ಜಿಲ್ಲಾ  ಜೀವ ವೈವಿಧ್ಯಗಳ ನಿರ್ವಹಣೆ ಸಮಿತಿ ವರದಿ ಸರಕಾರಕ್ಕೆ ಸಲ್ಲಿಕೆ


Team Udayavani, Sep 23, 2021, 4:20 AM IST

Untitled-1

ಉಡುಪಿ:  ಗ್ರಾಮೀಣ ಭಾಗದ ಜೀವ ವೈವಿಧ್ಯಗಳ ರಕ್ಷಣೆ ಹಾಗೂ ನಿರ್ವಹಣೆಗೆ ದಿಟ್ಟ ಹೆಜ್ಜೆ ಇಟ್ಟಿದ್ದು, ಜಿಲ್ಲೆಯ 150 ಗ್ರಾ.ಪಂ.ಗಳಲ್ಲಿ ಜೀವವೈವಿಧ್ಯ ನಿರ್ವಹಣೆ ಸಮಿತಿಗಳು ಅಸ್ತಿತ್ವಕ್ಕೆ ಬಂದಿದ್ದು, ಈಗಾಗಲೇ ಸರ್ವೇ ಮುಗಿಸಿ ವರದಿಯನ್ನು ಸರಕಾರಕ್ಕೆ ಸಲ್ಲಿಸಿವೆ.

ಗ್ರಾಮೀಣ ಭಾಗದಲ್ಲಿನ  ಜೀವ ವೈವಿಧ್ಯವನ್ನು ಕಾಪಾಡಿ ಅದನ್ನು ಭವಿಷ್ಯದ ದೃಷ್ಟಿಯಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ 158 ಗ್ರಾ.ಪಂ., 7 ತಾ.ಪಂ.ಗಳು, 1 ಜಿ.ಪಂ.ನಲ್ಲಿ ಜೀವವೈವಿಧ್ಯ ನಿರ್ವಹಣೆ ಸಮಿತಿ ರಚನೆಯಾಗಿದ್ದು, ಸ್ಥಳೀಯ ಸಂಪನ್ಮೂಲ ಸಂರಕ್ಷಣೆ, ಇತರ ಜವಾಬ್ದಾರಿ ನಿರ್ವಹಣೆ ಅಧಿಕಾರ ಸಮಿತಿ ವ್ಯಾಪ್ತಿಯಲ್ಲಿರುತ್ತದೆ.

ಸಮಿತಿ ಪ್ರಯೋಜನ:

ಜೀವ ವೈವಿಧ್ಯ ನಿರ್ವಹಣೆ ಸಮಿತಿ ರಚನೆಯಿಂದ ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿ ಸಿಗುವ ಪ್ರಕೃತಿ ದತ್ತ ಸಂಪತ್ತುಗಳ ಅರಿವು ಸಿಗಲಿದೆ. ಕಲೆ, ಕರಕುಶಲ ವಸ್ತುಗಳ ಬಗ್ಗೆ ಬೇರೆ ಜಿಲ್ಲೆ, ರಾಜ್ಯದವರಿಗೆ ಮಾಹಿತಿ ಲಭ್ಯವಾಗಲಿದೆ. ಜತೆಗೆ ಜನರಿಗೆ ಉತ್ತಮ ಮಾರ್ಗದರ್ಶನ, ಅಧಿಕಾರ ಲಭ್ಯವಾಗಲಿದೆ. ಕೃಷಿ, ತೋಟಗಾರಿಕೆ, ಕೋಳಿ ಸಾಕಣೆ, ಹೈನುಗಾರಿಕೆ, ಪಶುಸಂಗೋಪನೆ ಸಾಂಪ್ರದಾಯಿಕ ಚಟುವಟಿಕೆಗೆ ಸಮಿತಿ ರಕ್ಷಣೆ ನೀಡಲಿದೆ.

ಸಮಿತಿ ರಚನೆಗೆ ವೇಗ!:

ಜೈವಿಕ ವೈವಿಧ್ಯ ಅಧಿನಿಯಮ 2002ರ ಸೆಕ್ಷನ್‌ 41 (1), ಜೈವಿಕ ವೈವಿಧ್ಯ ನಿಯಮಗಳು- 2005ರ ನಿಯಮ 22 ಮತ್ತು ಕರ್ನಾಟಕ ಜೈವಿಕ ವೈವಿಧ್ಯ ನಿಯಮಗಳು-2005ರ ನಿಯಮ 21ರ ಪ್ರಕಾರ ಪಂಚಾಯತ್‌ಗಳಲ್ಲಿ ಜೀವವೈವಿಧ್ಯ ನಿರ್ವಹಣೆ ಸಮಿತಿಗಳ ರಚನೆ ಕಡ್ಡಾಯವಾಗಿದೆ. ಆದರೆ ಈ ಬಗ್ಗೆ ಅಷ್ಟೊಂದು ಗಮನ ಹರಿಸಲಾಗುತ್ತಿರಲಿಲ್ಲ.

