ಬೆಲೆ ಕುಸಿತ |ಬಾಳೆ ಗೊನೆ ತಿಪ್ಪೆಗೆಸೆದ ರೈತ

ಬೆಲೆ ಕುಸಿತಗೊಂಡ ಹಿನ್ನೆಲೆ 3 ಎಕರೆಯಲ್ಲಿ ಬೆಳೆದಿದ್ದ ಫಸಲು ಗೊಬ್ಬರ ಮಾಡಲು ನಿರ್ಧಾರ

Team Udayavani, Sep 26, 2021, 8:07 PM IST

xfgsedre

ವರದಿ: ಮಂಜುನಾಥ ಎಚ್‌. ಕುಂಬಳೂರ

ರಾಣಿಬೆನ್ನೂರ: ತಾಲೂಕಿನ ಮಾಕನೂರ ಗ್ರಾಮದ ರೈತ ಶಿವನಗೌಡ ನಾಗಪ್ಪ ಮುದಿಗೌಡ್ರ ತನ್ನ 3 ಎಕರೆ ಜಮೀನಿನಲ್ಲಿ ಬಾಳೆ ಬೆಳೆದಿದ್ದು, ಫಸಲು ಉತ್ತಮವಾಗಿ ಬಂದಿದೆ. ಆದರೆ, ಬೆಲೆ ಕುಸಿತಗೊಂಡು ಕೇಳುವವರಿಲ್ಲದಂತಾಗಿದೆ. ಹಾಗಾಗಿ, ಎಲ್ಲ ಬಾಳೆ ಗೊನೆಗಳನ್ನು ತಿಪ್ಪೆಗೆ ಹಾಕಿ ಹಸಿರು ಗೊಬ್ಬರ ತಯಾರಿಸಲು ಮುಂದಾಗಿದ್ದಾರೆ.

ಬಾಳೆ ಸಸಿ ನಾಟಿ ಮಾಡುವುದರಿಂದ ಹಿಡಿದು ಗೊಬ್ಬರ, ಕ್ರಿಮಿನಾಶಕ, ಕೊಯ್ಲು, ಕೂಲಿ ಆಳಿನ ಖರ್ಚು ಸೇರಿ 1ಲಕ್ಷಕ್ಕೂ ಅ ಧಿಕ ಹಣ ಖರ್ಚು ತಗುಲುತ್ತಿದೆ. ಪ್ರಸ್ತುತ ಬೆಲೆ ಕುಸಿದ ಕಾರಣ ಕೆಜಿಗೆ 3 ರೂ. ಇದೆ. ಅದನ್ನು ವ್ಯಾಪಾರಸ್ಥರು ಕೇಳುತ್ತಿಲ್ಲ. ಇದರಿಂದ ಅಸಹಾಯಕನಾಗಿದ್ದೇನೆ. ಒಂದು ಎಕರೆಗೆ 25 ಟನ್‌ ಬಂದರೂ 75 ಸಾವಿರ ರೂ. ಆಗುತ್ತದೆ. ಅದಕ್ಕೂ ಬೇಡಿಕೆ ಇಲ್ಲ. ಮಾಡಿದ ಖರ್ಚಿಗಿಂತ ಆದಾಯ ಕಡಿಮೆಯಾಗುವುದರಿಂದ ವ್ಯರ್ಥ ಶ್ರಮ ಹಾಕುವುದು ಬೇಡ ಎಂದು ಭಾವಿಸಿ ಎಲ್ಲ ಬಾಳೆ ಗೊನೆಗಳನ್ನು ತಿಪ್ಪೆಗೆ ಹಾಕಲು ಮುಂದಾಗಿದ್ದೇನೆ ಎಂದು ರೈತ ಶಿವನಗೌಡ “ಉದಯವಾಣಿ’ ತಿಳಿಸಿದರು.

ರೈತರ ಬದುಕು ಒಂದಿಲ್ಲೊಂದು ಸಂಕಷ್ಟದಲ್ಲಿ ಸಿಲುಕಿ ಬೆಂಡಾಗುತ್ತಲೇ ಇದೆ. ಕೊರೊನಾ ಮಹಾಮಾರಿ ರೈತರ ಬದುಕಿನಲ್ಲಿ ಕರಿನೆರಳು ಬೀರಿದರೆ, ಅತಿವೃಷ್ಟಿ ಅಥವಾ ಅನಾವೃಷ್ಟಿ, ಉತ್ತಮವಾಗಿ ಬಂದ ಫಸಲಿಗೆ ಬೆಲೆ ಸಿಗದೆ ಮಾಡಿದ ಖರ್ಚು ಕೂಡ ಬಾರದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನು ಮೆಟ್ಟಿ ನಿಲ್ಲಲು ರೈತರು ವೈಜ್ಞಾನಿಕ ಕೃಷಿಯತ್ತ ಸಾಗಬೇಕಿದೆ.

ರೈತ ತನ್ನ ಒಟ್ಟು ಜಮೀನಿನಲ್ಲಿ ಸಮಗ್ರ ಕೃಷಿ ಅಳವಡಿಸಿಕೊಳ್ಳುವುದು ಉತ್ತಮ. ಜೋಳ, ರಾಗಿ, ನವಣಿ, ತೊಗರಿ, ಹೆಸರು, ಹಲಸಂದಿ, ಹತ್ತಿ, ತರಕಾರಿ ಬೆಳೆಗಳು ಸೇರಿದಂತೆ ಎಲ್ಲ ವಿಧದ ಬೆಳೆಗಳನ್ನು ಬೆಳೆದಲ್ಲಿ ಇವುಗಳಲ್ಲಿ ಕೆಲವು ಬೆಳೆಗಳಿಗೆ ಬೆಲೆ ಕುಸಿಯಬಹುದು. ಆದರೆ ಎಲ್ಲ ಬೆಳೆಗಳಿಗೂ ಬೆಲೆ ಕುಸಿಯಲು ಸಾಧ್ಯವಿಲ್ಲ. ಒಬ್ಬ ರೈತ ಒಂದೇ ಬೆಳೆಗೆ ತನ್ನ ಎಲ್ಲ ಜಮೀನನ್ನು ಉಪಯೋಗಿಸಿದಲ್ಲಿ ಈ ವೇಳೆ ಬೆಲೆ ಕುಸಿದರೆ ದಿಕ್ಕು ತೋಚದಂತಾಗಿ ಮಂಕಾಗುತ್ತಾನೆ. ಇದಕ್ಕೆ ಉದಾಹರಣೆಗೆ ರಾಣಿಬೆನ್ನೂರ ತಾಲೂಕಿನ ಮಾಕನೂರ ಗ್ರಾಮದ ರೈತನ ಬಾಯಿಗೆ ಬಂದ ತುತ್ತು ಕೈಗೆ ಬಾರದಂತಾಗಿ ಅಂದಾಜು 3 ಲಕ್ಷ ರೂ. ಮೌಲ್ಯದ ಸುಮಾರು 2.25 ಟನ್‌ ಬಾಳೆ ನಷ್ಟವಾಗಿ ಸಂಕಷ್ಟ ಎದುರಿಸುವಂತಾಗಿದೆ.

ಇತ್ತ ತೋಟಗಾರಿಕಾ ಇಲಾಖೆ ಅಧಿಕಾರಿಗಳು ರೈತನ ಬಾಳೆ ತೋಟಕ್ಕೆ ಭೇಟಿ ನೀಡಿ ರೈತನ ಸಂಕಷ್ಟಕ್ಕೆ ನೆರವಾಗುವರೋ ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.