ತಾಲೂಕು ಕೇಂದ್ರಗಳಲ್ಲೂ ನಿಲ್ಲದ ಕಾರವಾರ ಎಕ್ಸ್‌ಪ್ರೆಸ್‌

ಕುಕ್ಕೆ, ಧರ್ಮಸ್ಥಳ, ಮಂಗಳೂರಿಗೆ ತೆರಳುವ ರೈಲು ; ರೈಲು ಇಲ್ಲದೇ ಗ್ರಾಮೀಣ ಭಾಗದ ಜನರಿಗೆ ಸಮಸ್ಯೆ

Team Udayavani, Sep 15, 2021, 4:50 PM IST

ತಾಲೂಕು ಕೇಂದ್ರಗಳಲ್ಲೂ ನಿಲ್ಲದ ಕಾರವಾರ ಎಕ್ಸ್‌ಪ್ರೆಸ್‌

ಕುದೂರು: ರೈಲ್ವೆ ನಿಲ್ದಾಣವಿದ್ದರೂ ಎಕ್ಸ್‌ಪ್ರೆಸ್‌ ರೈಲುಗಳು ಕನಿಷ್ಠ ತಾಲೂಕು ಕೇಂದ್ರಗಳಲ್ಲಿಯೂ ನಿಲ್ಲದೆ ಓಡಾಡುತ್ತಿರುವುದರಿಂದ ಈ ಭಾಗದ ಮೂರು ತಾಲೂಕಿನ ಜನರಿಗೆ ತೀವ್ರ ಸಮಸ್ಯೆಯಾಗಿದೆ.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ನಿತ್ಯ ರಾತ್ರಿ ಹೊರಡುವ ಬೆಂಗಳೂರು ಕಾರಾವಾರ ಎಕ್ಸ್‌ಪ್ರೆಸ್‌ ಹೋಬಳಿ ಕೇಂದ್ರಗಳಲ್ಲಿ ನಿಲ್ಲಿಸುವುದಿರಲಿ ತಾಲೂಕು ಕೇಂದ್ರಗಳಲ್ಲಿಯೂ ನಿಲ್ಲುತ್ತಿಲ್ಲ.

ಯಾರಿಗೆಲ್ಲ ಸಮಸ್ಯೆ: ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳ ಹಾಗೂ ಮಂಗಳೂರಿಗೆ ತೆರಳುವ ಪ್ರಯಾಣಿಕರು ಹೆಚ್ಚಾಗಿ ಕಾರವಾರ ರೈಲನ್ನೇ ನಂಬಿಕೊಂಡಿದ್ದಾರೆ. ಪ್ರತಿನಿತ್ಯ ಬೆಂಗಳೂರಿನಿಂದ ರಾತ್ರಿ ಹೊರಡುವ ಕಾರವಾರ ಎಕ್ಸ್‌ಪ್ರೆಸ್‌ ಬೆಂ. ಗ್ರಾಂ.ಜಿಲ್ಲೆ ನೆಲಮಂಗಲ, ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು, ತಿಪ್ಪಸಂದ್ರ, ತುಮಕೂರು ಗ್ರಾಂ. ಕುಣಿಗಲ್‌, ಮಂಡ್ಯ ಜಿಲ್ಲೆಯ ನಾಗಮಂಗಲ
ತಾಲೂಕಿನ ಮೇಲೆ ಸಂಚರಿಸುತ್ತದೆ.

ಈ 4 ತಾಲೂಕುಗಳ ಪೈಕಿ ನೆಲಮಂಗಲ, ಸೋಲೂರು, ತಿಪ್ಪಸಂದ್ರ, ಕುಣಿಗಲ್‌, ಯಡಿಯೂರು, ಹಿರಿಸಾವೆ, ಹಾಗೂ ಬಿ.ಜಿ.ನಗರ ಭಾಗಗಳಲ್ಲಿ ರೈಲ್ವೆ ನಿಲ್ದಾಣವಿದ್ದರೂ ಸ್ಟಾಪ್‌ ನೀಡುತ್ತಿಲ್ಲ.

