ಉಪ ಚುನಾವಣೆ: ಮೂರೂ ಪಕ್ಷಗಳಿಗೆ ಸತ್ವಪರೀಕ್ಷೆ


Team Udayavani, Sep 29, 2021, 6:45 AM IST

ಉಪ ಚುನಾವಣೆ: ಮೂರೂ ಪಕ್ಷಗಳಿಗೆ ಸತ್ವಪರೀಕ್ಷೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿ ರುವ ಬೆನ್ನಲ್ಲೇ ಎದುರಾಗಿರುವ ಅಲ್ಪಕಾಲಿಕ ಎರಡು ಕ್ಷೇತ್ರಗಳ ಉಪ ಚುನಾ
ವಣೆ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ.

ಹಾನಗಲ್‌ ಹಾಗೂ ಸಿಂಧಗಿ ಕ್ಷೇತ್ರಗಳ ಉಪ ಚುನಾವಣೆ ವಿಶೇಷವಾಗಿ ಸಿಎಂ ಬೊಮ್ಮಾಯಿ ಅವರಿಗೆ ಸತ್ವಪರೀಕ್ಷೆ ಎಂದೇ ಹೇಳ ಬಹುದು. ಇನ್ನು ಪ್ರಮುಖ ವಿಪಕ್ಷವಾಗಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕೂಡ ಈ ಚುನಾವಣೆಯನ್ನು ಸವಾ ಲಾಗಿಯೇ ಸ್ವೀಕರಿಸಿವೆ.

ಬಣ ರಾಜಕೀಯ, ಜಾತಿ ರಾಜಕೀಯ ಹಾಗೂ ಮುಂದಿನ ಸಿಎಂ ಯಾರು ಎಂಬ ಗುಂಗಿನಿಂದ ಇನ್ನೂ ಹೊರಬಾರದ ಕಾಂಗ್ರೆಸ್‌ಗೆ ಎರಡು ಕ್ಷೇತ್ರಗಳ ಚುನಾವಣೆಯಲ್ಲಿ ಅಸ್ತಿತ್ವ ಸಾಬೀತುಪಡಿಸಬೇಕಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರಿಗೂ ಉಪ ಚುನಾವಣೆ ಪ್ರತಿಷ್ಠೆಯೇ ಆಗಿದೆ. ಸಿಂದಗಿಯಲ್ಲಿ ಆಪರೇಷನ್‌ ಹಸ್ತ ಕಾರ್ಯಾಚರಣೆ ಮೂಲಕ ಜೆಡಿಎಸ್‌ನ ಮಾಜಿ ಸಚಿವ ಎಂ.ಸಿ.ಮನಗೊಳಿ ಪುತ್ರ ಅಶೋಕ್‌ ಮನಗೊಳಿ ಕರೆತಂದು ಟಿಕೆಟ್‌ ಭರವಸೆ ನೀಡಲಾಗಿದೆ.

ಜೆಡಿಎಸ್‌ನದ್ದೇ ಆತಂಕ
ಎರಡು ಕ್ಷೇತ್ರಗಳ ಉಪ ಚುನಾವಣೆ ಯಲ್ಲಿ ಕಾಂಗ್ರೆಸ್‌ಗೆ ಜೆಡಿಎಸ್‌ನ ಮತ ವಿಭಜನೆ ಬಗ್ಗೆಯೇ ಆತಂಕವಿದೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕಿ ಟಕ್ಕರ್‌ ಕೊಟ್ಟಿದ್ದ ಜೆಡಿಎಸ್‌ ಇದೀಗ ಹಾನಗಲ್‌ನಲ್ಲೂ ಮುಸ್ಲಿಂ ಅಭ್ಯರ್ಥಿ ಘೋಷಿಸಿದೆ. ಇದು ಕೈ ನಾಯಕರ ನಿದ್ದೆಗೆಡಿಸಿದೆ.
ಟಿಕೆಟ್‌ಗಾಗಿ ಪೈಪೋಟಿ ಹಾನಗಲ್‌ ಕ್ಷೇತ್ರದ ಟಿಕೆಟ್‌ಗಾಗಿ ಬಿಜೆಪಿಯಲ್ಲಿ ಪೈಪೋಟಿ ಏರ್ಪಟ್ಟಿದೆ.

