![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 18, 2021, 10:20 AM IST
ಮುಂಬೈ: ಭಾರತದ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿರುವ ರವಿ ಶಾಸ್ತ್ರಿ ಅವರ ಅಧಿಕಾರದ ಮುಗಿಯುವ ಸಮಯವಾಗಿದೆ. ಮುಂದಿನ ಟಿ20 ವಿಶ್ವಕಪ್ ಬಳಿಕ ರವಿ ಶಾಸ್ತ್ರಿ ಅವರ ಕೋಚ್ ಅಧಿಕಾರ ಮುಗಿಯಲಿದೆ. ಹೀಗಾಗಿ ಬಿಸಿಸಿಐ ಹೊಸ ಕೋಚ್ ಗಾಗಿ ಶೋಧ ಕಾರ್ಯ ಆರಂಭಿಸಿದೆ.
ಹಲವರ ಹೆಸರುಗಳು ಈಗಾಗಲೇ ಮುಖ್ಯ ಕೋಚ್ ಹುದ್ದೆಗೆ ಕೇಳಿ ಬರುತ್ತಿದೆ. ಮೂಲಗಳ ಪ್ರಮುಖ ಮಾಜಿ ಆಟಗಾರರಾದ ಅನಿಲ್ ಕುಂಬ್ಳೆ ಮತ್ತು ವಿವಿಎಸ್ ಲಕ್ಷ್ಮಣ್ ಹೆಸರು ಪ್ರಮುಖವಾಗಿದೆ.
ಅದರಲ್ಲೂ ಅನಿಲ್ ಕುಂಬ್ಳೆ ಅವರ ಹೆಸರು ಹೆಚ್ಚು ಕೇಳಿಬರುತ್ತಿದೆ. ಅನಿಲ್ ಕುಂಬ್ಳೆ ಆಯ್ಕೆಗೆ ಬಿಸಿಸಿಐ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಎಲ್ಲರ ಒಪ್ಪಿಗೆ ದೊರೆತಿದೆ. ಹೀಗಾಗಿ ಬಿಸಿಸಿಐ ತನ್ನ ಪ್ರಸ್ತಾವನೆಯನ್ನು ಅನಿಲ್ ಕುಂಬ್ಳೆಯವರಿಗೆ ಕಳುಹಿಸಿಕೊಟ್ಟಿದೆ ಎನ್ನಲಾಗಿದೆ.
ಇದನ್ನೂ ಓದಿ:ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ
2016-17 ರ ನಡುವೆ ಒಂದು ವರ್ಷದ ಕಾಲ ಕುಂಬ್ಳೆ ಅವರು ಭಾರತೀಯ ತಂಡದ ಕೋಚ್ ಆಗಿದ್ದರು. ಆದರೆ ಚಾಂಪಿಯನ್ಸ್ ಟ್ರೋಫಿ ಫೈನಲ್ ಸೋಲಿನ ನಂತರ ನಾಯಕ ವಿರಾಟ್ ಕೊಹ್ಲಿಯೊಂದಿಗಿನ ವೈಮನಸ್ಸು ಕುಂಬ್ಳೆ ಅವರ ರಾಜೀನಾಮೆಗೆ ಕಾರಣವಾಗಿತ್ತು. ಕೊಹ್ಲಿಯ ಒತ್ತಡದ ಕಾರಣಕ್ಕೆ ಮತ್ತು ಕುಂಬ್ಳೆಯವರನ್ನು ಹುದ್ದೆಯಿಂದ ತೆಗೆದುಹಾಕಿದ ರೀತಿಯು ಸರಿಯಾದ ನಡೆಯಾಗಿರಲಿಲ್ಲ. ಹೀಗಾಗಿ ಬಿಸಿಸಿಐ ಮತ್ತೆ ಕುಂಬ್ಳೆ ಕಡೆಗೆ ಒಲವು ತೋರಿದೆ. ಆದಾಗ್ಯೂ ಇದು ಕುಂಬ್ಳೆ ಅಥವಾ ಲಕ್ಷ್ಮಣ್ ಅವರು ಕೆಲಸಕ್ಕೆ ಅರ್ಜಿ ಸಲ್ಲಿಸಲು ಸಿದ್ಧರಿದ್ದಾರೆಯೇ ಎಂಬುದರ ಮೇಲೆ ಅವಲಂಬಿತವಾಗಿದೆ ಎಂದು ಬಿಸಿಸಿಐನ ಹಿರಿಯ ಮೂಲಗಳು ತಿಳಿಸಿದೆ.
ಭಾರತೀಯ ಕೋಚ್ ನನ್ನೇ ಆಯ್ಕೆ ಮಾಡುವುದು ಬಿಸಿಸಿಐನ ಮೊದಲ ಗುರಿಯಾಗಿದೆ. ವಿದೇಶಿ ಕೋಚ್ ಎರಡನೇ ಆಯ್ಕೆಯಾಗಿದೆ. ಬಿಸಿಸಿಐನ ಕೋಚ್ ಕೆಲಸಕ್ಕೆ ಮಾನದಂಡವೆಂದರೆ ಉತ್ತಮ ಆಟಗಾರ ಮತ್ತು ತರಬೇತುದಾರ/ ಮಾರ್ಗದರ್ಶನದ ಅನುಭವ ಹೊಂದಿರುವ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಎಂದು ಮೂಲಗಳು ತಿಳಿಸಿವೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.