NEET ಪರೀಕ್ಷೆ…ಮಗಳ ಭವಿಷ್ಯಕ್ಕಾಗಿ ತಂದೆಯ ಕೊನೆ ಪ್ರಯತ್ನ:ಮಧ್ಯರಾತ್ರಿ ನಡೆದ ಕೋರ್ಟ್ ವಿಚಾರಣೆ

ತಂದೆ, ಮಗಳು ಎಲ್ಲಾ ಭರವಸೆಗಳನ್ನು ಕಳೆದುಕೊಂಡು ಹತಾಶರಾಗಿ ಕುಳಿತುಕೊಂಡಿದ್ದರು.

ನಾಗೇಂದ್ರ ತ್ರಾಸಿ, Sep 14, 2021, 1:39 PM IST

NEET ಪರೀಕ್ಷೆ…ಮಗಳ ಭವಿಷ್ಯಕ್ಕಾಗಿ ತಂದೆಯ ಕೊನೆ ಪ್ರಯತ್ನ:ಮಧ್ಯರಾತ್ರಿ ನಡೆದ ಕೋರ್ಟ್ ವಿಚಾರಣೆ

ನವದೆಹಲಿ: ಒಂದು ಚಿಕ್ಕ ತಾಂತ್ರಿಕ ದೋಷದಿಂದ ಭವಿಷ್ಯವೇ ಹಾಳಾಗುವ ಪ್ರಸಂಗ ನಡೆಯುತ್ತಿರುವುದನ್ನು ಓದಿರುತ್ತೀರಿ. ಇಲ್ಲೊಂದು ಅಂತಹ ಘಟನೆ ನಡೆದಿದ್ದು, ಕೊನೆ ಗಳಿಗೆಯಲ್ಲಿ ಕೋರ್ಟ್ ನಲ್ಲಿ ವಿದ್ಯಾರ್ಥಿನಿಯ ಭವಿಷ್ಯ ಉಳಿದ ಅಪರೂಪದ ಪ್ರಸಂಗ ನಡೆದಿದೆ.

ಏನಿದು ಪ್ರಕರಣ:

ಲಾರಿ ಚಾಲಕರೊಬ್ಬರ ಮಗಳು ಎಂಬಿಬಿಎಸ್ ಮಾಡಬೇಕೆಂಬ ಅದಮ್ಯ ಕನಸು ಕಂಡಿದ್ದಳು. ಈಕೆ ಕಲಿಯುವಿಕೆಯಲ್ಲಿ ತುಂಬಾ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು, ವಿದ್ಯಾಭ್ಯಾಸದಲ್ಲಿ ಟಾಪರ್ ಆಗಿದ್ದಳು, ಆದರೆ ಮೆಡಿಕಲ್ ಪ್ರವೇಶ ಪರೀಕ್ಷೆಯ ಹಾಲ್ ಟಿಕೆಟ್ ನಲ್ಲಿನ ತಾಂತ್ರಿಕ ದೋಷದಿಂದಾಗಿ ಆಕೆಯ ಕನಸು ನುಚ್ಚು ನೂರಾಗುವುದರಲ್ಲಿತ್ತು.!

ತಮಿಳುನಾಡಿನ ಮದುರೈ ನಿವಾಸಿ ವಿ.ಷಣ್ಮುಗಪ್ರಿಯ ಎಂಬ ವಿದ್ಯಾರ್ಥಿನಿ ನೀಟ್ ಪರೀಕ್ಷೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಳು. ಶನಿವಾರ ತಂದೆ ಜತೆ ಸಮೀಪದ ಬ್ರೌಸಿಂಗ್ ಸೆಂಟರ್ ಗೆ ಆಗಮಿಸಿ ಹಾಲ್ ಟಿಕೆಟ್ ಅನ್ನು ಡೌನ್ ಲೋಡ್ ಮಾಡಿಕೊಂಡಿದ್ದಳು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ಉತ್ತೀರ್ಣಳಾಗಿದ್ದ, ಈಕೆ ಮೆಡಿಕಲ್ ಪ್ರವೇಶ ಪರೀಕ್ಷೆಗೆ ಹಾಜರಾಗಲು ತೀರ್ಮಾನಿಸಿದ್ದಳು.

