ತರಾತುರಿಯಲ್ಲಿ ತಂಬಾಕು ಹರಾಜು ಪ್ರಕ್ರಿಯೆ | ಸಂಸದ ಪ್ರತಾಪ್ ಸಿಂಹಗೆ ರೈತರಿಂದ ಘೇರಾವ್


Team Udayavani, Sep 24, 2021, 8:32 PM IST

bhjgutyi

ಪಿರಿಯಾಪಟ್ಟಣ: ಹರಾಜು ಪ್ರಕ್ರಿಯೆಗೆ ಚಾಲನೆ ನೀಡಲು ಆಗಮಿಸಿದ್ದ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಸಂಸದ ಸಿ.ಹೆಚ್.ವಿಜಯಶಂಕರ್ ಅವರನ್ನು ರೈತರು ತರಾಟೆಗೆ ತೆಗೆದುಕೊಂಡು ಘೇರಾವ್ ಹಾಕಿದ  ಘಟನೆ ಶುಕ್ರವಾರ ನಡೆಯಿತು.

ಇಂದು ತಾಲ್ಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಸೆ.26 ರಂದು ಹರಾಜು ಪ್ರಕ್ರಿಯೆಯನ್ನು ಆರಂಭಿಸುವುದಾಗಿ ಮಂಡಳಿಯ ಅಧಿಕಾರಿಗಳು ಮಾಹಿತಿ ನೀಡಿದ್ದರೂ ಸಂಸದ ಪ್ರತಾಪ್ ಸಿಂಹ ಶುಕ್ರವಾರ ಬೆಳಗ್ಗೆ 7.30ಕ್ಕೆ  ಹರಾಜು ಪ್ರಕ್ರಿಯೆ ಆರಂಭಿಸುವಂತೆ ತಂಬಾಕು ಮಂಡಳಿಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅದರಂತೆ ಅಧಿಕಾರಿಗಳು ಹರಾಜು ಪ್ರಕ್ರಿಯೆಯನ್ನು ತರಾತುರಿಯಲ್ಲಿ ಆರಂಭಿಸಿದರು. ಆರಂಭದಲ್ಲಿ ರೂ.185 ಕ್ಕೆ ನಿಗದಿ ಮಾಡಿ ನಂತರದ ಬೇಲುಗಳಿಗೆ ರೂ.182-183 ನಿಗದಿ ಮಾಡಿದಾಗ ಕೋಪಗೊಂಡ ರೈತರು ಸಂಸದ ಮತ್ತು ತಂಬಾಕು ಹರಾಜು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ರೈತರ ವಿರೋಧದಿಂದ ಕುಪಿತಗೊಂಡ ಸಂಸದರು ಯಾವುದೇ ಪ್ರತಿಕ್ರಿಯೆ ನೀಡದೆ ಹರಾಜು ಪ್ರಕ್ರಿಯೆಯಿಂದ ಹೊರ ನಡೆದರು.

ನಂತರ ಮಾರುಕಟ್ಟೆಯ ಹೊರಭಾಗದಲ್ಲಿ ಸಂಸದರನ್ನು ಸುತ್ತುವರಿದ ರೈತರು, ತರಾತುರಿ ಹರಾಜು ಪ್ರಕ್ರಿಯೆ ಏಕೆ. ರೈತರಿಗೆ ಇದರ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಕೋಪದಿಂದ ಉತ್ತರಿಸಿದ ಸಿಂಹ, ಇಂದು ಶುಭ ಶುಕ್ರವಾರ ಅದಕ್ಕಾಗಿ ಇಂದೇ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದರು. ಸಂಸದರ ಈ ಉತ್ತರಕ್ಕೆ ಮತ್ತಷ್ಟು ಕುಪಿತಗೊಂಡ ರೈತರು, ವೈಜ್ಞಾನಿಕ ಯುಗದಲ್ಲೂ ನಿಮಗೆ ಇಂಥ ಮೂಡನಂಭಿಕೆಗಳು ಬೇಕೆ, ನಿಮ್ಮ ಮೂಡನಂಬಿಕೆಯಿಂದ ರೈತರಿಗೆ ಹೊಟ್ಟೆ ತುಂಬುವುದಿಲ್ಲ ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಗುಂಟೂರು ಶಾಸಕ ಮುಸ್ತಫಾ, ಮಾಜಿ ಸಂಸದ ವಿಜಯಶಂಕರ್, ತಂಬಾಕು ಮಂಡಳಿಯ ಚೇರ್ಮೆನ್ ರಘುನಾಥ್ ಬಾಬು, ಮೈಮುಲ್ ಅಧ್ಯಕ್ಷ ಪ್ರಸನ್ನ, ತಂಬಾಕು ಮಂಡಳಿ ಪ್ರಾದೇಶಿಕ ವ್ಯವಸ್ಥಾಪಕ ಮಾರಣ್ಣ, ಹರಾಜು ಅಧೀಕ್ಷಕ ಅಮಲ್ ಡಿ. ಶಾಮ್, ಪ್ರಭಾಕರನ್, ಸಿದ್ದರಾಜು, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಲೋಕೇಶ್‌ರಾಜೇ ಅರಸ್,  ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಸಿ.ವೀರಭಧ್ರ,  ಬೆಮ್ಮತ್ತಿಚಂದ್ರು, ಮುಖಂಡರಾದ ಕೌಲನಹಳ್ಳಿ ಸೋಮಶೇಖರ್, ಆರ್.ಟಿ. ಸತೀಶ್,  ಬಿ.ವಿ.ಜವರೇಗೌಡ, ಚೌತಿಶಂಕರ್,  ಕಗ್ಗುಂಡಿ ಶಿವರಾಂ, ಈಚೂರು ಲೋಕೇಶ್, ಪ್ರಕಾಶ್‌ರಾಜ್ ಅರಸ್ ಹಾಜರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.