ಇದನ್ನೂ ಓದಿ:ಬಾಲಿವುಡ್‍ಗೆ ಬಸ್ರೂರ್ : ‍‘ಗರುಡ’ ಚಿತ್ರಕ್ಕೆ ರವಿ ಸಂಗೀತ

ಕುಣಿಗಲ್‌ನಲ್ಲೂ ರೈಲು ನಿಲ್ಲಲ್ಲ; ಕನಿಷ್ಠ ಪಕ್ಷ ತಾಲೂಕು ಕೇಂದ್ರ ಕುಣಿಗಲ್‌ ರೈಲ್ವೆ ನಿಲ್ದಾಣದಲ್ಲಿಯೂ ಕಾರವಾರ ಎಕ್ಸ್‌ಪ್ರೆಸ್‌ ನಿಲ್ಲುತ್ತಿಲ್ಲ. ಹೀಗಾಗಿ ಪ್ರಯಾಣಿಕರು ತಮ್ಮ ಸ್ಥಳೀಯ ರೈಲ್ವೆ ನಿಲ್ದಾಣದಲ್ಲಿ ಟಿಕೆಟ್‌ ಮಾಡಿಸಿಕೊಂಡು ಶ್ರವಣಬೆಳಗೋಳ ಸಮಿಪದ ಚನ್ನರಾಯಪಟ್ಟಣ ರೈಲ್ವೆ ನಿಲ್ದಾಣ ಕ್ಕೆ ಹೋಗಿ ಟ್ರೈನ್‌ ಹತ್ತಬೇಕಾದ ಪರಿಸ್ಥಿತಿ ಬಂದಿದೆ. ಮತ್ತೆ ಕಾರವಾದಿಂದ ಬೆಂಗಳೂರಿಗೆ ಬರಬೇಕಾದರೂ ಅಲ್ಲಿಂದ ವಾಪಾಸ್ಸಾಗುವ ಪ್ರಯಾಣಿ ಕರು ಚನ್ನರಾಯಪಟ್ಟಣದಲ್ಲೇ ಇಳಿದು ತಮ್ಮ ಊರುಗಳಿಗೆ ಪ್ರಯಾಣಿಸಬೇಕಿದೆ. ರಾಜ್ಯ ಸಾರಿಗೆಯಲ್ಲಿ ಇಂತಹ ಸಮಸ್ಯೆ ಇದ್ದರೆ ಬೇಗನೆ ದೂರು ನೀಡಬಹುದಿತ್ತು. ಆದರೆ ರೈಲು ನಿಲ್ಲಿಸಲು ಎಲ್ಲಿ ಯಾರಿಗೆ ದೂರು ನೀಡಬೇಕು? ಎಂಬುದೇ ಪ್ರಯಾಣಕರಿಗೆ ತೋಚದೆ ರೈಲ್ವೆ ಇಲಾಖೆ ವ್ಯವಸ್ಥೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ತಾಲೂಕು ಕೇಂದ್ರಗಳಲ್ಲಿ ಕನಿಷ್ಠ ಎರಡು ನಿಮಿಷ ಕಾರಾವಾರ ‌ರೈಲು ನಿಲುಗಡೆ ಮಾಡಿದರೆ ಬಹಳ ಜನರಿಗೆ ಅನುಕೂಲವಾಗುವುದು. ಭಾರತೀಯ ರೈಲ್ವೆ ಅವೈಜ್ಞಾನಿಕವಾಗಿ ರೈಲು ನಿಲುಗಡೆ ಪ್ರಕಟಿಸಿರುವುದು ಸ್ಥಳೀಯರಿಗೆ ಬೇಸರವಾಗಿದೆ.
– ಪದ್ಮನಾಬ್‌, ರೈಲ್ವೆ ಪ್ರಯಾಣಿಕ

ಬೆಂಗಳೂರು-ಕಾರವಾರ ಎಕ್ಸ್‌ಪ್ರೆಸ್‌ ನಿಲುಗಡೆ ಬಗ್ಗೆ ನಮ್ಮ ಇಲಾಖೆಯ ಕಳೆಹಂತದ ಅಧಿಕಾರಿಗಳಿಗೆ ವರದಿ ನೀಡಲು ಸೂಚಿಸಿದ್ದೇನೆ. ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು.
– ಸಂಜೀವ್‌ ಕಿಶೋರ್‌, ಮುಖ್ಯಸ್ಥರು,
ನೈರುತ್ಯ ರೈಲ್ವೆ ವಿಭಾಗ ಹುಬ್ಬಳ್ಳಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.