ಹಾಲ್ ಟಿಕೆಟ್ ಡೌನ್ ಲೋಡ್ ಮಾಡಿದ ನಂತರ ತಂದೆ, ಮಗಳು ಬೆಚ್ಚಿಬಿದ್ದಿದ್ದರು. ಅದಕ್ಕೆ ಕಾರಣ ಹಾಲ್ ಟಿಕೆಟ್ ನಲ್ಲಿ ಈಕೆಯ ಬದಲು ಬೇರೊಬ್ಬರ ಫೋಟೊ ಮತ್ತು ಸಹಿ ಇತ್ತು. ಆದರೆ ಆಕೆಯ ಮನೆಯ ವಿಳಾಸ, ಹೆಸರು, ರೋಲ್ ನಂಬರ್, ತಂದೆಯ ಹೆಸರು ಈಕೆಯದ್ದೇ ಆಗಿತ್ತು!

ತಾಂತ್ರಿಕ ದೋಷದ ಯಡವಟ್ಟಿನಿಂದಾಗಿ ಕಂಗಾಲಾದ ವಿದ್ಯಾರ್ಥಿನಿ ಮತ್ತು ಪೋಷಕರು ಹಾಲ್ ಟಿಕೆಟ್ ವಿತರಿಸುವ ರಾಷ್ಟ್ರೀಯ ಪರೀಕ್ಷಾ ಕೇಂದ್ರವನ್ನು ಇ-ಮೇಲ್ ಹಾಗೂ ದೂರವಾಣಿ ಕರೆ ಮಾಡುವ ಮೂಲಕ ಪ್ರಯತ್ನಿಸಿದರೂ ಯಾವುದೇ ಫಲ ನೀಡಿರಲಿಲ್ಲವಾಗಿತ್ತು. ಎಲ್ಲಾ ಪ್ರಯತ್ನಗಳು ವಿಫಲವಾದಾಗ ತಂದೆ, ಮಗಳು ಎಲ್ಲಾ ಭರವಸೆಗಳನ್ನು ಕಳೆದುಕೊಂಡು ಹತಾಶರಾಗಿ ಕುಳಿತುಕೊಂಡಿದ್ದರು.

ಏತನ್ಮಧ್ಯೆ ಕೊನೆಯ ಪ್ರಯತ್ನ ಎಂಬಂತೆ ಶನಿವಾರ ಸಂಜೆ 5ಗಂಟೆಗೆ ವಿದ್ಯಾರ್ಥಿನಿಯ ತಂದೆ ಮದುರೈ ಮೂಲದ ವಕೀಲರೊಬ್ಬರನ್ನು ಭೇಟಿಯಾಗಿ, ಆದಷ್ಟು ಶೀಘ್ರವಾಗಿ ಮದುರೈ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲು ಸಾಧ್ಯವೇ ಎಂದು ವಿಚಾರಿಸಿದ್ದರು.

