಅಧಿವೇಶನ ಸೋಮವಾರದಿಂದ ಹತ್ತು ದಿನಗಳ ಕಾಲ ನಡೆಯಲಿದ್ದು,  ರಾಜ್ಯದ ಜನರ ಸಮಸ್ಯೆಗಳು ಹಾಗೂ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಆಗಬೇಕಾಗಿದೆ.

ವಿಧಾನಮಂಡಲ ಅಧಿವೇಶನ ಗದ್ದಲ, ಕೋಲಾಹಲ, ಧರಣಿ, ಪ್ರತಿಭಟನೆಗಳಿಗೆ ಸೀಮಿತವಾಗದೆ ಕಲಾಪ ಮುಂದೂಡಿಕೆಯಂತಹ ಸಂದರ್ಭ ಸೃಷ್ಟಿಯಾಗದಂತೆ ಮೌಲ್ಯಯುತ ಹಾಗೂ ಮಹತ್ವದ ವಿಚಾರಗಳ ಬಗ್ಗೆ ಗಂಭೀರ ಚರ್ಚೆಗೆ ವೇದಿಕೆಯಾಗಬೇಕು ಎಂಬುದು ಜನರ ಆಶಾಭಾವನೆ. ಅಧಿವೇಶನ ಸುಸೂತ್ರ ಹಾಗೂ ಸುಗಮವಾಗಿ ನಡೆಯಲು ಆಡಳಿತ ಹಾಗೂ ವಿಪಕ್ಷಗಳ ಸಮಾನ ಹೊಣೆಗಾರಿಕೆಯೂ ಇದೆ. ಪ್ರತಿಷ್ಠೆ, ಪ್ರಚಾರ, ರಾಜಕೀಯ ಬದಿಗಿಟ್ಟು ಜನಪರ ಸಮಸ್ಯೆಗಳಿಗೆ ಅಧಿವೇಶನ ಧ್ವನಿಯಾಗಬೇಕಾಗಿದೆ.

