![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 13, 2021, 12:42 PM IST
ಶುಭಾ ಪೂಂಜಾ”ಅಂಬುಜಾ’ ಸಿನಿಮಾ ಮಾಡಲಿದ್ದಾರೆ ಎಂಬಸುದ್ದಿ ನಿಮಗೆ ಗೊತ್ತಿರಬಹುದು.ಈಗ ಆ ಚಿತ್ರದ ಫಸ್ಟ್ಲುಕ್ ಬಿಡುಗಡೆಯಾಗಿದೆ. ಚಿತ್ರದ ಕಥೆಗೆ ಪೂರಕವಾಗುವಂತೆ ಚಿತ್ರತಂಡ ಫೋಟೋಶೂಟ್ ಮಾಡಿಸಿದೆ. ಇದು ಲಂಬಾಣಿ ಕುಟುಂಬವೊಂದರ ನೈಜ ಘಟನೆಯನ್ನಿಟ್ಟುಕೊಂಡು ಮಾಡುತ್ತಿರುವ ಸಿನಿಮಾ ಇದಾಗಿರುವುದರಿಂದ ಶುಭಾ ಪೂಂಜಾ ಲಂಬಾಣಿ ಗೆಟಪ್ನಲ್ಲಿ ಕಾಣಿಸಿ ಕೊಂಡಿದ್ದಾರೆ. ಬಿಡುಗಡೆಯಾಗಿರುವ ಫಸ್ಟ್ಲುಕ್ ಸ್ಟಿಲ್ ಸಾಕಷ್ಟು ಕಥೆಗಳನ್ನು ಹೇಳುತ್ತಿದೆ
ಕಾಶೀನಾಥ್ ಡಿ ಮಡಿವಾಳ್ “ಅಂಬುಜಾ’ ಎಂಬ ಸಿನಿಮಾ ಮೂಲಕ ನಿರ್ಮಾಪಕ ರಾಗುತ್ತಿದ್ದಾರೆ. ಕೇವಲ ನಿರ್ಮಾಪಕರಷ್ಟೇ ಅಲ್ಲ, ಕಥೆ, ಸಾಹಿತ್ಯ ಕೂಡಾ ಇವರದೇ. ಶ್ರೀನಿ ಹನುಮಂತರಾಜುಈ ಚಿತ್ರದ ನಿರ್ದೇಶಕರು.ಈ ಹಿಂದೆ “ಕೆಲವು ದಿನಗಳ ನಂತರ’ ಎಂಬ ಸಿನಿಮಾ ಮಾಡಿದ್ದ ನಿರ್ದೇಶಕನ ಜೊತೆ ಸೇರಿ ಈಗ “ಅಂಬುಜಾ’ ಮಾಡುತ್ತಿದ್ದಾರೆ.
ಇದನ್ನೂ ಓದಿ:ಮತ್ತೆ ವರ್ಕೌಟ್ ಮೂಡ್ ಗೆ ಸುದೀಪ್
“ಅಂಬುಜಾ ನಾನೇಬರೆದ ಕಥೆ. ಲಂಬಾಣಿ ಕುಟುಂಬದಲ್ಲಿ ನಡೆದ ನೈಜ ಘಟನೆಯನ್ನಿಟ್ಟುಕೊಂಡು ಸಿನಿಮಾ ಮಾಡುತ್ತಿದ್ದೇನೆ. ಕಥೆ ಕೇಳಿ ಶ್ರೀನಿಯವರು ಖುಷಿಯಾದರು. ಯಾವುದೇ ಬದಲಾವಣೆ ಮಾಡದೇ, ಅದಕ್ಕೆ ಚಿತ್ರಕತೆ, ಸಂಭಾಷಣೆ ರಚಿಸಿದರು. ಸಾಹಿತ್ಯದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರು. ಇದು ಪಕ್ಕಾ ಕಮರ್ಷಿಯಲ್ ಸಿನಿಮಾ. ಆದರೆ, ಯಾವುದೇ ಅಶ್ಲೀಲತೆ ಇಲ್ಲದೇ ಮನೆ ಮಂದಿಯೆಲ್ಲಾ ಕುಳಿತು ನೋಡುವ ಸಿನಿಮಾ. ನನಗೆ ಮೊದಲ ಸಿನಿಮಾದಲ್ಲೇ ವಿಶ್ವಾಸ ಮೂಡಿದೆ, ಇದೊಂದು ಒಳ್ಳೆಯ ಸಿನಿಮಾವಾಗುತ್ತದೆ ಎಂದು. ಮುಂದಿನ ದಿನಗಳಲ್ಲಿ ಮತ್ತಷ್ಟು ಸಿನಿವ ಮಾಡುವ ಕನಸಿದೆ’ ಎನ್ನುತ್ತಾರೆ ನಿರ್ಮಾಪಕ ಕಾಶೀನಾಥ್.
ಫಸ್ಟ್ಲುಕ್ಬಗ್ಗೆ ಮಾತನಾಡುವ ನಿರ್ದೇಶಕ ಶ್ರೀನಿ “ಫೋಟೋಶೂಟ್ಗಾಗಿಯೇಈ ಕಾಸ್ಟ್ಯೂಮ್ ಅನ್ನು ರೆಡಿ ಮಾಡಿಸಿದ್ದು, ಸುಮಾರು 20 ಕೆಜಿ ಭಾರವಿದೆ’ ಎನ್ನುತ್ತಾರೆ.
ಚಿತ್ರದಲ್ಲಿ ಶುಭಾ ಪೂಂಜಾ, ಪದ್ಮಜಾ ರಾವ್, ಕಾಮಿಡಿಕಿಲಾಡಿ ಗೋವಿಂದೇಗೌಡ, ಕಾಮಿಡಿ ಕಿಲಾಡಿ ನಿರ್ದೇಶಕ ಶರಣಯ್ಯ, ಪ್ರಿಯಾಂಕ ಕಾಮತ್, ಸಂದೇಶ್ ಶೆಟ್ಟಿ ಅಜ್ರಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಬೆಂಗಳೂರು, ಗದಗ, ಉಡುಪಿ ಸುತ್ತಮುತ್ತ ಚಿತ್ರೀಕರಣ ನಡೆಸಲು ಸಜ್ಜಾಗಿದೆ. ಈಗಾಗಲೇ ಹಾಡುಗಳ ಧ್ವನಿ ಮುದ್ರಣ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಚಿತ್ರೀಕರಣಕ್ಕೆ ತೆರಳಲು ಸಿದ್ಧವಾಗಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.