ಇದನ್ನೂ ಓದಿ:ಡಿಜಿಟಲ್‌ ಇಂಡಿಯಾ ಮೇಲ್ಪರ್ಜೆಗೆ?

ಉದಾಸಿ ಕುಟುಂಬದವರಿಗೆ ಟಿಕೆಟ್‌ ನೀಡದೇ ಹೋದರೆ, ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪರ್ಧೆ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಲು ವಿಜಯೇಂದ್ರ ಪ್ರಯತ್ನ ನಡೆಸುತ್ತಿರುವುದರಿಂದ, ಕೊನೇ ಘಳಿಗೆಯಲ್ಲಿ ಸ್ಪರ್ಧೆಗಿಳಿದರೂ ಅಚ್ಚರಿಯಿಲ್ಲ.

ಜೆಡಿಎಸ್‌ ರಣತಂತ್ರದಿಂದ ಕೈಗೆ ಶಾಕ್‌?
ಜೆಡಿಎಸ್‌ ಕೊನೇ ಕ್ಷಣದಲ್ಲಿ ತನ್ನ ರಣತಂತ್ರ ಬದಲಿಸಿದ್ದು, ಎದುರಾಳಿ ಗಳಿಗೆ (ಕಾಂಗ್ರೆಸ್‌ಗೆ ಹೆಚ್ಚು) ಸಣ್ಣ ಶಾಕ್‌’ ನೀಡಿದೆ. ಮೇಲ್ನೋಟಕ್ಕೆ ಇದು ಸಮಾನ ಅಂತರ ಕಾಯ್ದುಕೊಳ್ಳುವ ನಡೆಯಂತೆ ಕಂಡರೂ, ಜೆಡಿಎಸ್‌ನ ಈ ತೀರ್ಮಾನವು ಕಾಂಗ್ರೆಸ್‌ಗೆ ಒಳಏಟು ನೀಡುವ ಸಾಧ್ಯತೆಗಳೇ ಹೆಚ್ಚು. ಸಿಂದಗಿಯಲ್ಲಿ ಅಶೋಕ ಮನಗೂಳಿ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ನಿರ್ಧರಿಸಿದ ಬಳಿಕ ಮತ್ತೆ ನಿರ್ಧಾರ ಬದಲಿಸಿದ ಜೆಡಿಎಸ್‌, ಸ್ಪರ್ಧೆಗಿಳಿಯುವುದಾಗಿ ಪ್ರಕಟಿಸಿದೆ. ಇದು ತಮ್ಮ ಅಭ್ಯರ್ಥಿಯನ್ನು ಕರೆದು ಕೊಂಡು ಹೋಗಿರುವ ಕಾಂಗ್ರೆಸ್‌ ವಿರುದ್ಧ ಸೇಡು ತೀರಿಸಿಕೊಳ್ಳುವ ತಂತ್ರವೂ ಆಗಿದೆ. ಆದರೆ, ಯಾವ ಅಭ್ಯರ್ಥಿ ಕಣಕ್ಕಿಳಿಸಲಿದೆ ಎಂಬುದು ನಿಗೂಢ. ಜೆಡಿಎಸ್‌ನ ಈ ನಡೆ ಪರೋಕ್ಷವಾಗಿ ಮತ ವಿಭಜನೆಯಿಂದ ಬಿಜೆಪಿಗೆ ಅನುಕೂಲ ಆಗುವ ಸಾಧ್ಯತೆಗಳು ಹೆಚ್ಚಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಟಾಪ್ ನ್ಯೂಸ್

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.