ಕೊರೊನಾ ಎರಡನೇ ಅಲೆ ಸಂಕಷ್ಟ ಮರೆಯಾಗುತ್ತಿರುವ ಬೆನ್ನಲ್ಲೇ ಮೂರನೇ ಅಲೆ ಆತಂಕವೂ ಇರುವುದರಿಂದ ಅದನ್ನು ಎದುರಿಸಲು ಸರಕಾರ ಸಜ್ಜಾಗಬೇಕಾಗಿದೆ. ಮಸೂದೆಗಳು ಸೇರಿದಂತೆ ಮಹತ್ವದ ವಿಚಾರಗಳ ಬಗ್ಗೆ ಉಭಯ ಸದನಗಳಲ್ಲಿ ಉಪಯುಕ್ತ ಚರ್ಚೆ ನಡೆಯಬೇಕಾಗಿದೆ. ಈ ಅಧಿವೇಶನದಲ್ಲಿ ಕೊನೆಗಳಿಗೆಯಲ್ಲಿ ಮಸೂದೆ ಮಂಡನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದಿಟ್ಟ ನಿಲುವು ಕೈಗೊಂಡಿದ್ದು ಸ್ವಾಗತಾರ್ಹ. ಜತೆಗೆ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಸದನದಲ್ಲಿ ಕಡ್ಡಾಯವಾಗಿ ಹಾಜ ರಾಗಲು ಸೂಚನೆ ನೀಡಿರುವುದು, ಅಧಿವೇಶನದ ಸಮಯದಲ್ಲಿ ಸಚಿವರು ಯಾವುದೇ ಕಾರ್ಯಕ್ರಮ ಹಾಕಿಕೊಳ್ಳದಂತೆ ನಿರ್ದೇಶನ ನೀಡಿರುವುದು, ಅನಿವಾರ್ಯ ಕಾರಣ ಇದ್ದರೆ ಮಾತ್ರ ಅವಕಾಶ, ಆದರೆ ನೆಪ ಹೇಳಿ ಗೈರು ಹಾಜರಾಗಲು ಅವಕಾಶ ಇಲ್ಲ. ಶಾಸಕರಿಗೂ ಇದು ಅನ್ವಯಿ ಸುತ್ತದೆ ಎಂದು ನಿಷ್ಠುರವಾಗಿಯೇ ಹೇಳಿರುವುದು, ಅಧಿಕಾರಿಗಳೂ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉತ್ತರಗಳನ್ನು ಕಾಲ ಕಾಲಕ್ಕೆ ನೀಡಬೇಕಿದೆ ಎಂಬೆಲ್ಲ ಸೂಚನೆ ನೀಡಿರುವುದು ಉತ್ತಮ ಬೆಳವಣಿಗೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇದು ಚೊಚ್ಚಲ ಅಧಿವೇಶನ ಸಹ. ರಾಜಕೀಯ ಹಾಗೂ ಆಡಳಿತದಲ್ಲಿ ಸಾಕಷ್ಟು ಅನುಭವ ಹೊಂದಿರುವ ಇವರಿಗೆ ಅಧಿವೇಶನ ಸವಾಲು ಆಗಿದೆ. ಪ್ರಸಕ್ತ ಸಂದರ್ಭದಲ್ಲಿ ಒಂದೆಡೆ ಕೊರೊನಾ ಸಂಕಷ್ಟದಿಂದ ಆರ್ಥಿಕತೆ  ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿತರಣೆ, ಅಭಿವೃದ್ಧಿ ಯೋಜನೆಗಳಿಗೆ ಹಣಕಾಸು ಹೊಂದಾಣಿಕೆ ಸೇರಿ ಹಲವು ಸಮಸ್ಯೆಗಳೂ ಇವೆ. ಇದರ ನಡುವೆಯೂ ಮುಖ್ಯಮಂತ್ರಿಯವರು ಆಡಳಿತ ಯಂತ್ರ ಚುರುಕುಗೊಳಿಸಲು ಹಲವು ಬಿಗಿ ಕ್ರಮಗಳನ್ನು ಕೈಗೊಂಡು ಜನರಲ್ಲಿ ವಿಶ್ವಾಸ ಮೂಡಿಸಿದ್ದಾರೆ.

ಈ ಅಧಿವೇಶಆನದಲ್ಲಿ ಉತ್ತಮವಾಗಿ ಚರ್ಚೆಯಲ್ಲಿ ಪಾಲ್ಗೊಂಡ ಶಾಸಕರೊಬ್ಬರಿಗೆ ಬೆಸ್ಟ್‌ ಶಾಸಕ ಎಂಬ ಪ್ರಶಸ್ತಿ ನೀಡಲು ಸ್ಪೀಕರ್‌ ಮುಂದಾಗಿದ್ದಾರೆ. ಹೀಗಾಗಿ ಯಾವ ಶಾಸಕರು ಸದನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಈ ಪ್ರಶಸ್ತಿ ಪಡೆಯುತ್ತಾರೋ ಎಂಬುದನ್ನು ಕಾದು ನೋಡಬೇಕಾಗಿದೆ. ವಿಧಾನ ಮಂಡಲ ಅಧಿವೇಶನದ ಬಗ್ಗೆ ಜನತೆಯೂ ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ರೈತರು, ವಿದ್ಯಾರ್ಥಿ ಸಮುದಾಯ, ಕಾರ್ಮಿಕ ವರ್ಗ ಸೇರಿದಂತೆ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾವಗೊಂಡು ಪರಿಹಾರ ದೊರಕುವ ಆಶಾಭಾವನೆ ಹೊಂದಿದ್ದಾರೆ. ಹೀಗಾಗಿ ಅಧಿವೇಶನದಲ್ಲಿ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಆಗಬೇಕು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.