ಭತ್ತ ಖರೀದಿ ಕೇಂದ್ರ ತೆರೆಯಲು ಸೂಚನೆ : ಉಡುಪಿಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ


Team Udayavani, Sep 18, 2021, 6:30 AM IST

ಭತ್ತ ಖರೀದಿ ಕೇಂದ್ರ ತೆರೆಯಲು ಸೂಚನೆ : ಉಡುಪಿಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ

ಕೋಟ/ ಕಾರ್ಕಳ: ಭತ್ತಕ್ಕೆ ಕೇಂದ್ರ ಸರಕಾರ ಬೆಂಬಲ ಬೆಲೆಯನ್ನು ನಿಗದಿಪಡಿಸುತ್ತದೆ. ಆದರೆ ಶೀಘ್ರ ಖರೀದಿ ಕೇಂದ್ರವನ್ನು ಸ್ಥಾಪಿಸಿ ರೈತರಿಂದ ಭತ್ತ ಖರೀದಿ ಮಾಡಬೇಕಾದದ್ದು ರಾಜ್ಯ ಸರಕಾರ. ಉಡುಪಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಕೇಂದ್ರ ವಿಳಂಬವಾಗಿ ಆರಂಭವಾಗುವುದರಿಂದ ರೈತರಿಗೆ ಸಮಸ್ಯೆಯಾಗುತ್ತಿದೆ ಎನ್ನುವ ದೂರುಗಳು ಕೇಳಿ ಬರುತ್ತಿದ್ದು, ಈ ಬಾರಿ ಶೀಘ್ರವಾಗಿ ತೆರೆಯುವಂತೆ ರಾಜ್ಯ ಕೃಷಿ ಸಚಿವರಿಗೆ ತತ್‌ಕ್ಷಣ ಸೂಚನೆ ನೀಡುತ್ತೇನೆ ಎಂದು ಕೇಂದ್ರ ಕೃಷಿ ಖಾತೆಯ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಖರೀದಿ ಕೇಂದ್ರ ಆರಂಭಿಸಿದರೆ ಮಧ್ಯವರ್ತಿಗಳ ಸಮಸ್ಯೆ ಸ್ವಲ್ಪ ಮಟ್ಟಿಗೆ ಪರಿಹಾರವಾಗಲಿದೆ ಎಂದರು.

ರೈತ ಸಂಘದಿಂದ ಮನವಿ
ಬೆಂಬಲ ಬೆಲೆಗಿಂತ ಕಡಿಮೆಗೆ ಭತ್ತವನ್ನು ಯಾರೂ ಖರೀದಿಸದಂತೆ ಸರಕಾರ ಅಧ್ಯಾದೇಶ ಹೊರಡಿಸಬೇಕು. ರಸಗೊಬ್ಬರದ ದರ ಕಡಿತಗೊಳಿಸಬೇಕು, ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಯಂತ್ರಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಕೋಟ ರೈತಧ್ವನಿ ಸಂಘಟನೆ ವತಿಯಿಂದ ಈ ಸಂದರ್ಭ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಅಡಿಕೆಯಲ್ಲಿ ವಿಷಾಂಶ ಇಲ್ಲ:
ಮನವರಿಕೆಗೆ ವಕೀಲರ ನೇಮಕ ಅಡಿಕೆಯಲ್ಲಿ ವಿಷಕಾರಿ ಅಂಶ ಇಲ್ಲ ಎನ್ನುವುದನ್ನು ಸುಪ್ರಿಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಲು ಸೂಕ್ತ ವಕೀಲರನ್ನು ನೇಮಿಸುವ ಬಗ್ಗೆ ಪ್ರಧಾನಿಯವರ ಜತೆ ಚರ್ಚಿಸಿದ್ದು, ಪ್ರಧಾನಿ ಸ್ಪಂದಿಸಿ ಸೂಚನೆ ನೀಡಿದ್ದಾರೆ. ಶೀಘ್ರವೇ ಅನುಭವಿ ವಕೀಲರ ನೇಮಕವಾಗಲಿದೆ. ಅಡಿಕೆ ಅಭಿವೃದ್ಧಿ ಮಂಡಳಿ ರಚನೆಗಾಗಿ ಕೃಷಿಕರು ಬೇಡಿಕೆ ಸಲ್ಲಿಸಿದ್ದಾರೆ. ಆದರೆ ಕೇಂದ್ರ ಸರಕಾರ ಸದ್ಯ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ. ಮುಂದೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕಾರ್ಕಳದಲ್ಲಿ ಶುಕ್ರವಾರ ರೈತರೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ, ರೈತರ ಅಹವಾಲು ಆಲಿಸಿ ಅವರು ಮಾತನಾಡಿದರು. ಅನ್ಯ ದೇಶಗಳಿಂದ ಅಕ್ರಮವಾಗಿ ಅಡಿಕೆ ಆಮದಾಗುವುದನ್ನು ತಡೆದ ಕಾರಣ ಇಂದು ಅಡಿಕೆಗೆ ಉತ್ತಮ ಧಾರಣೆ ಇದೆ. ಮ್ಯಾನ್ಮಾರ್‌, ಬಾಂಗ್ಲಾ, ನೇಪಾಲಗಳಿಂದ ಅಡಿಕೆ ಅಕ್ರಮ ಆಮದಿಗೆ ಕಡಿವಾಣ ಹಾಕಿದ್ದೇವೆ ಎಂದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.