2019ರಲ್ಲಿ ರಾಷ್ಟ್ರೀಯ ಹಸುರು ನ್ಯಾಯಾಧೀಕರಣ ಪಂಚಾಯತ್‌ಗಳಲ್ಲಿ ಈ ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕೆಂದು ಆದೇಶ ನೀಡಿರುವುದು, ಸಮಿತಿ ಕೆಲಸಗಳಿಗೆ ವೇಗ ಸಿಕ್ಕಿತ್ತು. 2021ರಲ್ಲಿ ಸರ್ವೇ ಪೂರ್ಣಗೊಂಡು ಜಿಲ್ಲಾ ಸಮಿತಿ ವರದಿಯನ್ನು ರಾಜ್ಯಕ್ಕೆ ಸಲ್ಲಿಸಿದೆ.

ಸಮಿತಿ ಕೆಲಸವೇನು?  :

ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಸಮಿತಿಗಳು ತಮ್ಮ ವ್ಯಾಪ್ತಿಗೆ ಬರುವ ಅರಣ್ಯ ಭೂಮಿ, ಕೃಷಿ ಜಮೀನು, ಸಂರಕ್ಷಿತ ಅರಣ್ಯ ಪ್ರದೇಶ, ಅರಣ್ಯ ಸಂಪತ್ತು, ಗಿಡ-ಮರ, ಹುಳು-ಜಂತು, ಪ್ರಾಣಿ-ಪಕ್ಷಿ ಇವುಗಳ ವಿವಿಧ ಪ್ರಭೇದ ಮತ್ತು ತಳಿಗಳ ಮಾಹಿತಿ, ಔಷಧೀಯ ಗಿಡಮೂಲಿಕೆಗಳ ವಿವರ, ಪಾರಂಪರಿಕ ತಾಣ, ನಾಟಿ ವೈದ್ಯರು, ಗುಡಿ-ದೈವಸ್ಥಾನ, ಇತಿಹಾಸದ ಜತೆಗೆ ಪ್ರಸಕ್ತ ಅಂಕಿ-ಅಂಶಗಳನ್ನು ದಾಖಲೆ ಹಾಗೂ ಚಿತ್ರಗಳನ್ನು ಗ್ರಾಮ, ತಾಲೂಕು ಸಮಿತಿಗೆ ಸಂಗ್ರಹಿಸಿದ ಮಾಹಿತಿಯನ್ನು ಜಿಲ್ಲಾ ಸಮಿತಿಯ ಮೂಲಕ ರಾಜ್ಯಕ್ಕೆ ಸಲ್ಲಿಕೆ ಮಾಡಲಿದೆ.

ಸರ್ವೇಗೆ ಅನುದಾನ :

ಸರ್ವೇ ನಡೆಸಲು ಪ್ರತೀ ಗ್ರಾ.ಪಂ.ಗೆ 30,000 ರೂ., ತಾ.ಪಂ., 80,000 ರೂ., ಜಿ.ಪಂ. 2 ಲ.ರೂ. ಸರಕಾರ ನೀಡಿದೆ. ಜಿಲ್ಲೆಯಲ್ಲಿ ಬೆಂಗಳೂರಿನ ಸಂಸ್ಥೆಯೊಂದು ಸ್ಥಳೀಯರನ್ನೊಳಗೊಂಡ ಸಮಿತಿ ರಚಿಸಿ ವರದಿ ತಯಾರಿಸಿದೆ.

ಗ್ರಾ.ಪಂ., ತಾ.ಪಂ. ಹಾಗೂ ಜಿ.ಪಂ. ಜೀವ ವೈವಿಧ್ಯ ಪಟ್ಟಿಯನ್ನು ಈಗಾಗಲೇ ಸರಕಾರಕ್ಕೆ ಸಲ್ಲಿಸಲಾಗಿದೆ. ವರದಿಗೆ ಸರಕಾರದಿಂದ ಅನುಮೋದನೆ ಸಿಗಬೇಕಿದೆ.ಕಿರಣ್‌ ಫ‌ಡ್ನೇಕರ್‌, ಜಿ.ಪಂ. ಉಪಕಾರ್ಯದರ್ಶಿ, ಉಡುಪಿ

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

3-mit

Manipal MIT: ಅಂತಾರಾಷ್ಟ್ರೀಯ ಕಾರ್ಯಾಗಾರ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.