ನಂಜನಗೂಡು ಮಂದಿರದಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುತ್ತೇವೆ: ಸಿಎಂ ಬೊಮ್ಮಾಯಿ


Team Udayavani, Sep 19, 2021, 12:04 PM IST

ನಂಜನಗೂಡು ಮಂದಿರದಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುತ್ತೇವೆ: ಸಿಎಂ ಬೊಮ್ಮಾಯಿ

ದಾವಣಗೆರೆ: ನಂಜನಗೂಡು ಮಂದಿರದ ಘಟನೆ ಮತ್ತೆ ಮರುಕಳಿಸದಂತೆ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.

ನಂಜನಗೂಡು ಮಂದಿರ ನೆಲಸಮವಾದ ಘಟನೆ ಎಲ್ಲರ ಮನಸ್ಸಿಗೆ ನೋವು ತಂದಿದೆ. ಅಧಿಕಾರಿಗಳು ನಮ್ಮ ಗಮನವನ್ನು ಬಾರದೆ ಮಾಡಿರುವ ಘಟನೆ ಇದಾಗಿದೆ. ಹಿಂದಿನ ತೀರ್ಪುಗಳಿವೆ. ಮಂದಿರದ ಘಟನೆ ನಡೆದ ದಿನದಿಂದ ನಾನು ನಿರಂತರ ಚರ್ಚೆ ಮಾಡಿದ್ದೇನೆ. ಶಾಂತಿ ಕದಡುವ ವಿಚಾರಗಳಿಗೆ ಪೂರ್ಣ ವಿರಾಮ‌ ನೀಡುವ ಗಟ್ಟಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಇಂತಹ ಘಟನೆ ಇದೇ ಮೊದಲಲ್ಲ, ಗುಜರಾತ್- ಮಹಾರಾಷ್ಟ್ರ ಎಲ್ಲ ಕಡೆ ಆಗಿವೆ. ನಮ್ಮ ಹಿರಿಯೂರು ಮುತ್ಸದ್ದಿತನ ತೋರಿ ಸಮಸ್ಯೆ ಬಗೆಹರಿಸಿದ್ದಾರೆ. ನಂಜನಗೂಡು ಘಟನೆ, ಕಾರ್ಯಕರ್ತರ ನಮ್ಮ ಮೇಲೆ ಹಲ್ಲೆ, ನಮ್ಮ ಜನರ ಹಕ್ಕು ಕಸಿದುಕೊಳ್ಳುವ ಪರಿಸ್ಥಿತಿ ಎಲ್ಲವನ್ನೂ ಸವಾಲಾಗಿ ಸ್ವೀಕರಿಸಿದ್ದು ಆಡಳಿತಾತ್ಮಕ, ಕಾನೂನಾತ್ಮಕ ಕ್ರಮ ತೆಗೆದುಕೊಂಡು ಘಟನೆ ಮರುಕಳಿಸದಂತೆ ನೋಡಿ ಕೊಳ್ಳುತ್ತೇವೆ. ಅಲ್ಲಿನ ಭಕ್ತರ‌ ಮನಸ್ಸಿಗೆ ಆಗಿರುವ ಘಾಸಿಯನ್ನು ಸರಿಪಡಿಸುವ ಪ್ರಯತ್ನವನ್ನು ಹಿರಿಯರ ಜೊತೆ ಚರ್ಚಿಸಿ ತೆಗೆದುಕೊಳ್ಳುತ್ತೇನೆ ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ:ರಾಜಕಾರಣಕ್ಕೂ ದರ ಏರಿಕೆಗೂ ಸಂಬಂಧ ಇಲ್ಲ: ಸಚಿವ ಈಶ್ವರಪ್ಪ

ನಿಮಗೆಲ್ಲಾ ಒಪ್ಪಿಗೆ ಆಗುವಂತೆ ನಮ್ಮ ನಿರ್ಧಾರ ಇರುತ್ತದೆ. ನಿಮ್ಮ ನೋವು ಭಾವನೆಗೆ ಸ್ಪಂದಿಸಿ, ನಿಮ್ಮ ಮನಸ್ಸಿಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ವಿನಂತಿ ಮಾಡಿದರು.

ಮೀಸಲಾತಿ ಕುರಿತು ಪರೋಕ್ಷ ಪ್ರಸ್ತಾಪ: ನಮ್ಮ ನಡುವೆ ಕೆಲ ಸೂಕ್ಷ್ಮ ವಿಚಾರಗಳಿವೆ ಎಂದು ವಿಷಯ ಪ್ರಸ್ತಾಪಿಸಿದ ಬಸವರಾಜ ಬೊಮ್ಮಾಯಿ, ಎಲ್ಲ ಸಮುದಾಯದ ಆಶೋತ್ತರ ಹೆಚ್ಚಾಗಿವೆ. ಅವರಿಗೆ ಸ್ಪಂದಿಸುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು.

ಇದಕ್ಕೆ ಕಾನೂನಾತ್ಮಕವಾಗಿ, ಸಂಘಟನಾತ್ಮಕವಾಗಿ ನಿರ್ಣಯ ತೆಗೆದುಕೊಳ್ಳುವ ಅಗತ್ಯ ಇದೆ ಎಂದು ಪರೋಕ್ಷವಾಗಿ ಮೀಸಲಾತಿ ಹೆಸರು ಹೇಳದೆ ಸಮುದಾಯದ ಆಶೋತ್ತರ ಎಂದು ಹೇಳುವ ಮೂಲಕ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು

ವಿಜಯ ಯಾತ್ರೆ ಮುಂದುವರೆಯುತ್ತದೆ: ಜಿಪಂ, ತಾಪಂ, ಉಪ ಚುನಾವಣಾ ಬಗ್ಗೆ ಚಿಂತನೆ ಮಾಡಿದ್ದೇವೆ. ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಸೊಸೈಟಿ ಚುನಾವಣೆಯನ್ನು ನಿರ್ಲಕ್ಷ್ಯ ಮಾಡುವಿದಿಲ್ಲ. ಇದೇ ಕಾರಣಕ್ಕೆ ಮೂರು ಪಾಲಿಕೆಗಳಲ್ಲಿ ಆಡಳಿತ ಹಿಡಿಯಲಿದ್ದೇವೆ. ಕಲಬುರಗಿ 24 ಸ್ಥಾನಗಳಿವೆ, ದೊಡ್ಡಬಳ್ಳಾಪುರದಲ್ಲಿ ಸಂಪೂರ್ಣ ಮೆಜಾರಿಟಿ ಬರುತ್ತೆ, ಮೈಸೂರಿನ ಮೇಯರ್‌ ಚುನಾವಣೆಯಲ್ಲಿ ಸೋಮಶೇಖರ್, ಅಲ್ಲಿನ ಸಂಸದರು ಸೇರಿದಂತೆ ಎಲ್ಲರೂ ಸೇರಿ ಬಿಜೆಪಿಯ ಮೊದಲ ಮೇಯರ್ ಆಯ್ಕೆ ಆಗುವಂತೆ ಮಾಡಿದ್ದಾರೆ ಎಂದರು.

ಇಲ್ಲಿಂದ ನಮ್ಮ ವಿಜಯಯಾತ್ರೆ ಆರಂಭವಾಗಿದೆ. ಮುಂದೆ ಬಿಬಿಎಂಪಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಮೆಜಾರಿಟಿಯಲ್ಲಿ ಬಿಜೆಪಿ ಬರುತ್ತೆ. ಬೆಂಗಳೂರಿನ ನಾಯಕರು ಇದನ್ನು ಮಾಡುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.