ತರಾತುರಿಯಲ್ಲೇ ಹಾಲ್ ಟಿಕೆಟ್ ನಲ್ಲಾದ ತಾಂತ್ರಿಕ ದೋಷದ ಕುರಿತ ದೂರನ್ನು ಸಂಜೆ 6ಗಂಟೆಗೆ ಮದ್ರಾಸ್ ಹೈಕೋರ್ಟ್ ಪೀಠಕ್ಕೆ ಸಲ್ಲಿಸಿದ್ದರು. 7 ಗಂಟೆಗೆ ಅರ್ಜಿಯ ಕ್ಷಿಪ್ರ ವಿಚಾರಣೆ ನಡೆಸಲು ಅನುಮತಿ ನೀಡಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದರು. ಮುಂದಿನ ಎರಡು ಗಂಟೆ ಅವಧಿಯೊಳಗೆ ಕೋರ್ಟ್ ನ ಸಿಬಂದಿಗಳು, ಅಧಿಕಾರಿಗಳು ಹಾಜರಾಗಿದ್ದರು. ರಾತ್ರಿ 9.15ರಿಂದ 10-30ರವರೆಗೆ ಜಸ್ಟೀಸ್ ಸುರೇಶ್ ಕುಮಾರ್ ಅರ್ಜಿಯ ವಿಚಾರಣೆ ನಡೆಸಿದ್ದರು.

ಹಾಲ್ ಟಿಕೆಟ್ ಕುರಿತ ಅರ್ಜಿಯ ವಿಚಾರಣೆ ನಡೆಸಿ ಆದೇಶ ನೀಡಿದ್ದ ಪ್ರತಿ ರಾತ್ರಿ 11ಗಂಟೆಗೆ ಲಭ್ಯವಾಗಿತ್ತು. ಮಗಳ ಭವಿಷ್ಯ ಏನಾಗುತ್ತೋ ಎಂದು  ಉಸಿರು ಬಿಗಿ ಹಿಡಿದು ತಂದೆ ಕೋರ್ಟ್ ಹೊರಗೆ ಕಾಯುತ್ತಿದ್ದು, ಮಧ್ಯರಾತ್ರಿ ಕೋರ್ಟ್ ಆದೇಶದ ಅಂತಿಮ ಪ್ರತಿ ಸಿಕ್ಕಿತ್ತು. ಅಂತಿಮವಾಗಿ ಕೋರ್ಟ್ ಆದೇಶ, ವಕೀಲರ ಮಧ್ಯಪ್ರವೇಶದಿಂದ ವಿದ್ಯಾರ್ಥಿನಿಗೆ ಪರೀಕ್ಷಾ ಕೊಠಡಿ ಪ್ರವೇಶಕ್ಕೆ ಅನುಮತಿ ದೊರಕಿದ್ದು, ಭಾನುವಾರ ನೀಟ್ ಪರೀಕ್ಷೆ ಬರೆಯುವ ಮೂಲಕ ತನ್ನ ಕನಸನ್ನು ನನಸು ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ಕೋರ್ಟ್ ಆದೇಶದಲ್ಲಿ ಏನಿತ್ತು?

ವಿದ್ಯಾರ್ಥಿನಿಯ ಹಾಲ್ ಟಿಕೆಟ್ ನಂಬರ್, ಅಪ್ಲಿಕೇಶನ್ ನಂಬರ್ ಎಲ್ಲವೂ ಸಮರ್ಪಕವಾಗಿದೆ. ಈ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಕೋರ್ಟ್ ಆದೇಶ ಹೊರಡಿಸಿತ್ತು. ಈಕೆ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಾಳೆ, ಎಸ್ಸೆಸ್ಸೆಲ್ಸಿಯಲ್ಲಿ ಶೇ.92.8ರಷ್ಟು, ದ್ವಿತೀಯ ಪಿಯುಸಿಯಲ್ಲಿ ಶೇ.91.54ರಷ್ಟು ಅಂಕವನ್ನು ಪಡೆದಿದ್ದಾಳೆ. ಪ್ರಸಕ್ತ ಸಾಲಿನ ಪರೀಕ್ಷೆ ಬರೆಯುವ ಹಕ್ಕನ್ನು ಕಸಿದುಕೊಳ್ಳುವ ಮೂಲಕ ಆಕೆಯ ವಿದ್ಯಾಭ್ಯಾಸದ ಭವಿಷ್ಯವನ್ನು ಮೊಟಕುಗೊಳಿಸಬೇಡಿ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿತ್ತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.